ರಾಜ್ಯದ ಶಿಕ್ಷಣ ಕ್ಷೇತ್ರ ಕಲುಷಿತಗೊಂಡಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 53ರಷ್ಟು ಫಲಿತಾಂಶ ಬಂದಿದೆ. ಜನ ಸರ್ಕಾರವನ್ನು ತಿರಸ್ಕಾರದಿಂದ ನೋಡುತ್ತಾರೆ ಎಂಬ ಕಾರಣಕ್ಕೆ ಶೇ 20ರಷ್ಟು ಕೃಪಾಂಕ ನೀಡಿದ್ದಾರೆ. ಸಿಇಟಿ ಪರೀಕ್ಷೆಯಲ್ಲಿ 50 ಅಂಕಗಳಿಗೆ ಪಠ್ಯದ ಹೊರತಾದ ಪ್ರಶ್ನೆ ಕೇಳಿದ್ದಾರೆ. ಸರ್ಕಾರಕ್ಕೆ ಶಿಕ್ಷಣ, ಪರೀಕ್ಷೆ, ತರಗತಿ ಬಗ್ಗೆ ಸ್ವಲ್ಪವೂ ಗೌರವ ಇಲ್ಲ ಎಂದು ಕಿಡಿಕಾರಿದರು.