<p><strong>ತುಮಕೂರು:</strong> ಪರೀಕ್ಷಾ ಕೇಂದ್ರಿತವಾದ ಇಂದಿನ ಶಿಕ್ಷಣ ವ್ಯವಸ್ಥೆ ತೊಲಗಬೇಕು ಎಂದು ಪರಿಸರವಾದಿ ಸಿ.ಯತಿರಾಜು ಅಭಿಪ್ರಾಯಪಟ್ಟರು.</p>.<p>ನಗರದ ಕೆಎಸ್ಇಎಫ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಭಾನುವಾರ ಆಯೋಜಿಸಿದ್ದ ‘ನಮ್ಮ ಗೂಡಿನಿಂದ ಗುರಿಯ ಬೆನ್ನತ್ತಿ’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಕೋವಿಡ್ ಸಮಯದಲ್ಲಿ ಮಕ್ಕಳ ಕಲಿಕೆಯಲ್ಲಿ ಬಹು ದೊಡ್ಡ ಹಿನ್ನಡೆಯಾಗಿದೆ. ಆನ್ಲೈನ್ ಶಿಕ್ಷಣದ ವ್ಯಾಮೋಹ ಹೆಚ್ಚಾಯಿತು. ಭಾಷೆ ಕಲಿಕೆಯಲ್ಲಿನ ದೋಷಗಳನ್ನು ಗಮನಿಸಿ, ಸರಿಪಡಿಸುವವರೇ ಇಲ್ಲದಂತಾಗಿದ್ದಾರೆ. ಈ ಕಾಲವನ್ನು ಸತ್ಯೋತ್ತರ ಯುಗ ಎಂದು ಕರೆಯುತ್ತಾರೆ. ಸತ್ಯ ಬೇಕಾಗಿಲ್ಲ ಎಂಬುದೇ ಇದರ ಅರ್ಥ. ಸತ್ಯ, ಅಹಿಂಸೆಯನ್ನು ತನ್ನ ಉಸಿರಾಗಿಸಿಕೊಂಡಿದ್ದ ಮಹಾತ್ಮ ಗಾಂಧಿ ಜನಿಸಿದ ಈ ದೇಶದಲ್ಲಿ ಸತ್ಯಕ್ಕೆ ವಿರುದ್ಧವಾಗಿ ತಂತ್ರಜ್ಞಾನಗಳು ಬಳಕೆಯಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಕೆಎಸ್ಇಎಫ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಆರ್.ಹರೀಶ್, ಉಪನ್ಯಾಸಕರಾದ ಟಿ.ಪಿ.ಕುಮಾರಸ್ವಾಮಿ, ಪಿ.ರಾಮಕೃಷ್ಣಪ್ಪ, ಆರ್.ವೈಜಯಂತಿ, ಕಾಳಿದಾಸ ಪ್ರೌಢಶಾಲೆ ಉಪಪ್ರಾಂಶುಪಾಲ ಕೆ.ಚಂದ್ರಶೇಖರ್, ಆರ್ಯನ್ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಟಿ.ಆರ್.ಗೋಪಾಲ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಪರೀಕ್ಷಾ ಕೇಂದ್ರಿತವಾದ ಇಂದಿನ ಶಿಕ್ಷಣ ವ್ಯವಸ್ಥೆ ತೊಲಗಬೇಕು ಎಂದು ಪರಿಸರವಾದಿ ಸಿ.ಯತಿರಾಜು ಅಭಿಪ್ರಾಯಪಟ್ಟರು.</p>.<p>ನಗರದ ಕೆಎಸ್ಇಎಫ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಭಾನುವಾರ ಆಯೋಜಿಸಿದ್ದ ‘ನಮ್ಮ ಗೂಡಿನಿಂದ ಗುರಿಯ ಬೆನ್ನತ್ತಿ’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಕೋವಿಡ್ ಸಮಯದಲ್ಲಿ ಮಕ್ಕಳ ಕಲಿಕೆಯಲ್ಲಿ ಬಹು ದೊಡ್ಡ ಹಿನ್ನಡೆಯಾಗಿದೆ. ಆನ್ಲೈನ್ ಶಿಕ್ಷಣದ ವ್ಯಾಮೋಹ ಹೆಚ್ಚಾಯಿತು. ಭಾಷೆ ಕಲಿಕೆಯಲ್ಲಿನ ದೋಷಗಳನ್ನು ಗಮನಿಸಿ, ಸರಿಪಡಿಸುವವರೇ ಇಲ್ಲದಂತಾಗಿದ್ದಾರೆ. ಈ ಕಾಲವನ್ನು ಸತ್ಯೋತ್ತರ ಯುಗ ಎಂದು ಕರೆಯುತ್ತಾರೆ. ಸತ್ಯ ಬೇಕಾಗಿಲ್ಲ ಎಂಬುದೇ ಇದರ ಅರ್ಥ. ಸತ್ಯ, ಅಹಿಂಸೆಯನ್ನು ತನ್ನ ಉಸಿರಾಗಿಸಿಕೊಂಡಿದ್ದ ಮಹಾತ್ಮ ಗಾಂಧಿ ಜನಿಸಿದ ಈ ದೇಶದಲ್ಲಿ ಸತ್ಯಕ್ಕೆ ವಿರುದ್ಧವಾಗಿ ತಂತ್ರಜ್ಞಾನಗಳು ಬಳಕೆಯಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಕೆಎಸ್ಇಎಫ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಆರ್.ಹರೀಶ್, ಉಪನ್ಯಾಸಕರಾದ ಟಿ.ಪಿ.ಕುಮಾರಸ್ವಾಮಿ, ಪಿ.ರಾಮಕೃಷ್ಣಪ್ಪ, ಆರ್.ವೈಜಯಂತಿ, ಕಾಳಿದಾಸ ಪ್ರೌಢಶಾಲೆ ಉಪಪ್ರಾಂಶುಪಾಲ ಕೆ.ಚಂದ್ರಶೇಖರ್, ಆರ್ಯನ್ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಟಿ.ಆರ್.ಗೋಪಾಲ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>