ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕರೂಪ ಪಠ್ಯದಿಂದ ವೈವಿಧ್ಯತೆಗೆ ಪೆಟ್ಟು: ಕೆ.ದೊರೈರಾಜ್

Last Updated 6 ಜೂನ್ 2020, 17:13 IST
ಅಕ್ಷರ ಗಾತ್ರ

ತುಮಕೂರು: ಏಕರೂಪ ಪಠ್ಯಕ್ರಮ ಜಾರಿಗೊಳಿಸಿದರೆ ವಿಶ್ವವಿದ್ಯಾಲಯಗಳ ಸ್ವಾಯತ್ತತೆ, ಸ್ಥಳೀಯ ಸಾಂಸ್ಕೃತಿಕ ಬಹುತ್ವಕ್ಕೆ ಧಕ್ಕೆಯಾಗಲಿದೆ. ಇಂತಹ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ನಿವೃತ್ತ ಪ್ರಾಂಶುಪಾಲ ಪ್ರೊ.ಜಿ.ಎಂ.ಶ್ರೀನಿವಾಸಯ್ಯ, ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಕೆ.ದೊರೈರಾಜ್ ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳೊಂದಿಗೆ ನಿಕಟ ಸಂಪರ್ಕ ಹೊಂದಿರುವ ಪ್ರಾಧ್ಯಾಪಕರು, ಶಿಕ್ಷಣ ತಜ್ಞರು ಸೇರಿ ವಿದ್ಯಾರ್ಥಿ ಕೇಂದ್ರಿತ ಪಠ್ಯ ರಚನೆಗೆ ಹಾಗೂ ಸ್ಥಳೀಯ ವಿಚಾರಗಳಿಗೆ ಒತ್ತುನೀಡುತ್ತಿದ್ದರು. ಏಕರೂಪ ಪಠ್ಯ ಬಂದರೆ ಸ್ಥಳೀಯ ಸಂಸ್ಕೃತಿ, ಚರಿತ್ರೆ, ಸಾಮಾಜಿಕ ವಿಷಯಗಳು ಮಾಯವಾಗಲಿವೆ ಎಂದು ಜಂಟಿ ಹೇಳಿಕೆಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ಉನ್ನತ ಶಿಕ್ಷಣದಲ್ಲಿ ಏಕರೂಪದ ಪಠ್ಯಕ್ರಮ ಅಳವಡಿಕೆಗೆ ಮುಂದಾಗಿರುವುದು ವಿಶ್ವವಿದ್ಯಾಲಯಗಳ ಸ್ವಾಯತ್ತತೆಗೆ ಕುತ್ತು ಬರಲಿದೆ. ವಿ.ವಿ.ಗಳಲ್ಲಿರುವ ಪ್ರಾಧ್ಯಾಪಕರು, ಶಿಕ್ಷಣ ತಜ್ಞರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದಂತಾಗುತ್ತದೆ. ವಿ.ವಿ.ಗಳ ವೈವಿಧ್ಯತೆ, ಉನ್ನತ ಶಿಕ್ಷಣದ ವಿಕೇಂದ್ರೀಕರಣಕ್ಕೆ ವಿರುದ್ಧವಾಗಿದೆ. ಮುಂದೆ ಒಂದು ದೇಶ, ಒಂದು ಪಠ್ಯಕ್ರಮ, ಒಂದು ಪರೀಕ್ಷಾ ವಿಧಾನ ಎಂದಾದರೆ ಗ್ರಾಮೀಣ ಪ್ರದೇಶದ ಕೋಟ್ಯಂತರ ಬಡ ವಿದ್ಯಾರ್ಥಿ ಸಮುದಾಯ ಉನ್ನತ ಶಿಕ್ಷಣ ಪಡೆಯುವುದರಿಂದ ವಂಚಿತವಾಗಲಿದೆ ಎಂದು ಎಚ್ಚರಿಸಿದ್ದಾರೆ.

‘ಒಂದು ಕಡೆ ಕುಳಿತು ಪಠ್ಯಕ್ರಮ ರೂಪಿಸುವುದರಿಂದ ಪ್ರಾದೇಶಿಕ ವೈವಿಧ್ಯ ಮಾಯವಾಗಿ ವಿದ್ಯಾರ್ಥಿಗಳ ಜ್ಞಾನ ವಿಕಾಸ ಕುಂಠಿತಗೊಳ್ಳುತ್ತದೆ. ಏಕರೂಪದ ಪಠ್ಯವೇ ಅವೈಜ್ಞಾನಿಕ. ಯಾವುದೇ ಸರ್ಕಾರಗಳು ತಮ್ಮ ಹಿಡನ್ ಅಜೆಂಡಾವನ್ನು ಪಠ್ಯದಲ್ಲಿ ಅಳವಡಿಸುವುದನ್ನು ಕೈಬಿಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT