<p><strong>ತುಮಕೂರು:</strong> ಸಾಧನೆಗೆ ವ್ಯಕ್ತಿಯ ಕ್ರಿಯಾಶೀಲತೆ ಮತ್ತು ಬುದ್ಧಿಮತ್ತೆಯೇ ಮಾನದಂಡಗಳಾಗಬೇಕೇ ಹೊರತು ಕುಲ-ಧರ್ಮಗಳಲ್ಲ ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೈ.ಎಸ್ ಸಿದ್ದೇಗೌಡ ಹೇಳಿದರು.</p>.<p>ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ವಿಶ್ವವಿದ್ಯಾಲಯದ ಸಾವಯವ ರಸಾಯನ ವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿ ಸೋಮವಾರ ನಡೆದ ‘ಅಡ್ವಾನ್ಸಸ್ ಇನ್ ಕೆಮಿಕಲ್ ಸೈನ್ಸಸ್’ ಕುರಿತ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ವಿಜ್ಞಾನ ಕ್ಷೇತ್ರದಲ್ಲಿ ವಿಜ್ಞಾನಿಗಳು ಹಲವು ಮೈಲಿಗಲ್ಲುಗಳನ್ನು ಸಾಧಿಸಿದ್ದಾರೆ. ಆದರೂ ವಿಜ್ಞಾನ-ತಂತ್ರಜ್ಞಾನ ಕ್ಷೇತ್ರದಲ್ಲಿ ಇಂದು ಹೊಸತು ಎನಿಸಿದ ಜ್ಞಾನ ನಾಳೆಗೆ ಹಳೆಯದಾಗುತ್ತದೆ. ಸಂಶೋಧನೆಗಳು ಕ್ರಿಯಾಶೀಲ ಹಾಗೂ ಸಮಾಜಮುಖಿಯಾಗಿ ಆಗಬೇಕಿದೆ ಎಂದರು.</p>.<p>ರಸಾಯನ ವಿಜ್ಞಾನ ಜೀವನಕ್ಕೂ ಅನ್ವಯವಾಗುತ್ತದೆ. ಆಹಾರದಲ್ಲಿ ರಾಸಾಯನಿಕಗಳ ಪಾತ್ರ ಮಹತ್ವದ್ದು. ವಿಜ್ಞಾನ ಇನ್ನು ಬೆಳವಣಿಗೆಯಾಗದ ಕಾಲದಲ್ಲಿ ಮಾನವ ಆರೋಗ್ಯವಾಗಿಯೇ ಇದ್ದ. ಆದರೆ, ವಿಜ್ಞಾನದ ಬೆಳವಣಿಗೆಯ ಜೊತೆಗೆ ಆರೋಗ್ಯ ಕ್ಷೀಣಿಸುತ್ತಿದೆ. ಇದನ್ನು ಅವಲೋಕಿಸಬೇಕು ಎಂದು ಹೇಳಿದರು.</p>.<p>ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಕಾರ್ಯನಿರ್ವಹಣಾಧಿಕಾರಿ ಡಾ. ಎ.ಎಂ.ರಮೇಶ್, ‘ಭವಿಷ್ಯದಲ್ಲಿ ಸಂಶೋಧನೆಯಲ್ಲಿ ಮುಂದುವರಿಯಬೇಕಾದರೆ ವಿದ್ಯಾರ್ಥಿಗಳು ಇಂದಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು’ ಎಂದರು.</p>.<p>‘ಹೆಸರಾಂತ ವಿಜ್ಞಾನಿಗಳಿಂದ ಉಪನ್ಯಾಸ ಏರ್ಪಡಿಸುವ ಮೂಲಕ ಸಂಶೋಧನೆಯ ಹೊಸ ಆಯಾಮಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಇರಾದೆ ಅಕಾಡೆಮಿಗೆ ಇದೆ’ ಎಂದು ಹೇಳಿದರು.</p>.<p>ಹಿರಿಯ ಪ್ರಾಧ್ಯಾಪಕರಾದ ಪ್ರೊ.ಎನ್.ಸೂರ್ಯಪ್ರಕಾಶ್, ಪ್ರೊ.ವಿ.ರಾಮನಾಥನ್, ಪ್ರೊ.ಎಸ್.ರಘೋತ್ತಮ, ಪ್ರೊ.ಇ. ಕೃಷ್ಣಕುಮಾರ್ ವಿವಿಧ ವಿಷಯಗಳ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದ ಸಂಯೋಜಕ ಡಾ. ಎಸ್. ಶ್ರೀನಿವಾಸ, ಶೇಟ್ ಪ್ರಕಾಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಸಾಧನೆಗೆ ವ್ಯಕ್ತಿಯ ಕ್ರಿಯಾಶೀಲತೆ ಮತ್ತು ಬುದ್ಧಿಮತ್ತೆಯೇ ಮಾನದಂಡಗಳಾಗಬೇಕೇ ಹೊರತು ಕುಲ-ಧರ್ಮಗಳಲ್ಲ ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೈ.ಎಸ್ ಸಿದ್ದೇಗೌಡ ಹೇಳಿದರು.</p>.<p>ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ವಿಶ್ವವಿದ್ಯಾಲಯದ ಸಾವಯವ ರಸಾಯನ ವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿ ಸೋಮವಾರ ನಡೆದ ‘ಅಡ್ವಾನ್ಸಸ್ ಇನ್ ಕೆಮಿಕಲ್ ಸೈನ್ಸಸ್’ ಕುರಿತ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ವಿಜ್ಞಾನ ಕ್ಷೇತ್ರದಲ್ಲಿ ವಿಜ್ಞಾನಿಗಳು ಹಲವು ಮೈಲಿಗಲ್ಲುಗಳನ್ನು ಸಾಧಿಸಿದ್ದಾರೆ. ಆದರೂ ವಿಜ್ಞಾನ-ತಂತ್ರಜ್ಞಾನ ಕ್ಷೇತ್ರದಲ್ಲಿ ಇಂದು ಹೊಸತು ಎನಿಸಿದ ಜ್ಞಾನ ನಾಳೆಗೆ ಹಳೆಯದಾಗುತ್ತದೆ. ಸಂಶೋಧನೆಗಳು ಕ್ರಿಯಾಶೀಲ ಹಾಗೂ ಸಮಾಜಮುಖಿಯಾಗಿ ಆಗಬೇಕಿದೆ ಎಂದರು.</p>.<p>ರಸಾಯನ ವಿಜ್ಞಾನ ಜೀವನಕ್ಕೂ ಅನ್ವಯವಾಗುತ್ತದೆ. ಆಹಾರದಲ್ಲಿ ರಾಸಾಯನಿಕಗಳ ಪಾತ್ರ ಮಹತ್ವದ್ದು. ವಿಜ್ಞಾನ ಇನ್ನು ಬೆಳವಣಿಗೆಯಾಗದ ಕಾಲದಲ್ಲಿ ಮಾನವ ಆರೋಗ್ಯವಾಗಿಯೇ ಇದ್ದ. ಆದರೆ, ವಿಜ್ಞಾನದ ಬೆಳವಣಿಗೆಯ ಜೊತೆಗೆ ಆರೋಗ್ಯ ಕ್ಷೀಣಿಸುತ್ತಿದೆ. ಇದನ್ನು ಅವಲೋಕಿಸಬೇಕು ಎಂದು ಹೇಳಿದರು.</p>.<p>ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಕಾರ್ಯನಿರ್ವಹಣಾಧಿಕಾರಿ ಡಾ. ಎ.ಎಂ.ರಮೇಶ್, ‘ಭವಿಷ್ಯದಲ್ಲಿ ಸಂಶೋಧನೆಯಲ್ಲಿ ಮುಂದುವರಿಯಬೇಕಾದರೆ ವಿದ್ಯಾರ್ಥಿಗಳು ಇಂದಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು’ ಎಂದರು.</p>.<p>‘ಹೆಸರಾಂತ ವಿಜ್ಞಾನಿಗಳಿಂದ ಉಪನ್ಯಾಸ ಏರ್ಪಡಿಸುವ ಮೂಲಕ ಸಂಶೋಧನೆಯ ಹೊಸ ಆಯಾಮಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಇರಾದೆ ಅಕಾಡೆಮಿಗೆ ಇದೆ’ ಎಂದು ಹೇಳಿದರು.</p>.<p>ಹಿರಿಯ ಪ್ರಾಧ್ಯಾಪಕರಾದ ಪ್ರೊ.ಎನ್.ಸೂರ್ಯಪ್ರಕಾಶ್, ಪ್ರೊ.ವಿ.ರಾಮನಾಥನ್, ಪ್ರೊ.ಎಸ್.ರಘೋತ್ತಮ, ಪ್ರೊ.ಇ. ಕೃಷ್ಣಕುಮಾರ್ ವಿವಿಧ ವಿಷಯಗಳ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದ ಸಂಯೋಜಕ ಡಾ. ಎಸ್. ಶ್ರೀನಿವಾಸ, ಶೇಟ್ ಪ್ರಕಾಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>