<p><strong>ತುಮಕೂರು</strong>: ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಕೆ ಸಿಬ್ಬಂದಿಗೆ ಕಳೆದ ನಾಲ್ಕು ತಿಂಗಳಿನಿಂದ ಗೌರವಧನ ಪಾವತಿಯಾಗಿಲ್ಲ. ಸರ್ಕಾರದಿಂದ ಬರುವ ಹಣ ನಂಬಿ ಜೀವನ ಸಾಗಿಸುತ್ತಿದ್ದವರಿಗೆ ದಾರಿ ತೋಚದಂತಾಗಿದೆ.</p>.<p>ಯೋಜನಾ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಬಿಸಿಯೂಟ ಸಿಬ್ಬಂದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಗೌರವಧನ ಪಾವತಿಯಾಗಬೇಕಿದೆ. ನೌಕರರ ನಿರಂತರ ಹೋರಾಟದ ಫಲವಾಗಿ ಗೌರವ ಧನವನ್ನು ಈಚೆಗೆ ಹೆಚ್ಚಳ ಮಾಡಲಾಗಿದೆ. ಮುಖ್ಯ ಅಡುಗೆಯವರಿಗೆ ₹3,700, ಸಹಾಯಕರಿಗೆ ₹3,600ರಂತೆ ಪಾವತಿಯಾಗುತ್ತಿದೆ.</p>.<p>ಈ ವರ್ಷದ ಜೂನ್ನಲ್ಲಿ ಕೊನೆಯ ಬಾರಿಗೆ ಗೌರವ ಧನ ನೀಡಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ ಗೌರವ ಧನ ನೀಡಿಲ್ಲ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮೇ 15ರಿಂದ ಸಿಬ್ಬಂದಿ ತಮ್ಮ ಕೆಲಸಕ್ಕೆ ಹಾಜರಾಗಿದ್ದಾರೆ. ಆದರೆ, ಮೇ ತಿಂಗಳ ಗೌರವಧನ ಪಾವತಿಸುವಲ್ಲಿ ಸರ್ಕಾರ ಮೀನಮೇಷ ಎಣಿಸುತ್ತಿದೆ.</p>.<p>ವಿಧವೆಯರು, ವಿಚ್ಛೇದಿತರು, ಒಂಟಿ ಮಹಿಳೆಯರು ಹೆಚ್ಚಾಗಿ ಅಡುಗೆ ಕೆಲಸದಲ್ಲಿ ತೊಡಗಿಸಿಕೊಂಡಿದ್ದು, ಜೀವನ ನಿರ್ವಹಣೆಗಾಗಿ ಸರ್ಕಾರದಿಂದ ಬರುವ ಗೌರವ ಧನವನ್ನೇ ನಂಬಿದ್ದಾರೆ. ಪ್ರತಿ ತಿಂಗಳು ಹಣ ಬಿಡುಗಡೆ ಆಗದಿರುವುದು ಇವರನ್ನು ಸಂಕಷ್ಟಕ್ಕೆ ತಳ್ಳಿದೆ.</p>.<p>ಬಿಸಿಯೂಟ ತಯಾರಿಕೆ ಸಿಬ್ಬಂದಿಯಲ್ಲಿ ಕೆಲವರು ಬಾಡಿಗೆ ಮನೆಯಲ್ಲಿ ವಾಸವಿದ್ದು, ಬಾಡಿಗೆ ಹಣ ನೀಡಲು ಆಗದೆ ತೊಂದರೆ ಅನುಭವಿಸಿದ್ದಾರೆ. ದಸರಾ, ಗಣೇಶ ಚತುರ್ಥಿ, ದೀಪಾವಳಿ ಸಮಯದಲ್ಲಿ ಗೌರವ ಧನ ಪಾವತಿಯಾಗಬಹುದು ಎಂದು ಕಾಯುತ್ತಿದ್ದವರಿಗೆ ನಿರಾಸೆ ಎದುರಾಗಿತ್ತು.</p>.<p class="Subhead"><strong>ಪ್ರತಿಭಟನೆ</strong>: ಗೌರವ ಧನ ಪಾವತಿಸುವಂತೆ ಆಗ್ರಹಿಸಿ ನಗರದ ಜಿ.ಪಂ ಕಚೇರಿ ಆವರಣದಲ್ಲಿ ಸೋಮವಾರ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ) ವತಿಯಿಂದ ಪ್ರತಿಭಟನೆ ನಡೆಯಿತು. ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<p>ಮಕ್ಕಳ ವಿದ್ಯಾಭ್ಯಾಸ, ವಯೋವೃದ್ಧ ತಂದೆ- ತಾಯಂದಿರ ಆರೈಕೆ ಕಷ್ಟವಾಗಿದ್ದು, ತಡೆ ಹಿಡಿದಿರುವ ಗೌರವ ಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.</p>.<p>ಫೆಡರೇಷನ್ ರಾಜ್ಯ ಘಟಕದ ಅಧ್ಯಕ್ಷ ಹೊನ್ನಪ್ಪ ಮರೆಮ್ಮನವರ, ಕಾಂತರಾಜು, ಎ.ಬಿ.