<p><strong>ಚಿಕ್ಕನಾಯಕನಹಳ್ಳಿ</strong>: ಪಟ್ಟಣದ ಮೂಲಕ ಹಾದುಹೋಗುವ ಮೈಸೂರು-ಜೇವರ್ಗಿ ಹೆದ್ದಾರಿ ಮಾರ್ಗ ಮಧ್ಯದ ಆಲದಕಟ್ಟೆ, ಸಾಲ್ಕಟ್ಟೆ ಭಾಗದಲ್ಲಿ ಅಪಘಾತಗಳು ದಿನೇ, ದಿನೇ ಹೆಚ್ಚುತ್ತಿವೆ. ಈ ಹೆದ್ದಾರಿ ಅವೈಜ್ಞಾನಿಕವಾಗಿರುವುದೇ ಇದಕ್ಕೆ ಕಾರಣ ಎಂದು ಟ್ಯಾಕ್ಸಿ ಚಾಲಕರ ಸಂಘ ದೂರಿದೆ.</p>.<p>ಪಟ್ಟಣದಿಂದ ಹುಳಿಯಾರು ಮಾರ್ಗವಾಗಿ ಸಾಗುವ ಮೈಸೂರು-ಜೇವರ್ಗಿ ಹೆದ್ದಾರಿಯ ಎರಡು ಬದಿಯ ಪಥ ಸಮತಟ್ಟಾಗಿಲ್ಲ. ಎಡಬದಿ ರಸ್ತೆ ತುಸು ಎತ್ತರಕ್ಕಿದ್ದರೆ, ಬಲಬದಿ ಕೊಂಚ ತಗ್ಗಾಗಿದೆ. ಭಾರಿ ವಾಹನ, ಸರಕು ಸಾಗಣೆಯ ವಾಹನ ಏಕಾಏಕಿ ಒಂದು ಕಡೆಗೆ ವಾಲಿಕೊಂಡು ಆಯತಪ್ಪಿ ಪಲ್ಟಿ ಹೊಡೆಯುತ್ತಿವೆ.</p>.<p>ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗಿದ್ದು, ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಎಫ್.ಕೆ. ನದಾಫ್ ಈ ರಸ್ತೆಯಲ್ಲಿ ಜೀಪ್ ಚಾಲನೆ ಮಾಡಿ, ರಸ್ತೆ ನಿರ್ಮಾಣದ ಏರು-ಪೇರುಗಳನ್ನು ಅನುಭವಿಸಿದ್ದಾರೆ. ಟ್ಯಾಕ್ಸಿ ಚಾಲಕರ ಸಂಘ ಹಾಗೂ ಸ್ಥಳೀಯರ ಒತ್ತಾಯಕ್ಕೆ ಮಣಿದ ಪೊಲೀಸ್ ಇಲಾಖೆ ಮೇಲಧಿಕಾರಿಗಳು ಈ ರಸ್ತೆಗೆ ಸಂಬಂಧಿಸಿದ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ ಮೃತ್ಯುಂಜಯ ಮತ್ತು ರಸ್ತೆ ನಿರ್ಮಾಣ ಗುತ್ತಿಗೆದಾರ ಕಂಪನಿಗೆ ಪತ್ರ ಬರೆದಿದ್ದಾರೆ.</p>.<p>‘ಈ ರಸ್ತೆಯಲ್ಲಿ ಅಪಘಾತಗಳು ಹೆಚ್ಚುತ್ತಿವೆ. ವೈಜ್ಞಾನಿಕವಾಗಿ ರಸ್ತೆಯ ಮರುಪರಿಶೀಲನೆ ನಡೆಸಿ ಲೋಪಗಳನ್ನು ಶೀಘ್ರ ಸರಿಪಡಿಸಬೇಕು’ ಎಂದು ಪತ್ರದಲ್ಲಿ ಸೂಚಿಸಲಾಗಿದೆ.</p>.<p>ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೃತ್ಯುಂಜಯ ಪ್ರತಿಕ್ರಿಯಿಸಿ, ‘ಶೀಘ್ರವೇ ರಸ್ತೆ ಸಮರ್ಪಕ ದುರಸ್ತಿ ನಿರ್ವಹಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರ ವಹಿಸಲಾಗುವುದು’ ಎಂದಿದ್ದಾರೆ.</p>.<div><blockquote>ಸಾರ್ವಜನಿಕರು ರಸ್ತೆ ತೆರಿಗೆ ಟೋಲ್ ಸುಂಕವನ್ನೂ ಪಾವತಿಸುತ್ತೇವೆ. ಆದಾಗ್ಯೂ ವ್ಯವಸ್ಥಿತ ರಸ್ತೆ ಸಿಗುವುದು ಮರೀಚಿಕೆಯಾಗಿದೆ. ಇಂತಹ ಸಮತಟ್ಟಾಗಿ ಇಲ್ಲದ ರಸ್ತೆ ಸಂಚಾರ ಅಪಾಯಕ್ಕೆ ಆಹ್ವಾನ ನೀಡಿದಂತಿದೆ. ಇದಕ್ಕೆ ಹೊಣೆ ಯಾರು? </blockquote><span class="attribution">ಮಹಮದ್ ಹುಸೇನ್ ಗುಂಡಾ, ರಾಜ್ಯ ಟ್ಯಾಕ್ಸಿ ಚಾಲಕರ ಸಂಸ್ಥೆ ಜಂಟಿ ಕಾರ್ಯದರ್ಶಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕನಾಯಕನಹಳ್ಳಿ</strong>: ಪಟ್ಟಣದ ಮೂಲಕ ಹಾದುಹೋಗುವ ಮೈಸೂರು-ಜೇವರ್ಗಿ ಹೆದ್ದಾರಿ ಮಾರ್ಗ ಮಧ್ಯದ ಆಲದಕಟ್ಟೆ, ಸಾಲ್ಕಟ್ಟೆ ಭಾಗದಲ್ಲಿ ಅಪಘಾತಗಳು ದಿನೇ, ದಿನೇ ಹೆಚ್ಚುತ್ತಿವೆ. ಈ ಹೆದ್ದಾರಿ ಅವೈಜ್ಞಾನಿಕವಾಗಿರುವುದೇ ಇದಕ್ಕೆ ಕಾರಣ ಎಂದು ಟ್ಯಾಕ್ಸಿ ಚಾಲಕರ ಸಂಘ ದೂರಿದೆ.