<p><strong>ತುಮಕೂರು:</strong> ರಾಜ್ಯ ಸರ್ಕಾರದ ನೇಮಕಾತಿಯಲ್ಲಿ ಪರಿಶಿಷ್ಟ ಪಂಗಡದವರಿಗೆ ಶೇ 7ರಷ್ಟು ಮೀಸಲಾತಿ ಕಲ್ಪಿಸಬೇಕು. ಹಿಂದಿನ ಮೀಸಲಾತಿಗೆ ಅನುಗುಣವಾಗಿ ನೇಮಕಾತಿ ಮಾಡಬಾರದು ಎಂದು ಜಿಲ್ಲಾ ವಾಲ್ಮೀಕಿ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ.</p>.<p>ನಗರದಲ್ಲಿ ಸೋಮವಾರ ವಾಲ್ಮೀಕಿ ವಿದ್ಯಾವರ್ಧಕ ಸಂಘದ ಕಚೇರಿಯಲ್ಲಿ ಸಮುದಾಯದ ಮುಖಂಡರ ಸಭೆ ನಡೆಯಿತು. ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಬಂದಿದ್ದ ಪ್ರಮುಖರು, ಹೊಸದಾಗಿ ಹೆಚ್ಚಳ ಮಾಡಿರುವ ಮೀಸಲಾತಿ ಅನುಸರಿಸಿ ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಶೇ 7ರಷ್ಟು ಮೀಸಲಾತಿ ಅನ್ವಯ ಸರ್ಕಾರ ನೇಮಕಾತಿ ಮಾಡುವುದನ್ನು ಬಿಟ್ಟು, ಹಿಂದಿನಂತೆ ಶೇ 3ರಷ್ಟು ಮೀಸಲಾತಿ ಅನ್ವಯಿಸಿ 56 ಸಾವಿರ ಹುದ್ದೆಗಳ ನೇಮಕಾತಿಗೆ ಮುಂದಾಗಿರುವುದನ್ನು ಪ್ರಮುಖರು ಖಂಡಿಸಿದರು.</p>.<p>ಮುಖಂಡ ಕುಪ್ಪೂರ್ ಶ್ರೀಧರ್, ‘ಮೀಸಲಾಗಿ ಹೆಚ್ಚಳಕ್ಕೆ ಆಗ್ರಹಿಸಿ ಮೂರು ದಶಕಗಳ ಕಾಲ ಹೋರಾಟ ನಡೆಸಲಾಗಿದೆ. ಇದರ ಪರಿಣಾಮವಾಗಿ ಮೀಸಲಾತಿ ಪ್ರಮಾಣವನ್ನು ಶೇ 7ಕ್ಕೆ ಹೆಚ್ಚಿಸಲಾಗಿದೆ. ನಾಗಮೋಹನ್ ದಾಸ್ ವರದಿಯಂತೆ ಜನಸಂಖ್ಯೆಯಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಶೇ 3ರಿಂದ 7ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ಇದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿ, 9ನೇ ಶೆಡ್ಯೂಲ್ನಲ್ಲಿ ಸೇರಿಸುವಂತೆ ಕೇಳಿಕೊಂಡಿತ್ತು. ಆದರೆ ಈವರೆಗೂ ಈ ಬಗ್ಗೆ ಕೇಂದ್ರ ಕ್ರಮ ಕೈಗೊಂಡಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕೇಂದ್ರದ ಮೇಲೆ ರಾಜ್ಯ ಸರ್ಕಾರ ಒತ್ತಡ ತಂದು 9ನೇ ಶೆಡ್ಯೂಲ್ಗೆ ಸೇರಿಸುವಂತೆ ಮಾಡಬೇಕು. ನಂತರವಷ್ಟೇ ನೇಮಕಾತಿ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಸಮಸ್ಯೆ ಸರಿಪಡಿಸಿದ ನಂತರವಷ್ಟೇ ಹುದ್ದೆಗಳನ್ನು ಭರ್ತಿ ಮಾಡಬೇಕು. ಇಲ್ಲವಾದರೆ ರಾಜ್ಯದಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.</p>.<p>ಸಮುದಾಯದ ಮುಖಂಡರಾದ ಕೆಂಪಹನುಮಯ್ಯ, ರಾಮಚಂದ್ರಪ್ಪ, ನಾಗರಾಜು, ಸರಸ್ವತಿ, ಧನುಷ್, ಲಕ್ಷ್ಮಿರಂಗಯ್ಯ, ಎಚ್.ಪಿ.ಪ್ರಕಾಶ್, ಧರಣಿಕುಮಾರ್ ಶಿರಾ, ಗಂಗಾಧರ್, ಸೌಭಾಗ್ಯಮ್ಮ, ನವೀನ್ ಕುಮಾರ್, ಮಂಜುನಾಥ್, ರಾಕೇಶ್, ಮತ್ತಿತರರು ಭಾಗವಹಿಸಿದ್ದರು.</p>.<p><strong>11ಕ್ಕೆ ಪ್ರತಿಭಟನೆ </strong></p><p><strong>ತುಮಕೂರು:</strong> ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಮಾರ್ಚ್ 11ರಂದು ವಾಲ್ಮೀಕಿ ಸಮುದಾಯದವರು ಪ್ರತಿಭಟನೆ ನಡೆಸಲಿದ್ದಾರೆ. ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ರಾಜ್ಯ ಸರ್ಕಾರದ ನೇಮಕಾತಿಯಲ್ಲಿ ಪರಿಶಿಷ್ಟ ಪಂಗಡದವರಿಗೆ ಶೇ 7ರಷ್ಟು ಮೀಸಲಾತಿ ಕಲ್ಪಿಸಬೇಕು. ಹಿಂದಿನ ಮೀಸಲಾತಿಗೆ ಅನುಗುಣವಾಗಿ ನೇಮಕಾತಿ ಮಾಡಬಾರದು ಎಂದು ಜಿಲ್ಲಾ ವಾಲ್ಮೀಕಿ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ.</p>.<p>ನಗರದಲ್ಲಿ ಸೋಮವಾರ ವಾಲ್ಮೀಕಿ ವಿದ್ಯಾವರ್ಧಕ ಸಂಘದ ಕಚೇರಿಯಲ್ಲಿ ಸಮುದಾಯದ ಮುಖಂಡರ ಸಭೆ ನಡೆಯಿತು. ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಬಂದಿದ್ದ ಪ್ರಮುಖರು, ಹೊಸದಾಗಿ ಹೆಚ್ಚಳ ಮಾಡಿರುವ ಮೀಸಲಾತಿ ಅನುಸರಿಸಿ ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಶೇ 7ರಷ್ಟು ಮೀಸಲಾತಿ ಅನ್ವಯ ಸರ್ಕಾರ ನೇಮಕಾತಿ ಮಾಡುವುದನ್ನು ಬಿಟ್ಟು, ಹಿಂದಿನಂತೆ ಶೇ 3ರಷ್ಟು ಮೀಸಲಾತಿ ಅನ್ವಯಿಸಿ 56 ಸಾವಿರ ಹುದ್ದೆಗಳ ನೇಮಕಾತಿಗೆ ಮುಂದಾಗಿರುವುದನ್ನು ಪ್ರಮುಖರು ಖಂಡಿಸಿದರು.</p>.<p>ಮುಖಂಡ ಕುಪ್ಪೂರ್ ಶ್ರೀಧರ್, ‘ಮೀಸಲಾಗಿ ಹೆಚ್ಚಳಕ್ಕೆ ಆಗ್ರಹಿಸಿ ಮೂರು ದಶಕಗಳ ಕಾಲ ಹೋರಾಟ ನಡೆಸಲಾಗಿದೆ. ಇದರ ಪರಿಣಾಮವಾಗಿ ಮೀಸಲಾತಿ ಪ್ರಮಾಣವನ್ನು ಶೇ 7ಕ್ಕೆ ಹೆಚ್ಚಿಸಲಾಗಿದೆ. ನಾಗಮೋಹನ್ ದಾಸ್ ವರದಿಯಂತೆ ಜನಸಂಖ್ಯೆಯಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಶೇ 3ರಿಂದ 7ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ಇದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿ, 9ನೇ ಶೆಡ್ಯೂಲ್ನಲ್ಲಿ ಸೇರಿಸುವಂತೆ ಕೇಳಿಕೊಂಡಿತ್ತು. ಆದರೆ ಈವರೆಗೂ ಈ ಬಗ್ಗೆ ಕೇಂದ್ರ ಕ್ರಮ ಕೈಗೊಂಡಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕೇಂದ್ರದ ಮೇಲೆ ರಾಜ್ಯ ಸರ್ಕಾರ ಒತ್ತಡ ತಂದು 9ನೇ ಶೆಡ್ಯೂಲ್ಗೆ ಸೇರಿಸುವಂತೆ ಮಾಡಬೇಕು. ನಂತರವಷ್ಟೇ ನೇಮಕಾತಿ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಸಮಸ್ಯೆ ಸರಿಪಡಿಸಿದ ನಂತರವಷ್ಟೇ ಹುದ್ದೆಗಳನ್ನು ಭರ್ತಿ ಮಾಡಬೇಕು. ಇಲ್ಲವಾದರೆ ರಾಜ್ಯದಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.</p>.<p>ಸಮುದಾಯದ ಮುಖಂಡರಾದ ಕೆಂಪಹನುಮಯ್ಯ, ರಾಮಚಂದ್ರಪ್ಪ, ನಾಗರಾಜು, ಸರಸ್ವತಿ, ಧನುಷ್, ಲಕ್ಷ್ಮಿರಂಗಯ್ಯ, ಎಚ್.ಪಿ.ಪ್ರಕಾಶ್, ಧರಣಿಕುಮಾರ್ ಶಿರಾ, ಗಂಗಾಧರ್, ಸೌಭಾಗ್ಯಮ್ಮ, ನವೀನ್ ಕುಮಾರ್, ಮಂಜುನಾಥ್, ರಾಕೇಶ್, ಮತ್ತಿತರರು ಭಾಗವಹಿಸಿದ್ದರು.</p>.<p><strong>11ಕ್ಕೆ ಪ್ರತಿಭಟನೆ </strong></p><p><strong>ತುಮಕೂರು:</strong> ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಮಾರ್ಚ್ 11ರಂದು ವಾಲ್ಮೀಕಿ ಸಮುದಾಯದವರು ಪ್ರತಿಭಟನೆ ನಡೆಸಲಿದ್ದಾರೆ. ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>