ಉಮಾದೇವಿ, ರಾಧಮ್ಮ, ಪುಷ್ಪಲತಾ, ಸಾವಿತ್ರಮ್ಮ, ವನಜಾಕ್ಷಿ, ಲಕ್ಷ್ಮಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಕೆ ಸಿಬ್ಬಂದಿಗೆ ಕಳೆದ ನಾಲ್ಕು ತಿಂಗಳಿನಿಂದ ಗೌರವಧನ ಪಾವತಿಯಾಗಿಲ್ಲ. ಸರ್ಕಾರದಿಂದ ಬರುವ ಹಣ ನಂಬಿ ಜೀವನ ಸಾಗಿಸುತ್ತಿದ್ದವರಿಗೆ ದಾರಿ ತೋಚದಂತಾಗಿದೆ.</p>.<p>ಯೋಜನಾ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಬಿಸಿಯೂಟ ಸಿಬ್ಬಂದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಗೌರವಧನ ಪಾವತಿಯಾಗಬೇಕಿದೆ. ನೌಕರರ ನಿರಂತರ ಹೋರಾಟದ ಫಲವಾಗಿ ಗೌರವ ಧನವನ್ನು ಈಚೆಗೆ ಹೆಚ್ಚಳ ಮಾಡಲಾಗಿದೆ. ಮುಖ್ಯ ಅಡುಗೆಯವರಿಗೆ ₹3,700, ಸಹಾಯಕರಿಗೆ ₹3,600ರಂತೆ ಪಾವತಿಯಾಗುತ್ತಿದೆ.</p>.<p>ಈ ವರ್ಷದ ಜೂನ್ನಲ್ಲಿ ಕೊನೆಯ ಬಾರಿಗೆ ಗೌರವ ಧನ ನೀಡಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ ಗೌರವ ಧನ ನೀಡಿಲ್ಲ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮೇ 15ರಿಂದ ಸಿಬ್ಬಂದಿ ತಮ್ಮ ಕೆಲಸಕ್ಕೆ ಹಾಜರಾಗಿದ್ದಾರೆ. ಆದರೆ, ಮೇ ತಿಂಗಳ ಗೌರವಧನ ಪಾವತಿಸುವಲ್ಲಿ ಸರ್ಕಾರ ಮೀನಮೇಷ ಎಣಿಸುತ್ತಿದೆ.</p>.<p>ವಿಧವೆಯರು, ವಿಚ್ಛೇದಿತರು, ಒಂಟಿ ಮಹಿಳೆಯರು ಹೆಚ್ಚಾಗಿ ಅಡುಗೆ ಕೆಲಸದಲ್ಲಿ ತೊಡಗಿಸಿಕೊಂಡಿದ್ದು, ಜೀವನ ನಿರ್ವಹಣೆಗಾಗಿ ಸರ್ಕಾರದಿಂದ ಬರುವ ಗೌರವ ಧನವನ್ನೇ ನಂಬಿದ್ದಾರೆ. ಪ್ರತಿ ತಿಂಗಳು ಹಣ ಬಿಡುಗಡೆ ಆಗದಿರುವುದು ಇವರನ್ನು ಸಂಕಷ್ಟಕ್ಕೆ ತಳ್ಳಿದೆ.</p>.<p>ಬಿಸಿಯೂಟ ತಯಾರಿಕೆ ಸಿಬ್ಬಂದಿಯಲ್ಲಿ ಕೆಲವರು ಬಾಡಿಗೆ ಮನೆಯಲ್ಲಿ ವಾಸವಿದ್ದು, ಬಾಡಿಗೆ ಹಣ ನೀಡಲು ಆಗದೆ ತೊಂದರೆ ಅನುಭವಿಸಿದ್ದಾರೆ. ದಸರಾ, ಗಣೇಶ ಚತುರ್ಥಿ, ದೀಪಾವಳಿ ಸಮಯದಲ್ಲಿ ಗೌರವ ಧನ ಪಾವತಿಯಾಗಬಹುದು ಎಂದು ಕಾಯುತ್ತಿದ್ದವರಿಗೆ ನಿರಾಸೆ ಎದುರಾಗಿತ್ತು.</p>.<p class="Subhead"><strong>ಪ್ರತಿಭಟನೆ</strong>: ಗೌರವ ಧನ ಪಾವತಿಸುವಂತೆ ಆಗ್ರಹಿಸಿ ನಗರದ ಜಿ.ಪಂ ಕಚೇರಿ ಆವರಣದಲ್ಲಿ ಸೋಮವಾರ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ) ವತಿಯಿಂದ ಪ್ರತಿಭಟನೆ ನಡೆಯಿತು. ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<p>ಮಕ್ಕಳ ವಿದ್ಯಾಭ್ಯಾಸ, ವಯೋವೃದ್ಧ ತಂದೆ- ತಾಯಂದಿರ ಆರೈಕೆ ಕಷ್ಟವಾಗಿದ್ದು, ತಡೆ ಹಿಡಿದಿರುವ ಗೌರವ ಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.</p>.<p>ಫೆಡರೇಷನ್ ರಾಜ್ಯ ಘಟಕದ ಅಧ್ಯಕ್ಷ ಹೊನ್ನಪ್ಪ ಮರೆಮ್ಮನವರ, ಕಾಂತರಾಜು, ಎ.ಬಿ.ಉಮಾದೇವಿ, ರಾಧಮ್ಮ, ಪುಷ್ಪಲತಾ, ಸಾವಿತ್ರಮ್ಮ, ವನಜಾಕ್ಷಿ, ಲಕ್ಷ್ಮಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>