</p>.<p>ಪಟ್ಟಣದಿಂದ ಹುಳಿಯಾರು ಮಾರ್ಗವಾಗಿ ಸಾಗುವ ಮೈಸೂರು-ಜೇವರ್ಗಿ ಹೆದ್ದಾರಿಯ ಎರಡು ಬದಿಯ ಪಥ ಸಮತಟ್ಟಾಗಿಲ್ಲ. ಎಡಬದಿ ರಸ್ತೆ ತುಸು ಎತ್ತರಕ್ಕಿದ್ದರೆ, ಬಲಬದಿ ಕೊಂಚ ತಗ್ಗಾಗಿದೆ. ಭಾರಿ ವಾಹನ, ಸರಕು ಸಾಗಣೆಯ ವಾಹನ ಏಕಾಏಕಿ ಒಂದು ಕಡೆಗೆ ವಾಲಿಕೊಂಡು ಆಯತಪ್ಪಿ ಪಲ್ಟಿ ಹೊಡೆಯುತ್ತಿವೆ.</p>.<p>ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗಿದ್ದು, ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಎಫ್.ಕೆ. ನದಾಫ್ ಈ ರಸ್ತೆಯಲ್ಲಿ ಜೀಪ್ ಚಾಲನೆ ಮಾಡಿ, ರಸ್ತೆ ನಿರ್ಮಾಣದ ಏರು-ಪೇರುಗಳನ್ನು ಅನುಭವಿಸಿದ್ದಾರೆ. ಟ್ಯಾಕ್ಸಿ ಚಾಲಕರ ಸಂಘ ಹಾಗೂ ಸ್ಥಳೀಯರ ಒತ್ತಾಯಕ್ಕೆ ಮಣಿದ ಪೊಲೀಸ್ ಇಲಾಖೆ ಮೇಲಧಿಕಾರಿಗಳು ಈ ರಸ್ತೆಗೆ ಸಂಬಂಧಿಸಿದ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ ಮೃತ್ಯುಂಜಯ ಮತ್ತು ರಸ್ತೆ ನಿರ್ಮಾಣ ಗುತ್ತಿಗೆದಾರ ಕಂಪನಿಗೆ ಪತ್ರ ಬರೆದಿದ್ದಾರೆ.</p>.<p>‘ಈ ರಸ್ತೆಯಲ್ಲಿ ಅಪಘಾತಗಳು ಹೆಚ್ಚುತ್ತಿವೆ. ವೈಜ್ಞಾನಿಕವಾಗಿ ರಸ್ತೆಯ ಮರುಪರಿಶೀಲನೆ ನಡೆಸಿ ಲೋಪಗಳನ್ನು ಶೀಘ್ರ ಸರಿಪಡಿಸಬೇಕು’ ಎಂದು ಪತ್ರದಲ್ಲಿ ಸೂಚಿಸಲಾಗಿದೆ.</p>.<p>ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೃತ್ಯುಂಜಯ ಪ್ರತಿಕ್ರಿಯಿಸಿ, ‘ಶೀಘ್ರವೇ ರಸ್ತೆ ಸಮರ್ಪಕ ದುರಸ್ತಿ ನಿರ್ವಹಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರ ವಹಿಸಲಾಗುವುದು’ ಎಂದಿದ್ದಾರೆ.</p>.<div><blockquote>ಸಾರ್ವಜನಿಕರು ರಸ್ತೆ ತೆರಿಗೆ ಟೋಲ್ ಸುಂಕವನ್ನೂ ಪಾವತಿಸುತ್ತೇವೆ. ಆದಾಗ್ಯೂ ವ್ಯವಸ್ಥಿತ ರಸ್ತೆ ಸಿಗುವುದು ಮರೀಚಿಕೆಯಾಗಿದೆ. ಇಂತಹ ಸಮತಟ್ಟಾಗಿ ಇಲ್ಲದ ರಸ್ತೆ ಸಂಚಾರ ಅಪಾಯಕ್ಕೆ ಆಹ್ವಾನ ನೀಡಿದಂತಿದೆ. ಇದಕ್ಕೆ ಹೊಣೆ ಯಾರು? </blockquote><span class="attribution">ಮಹಮದ್ ಹುಸೇನ್ ಗುಂಡಾ, ರಾಜ್ಯ ಟ್ಯಾಕ್ಸಿ ಚಾಲಕರ ಸಂಸ್ಥೆ ಜಂಟಿ ಕಾರ್ಯದರ್ಶಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>