<p><strong>ಪಟ್ಟನಾಯಕನಹಳ್ಳಿ:</strong> ಇಲ್ಲಿನ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠಕ್ಕೆ ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಭೇಟಿ ನೀಡಿ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಆಶೀರ್ವಾದ ಪಡೆದರು.</p>.<p>ಬೆಳಗ್ಗೆ 11.30ರ ಸುಮಾರಿಗೆ ಆಗಮಿಸಿ ಕ್ಷೇತ್ರದ ಓಂಕಾರೇಶ್ವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ನಂತರ ಮಾತನಾಡಿ, ‘ರಾಜ್ಯದ ದನಿಯಾಗಿ ಕೇಂದ್ರ ಸರ್ಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತೇನೆ. ಒಕ್ಕೂಟದ ವ್ಯವಸ್ಥೆ ಭಾಗವಾಗಿ ಕೇಂದ್ರ ಸರ್ಕಾರದ ಅನುದಾನವನ್ನು ರಾಜ್ಯಕ್ಕೆ ಹೆಚ್ಚಿನ ಮಟ್ಟದಲ್ಲಿ ತರುತ್ತೇನೆ’ ಎಂದರು.</p>.<p>ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ.ಸುರೇಶ್ ಬಾಬು, ವಿಧಾನಪರಿಷತ್ ಸದಸ್ಯ ಚಿದಾನಂದ್ ಗೌಡ, ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಶಾಸಕ ತಿಮ್ಮರಾಯಪ್ಪ, ವೀರಭದ್ರಯ್ಯ, ಸತ್ಯಪ್ರಕಾಶ್, ಅರ್.ಉಗ್ರೇಶ್, ಎಸ್.ಆರ್.ಗೌಡ, ರಾಮಕೃಷ್ಣ, ತಿಪ್ಪೇಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ಟನಾಯಕನಹಳ್ಳಿ:</strong> ಇಲ್ಲಿನ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠಕ್ಕೆ ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಭೇಟಿ ನೀಡಿ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಆಶೀರ್ವಾದ ಪಡೆದರು.</p>.<p>ಬೆಳಗ್ಗೆ 11.30ರ ಸುಮಾರಿಗೆ ಆಗಮಿಸಿ ಕ್ಷೇತ್ರದ ಓಂಕಾರೇಶ್ವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ನಂತರ ಮಾತನಾಡಿ, ‘ರಾಜ್ಯದ ದನಿಯಾಗಿ ಕೇಂದ್ರ ಸರ್ಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತೇನೆ. ಒಕ್ಕೂಟದ ವ್ಯವಸ್ಥೆ ಭಾಗವಾಗಿ ಕೇಂದ್ರ ಸರ್ಕಾರದ ಅನುದಾನವನ್ನು ರಾಜ್ಯಕ್ಕೆ ಹೆಚ್ಚಿನ ಮಟ್ಟದಲ್ಲಿ ತರುತ್ತೇನೆ’ ಎಂದರು.</p>.<p>ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ.ಸುರೇಶ್ ಬಾಬು, ವಿಧಾನಪರಿಷತ್ ಸದಸ್ಯ ಚಿದಾನಂದ್ ಗೌಡ, ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಶಾಸಕ ತಿಮ್ಮರಾಯಪ್ಪ, ವೀರಭದ್ರಯ್ಯ, ಸತ್ಯಪ್ರಕಾಶ್, ಅರ್.ಉಗ್ರೇಶ್, ಎಸ್.ಆರ್.ಗೌಡ, ರಾಮಕೃಷ್ಣ, ತಿಪ್ಪೇಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>