<p><strong>ತುಮಕೂರು: </strong>ವಾಲ್ಮೀಕಿ ಸಮುದಾಯಕ್ಕೆ ಶೇ 7.5ರಷ್ಟು ಮೀಸಲಾತಿ ನೀಡದಿದ್ದರೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಮತ್ತೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಶಾಂತಲಾ ರಾಜಣ್ಣ ಸೋಮವಾರ ಎಚ್ಚರಿಸಿದರು.</p>.<p>ರಾಜ್ಯ ಸರ್ಕಾರವು ವಿಧಾನಮಂಡಲದ ಮುಂದಿನ ಅಧಿವೇಶನದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಶೇ 3.5ರಿಂದ 7.5ಕ್ಕೆ ಮೀಸಲಾತಿ ಹೆಚ್ಚಿಸುವ ನಿರ್ಣಯ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸು ಕಳುಹಿಸಬೇಕು. ಇಲ್ಲದಿದ್ದರೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಸಂವಿಧಾನದಲ್ಲಿಯೇ ಶೇ 7.5ರಷ್ಟು ಮೀಸಲಾತಿಗೆ ಅವಕಾಶ ಇದೆ. ಕರ್ನಾಟಕದಲ್ಲಿ ರಾಜಕೀಯ ಕ್ಷೇತ್ರ ಹೊರತುಪಡಿಸಿ, ಉದ್ಯೋಗ ಮತ್ತು ಶಿಕ್ಷಣದಲ್ಲಿ ಪರಿಶಿಷ್ಟ ಪಂಗಡದವರಿಗೆ ಶೇ 7.5ರಷ್ಟು ಮೀಸಲಾತಿ ನೀಡಿಲ್ಲ. ಇದರ ಜೊತೆಗೆ ಬೇರೆ ಬೇರೆ ಸಮುದಾಯಗಳನ್ನು ತಂದು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗುತ್ತಿದೆ ಎಂದರು.</p>.<p>ಸಮುದಾಯದ ಮುಖಂಡ ದೊಡ್ಡಯ್ಯ ಮಾತನಾಡಿ, ‘ಶೇ 7.5ರಷ್ಟು ಮೀಸಲಾತಿಗಾಗಿ ಹಲವಾರು ಬಾರಿ ಹೋರಾಟ ನಡೆಸಿದರೂ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ನಿರ್ದೇಶನದಂತೆ ಈ ಮಾಧ್ಯಮಗೋಷ್ಠಿ ನಡೆಸಲಾಗುತ್ತಿದೆ. ಸರ್ಕಾರ ಮುಂಬರುವ ಅಧಿವೇಶನದಲ್ಲಿ ಕ್ರಮ ಕೈಗೊಳ್ಳದಿದ್ದರೆ, ಸ್ವಾಮೀಜಿ ನೀಡುವ ಆದೇಶದಂತೆ ವಾಲ್ಮೀಕಿ ಸಮುದಾಯ ಹೋರಾಟ ರೂಪಿಸಲಿದೆ’ ಎಂದು ಹೇಳಿದರು.</p>.<p>ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ರಾಜಕುಮಾರ್, ಲಕ್ಷ್ಮಿನಾರಾಯಣ್, ಸಮುದಾಯದ ಮುಖಂಡರಾದ ಪುರುಷೋತ್ತಮ್, ಪ್ರತಾಪ್, ತು.ಬಿ.ಮಲ್ಲೇಶ್, ಡಾ.ನಾಗರಾಜು, ಕೆಂಪಹನುಮಯ್ಯ, ಕೃಷ್ಣಮೂರ್ತಿ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ವಾಲ್ಮೀಕಿ ಸಮುದಾಯಕ್ಕೆ ಶೇ 7.5ರಷ್ಟು ಮೀಸಲಾತಿ ನೀಡದಿದ್ದರೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಮತ್ತೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಶಾಂತಲಾ ರಾಜಣ್ಣ ಸೋಮವಾರ ಎಚ್ಚರಿಸಿದರು.</p>.<p>ರಾಜ್ಯ ಸರ್ಕಾರವು ವಿಧಾನಮಂಡಲದ ಮುಂದಿನ ಅಧಿವೇಶನದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಶೇ 3.5ರಿಂದ 7.5ಕ್ಕೆ ಮೀಸಲಾತಿ ಹೆಚ್ಚಿಸುವ ನಿರ್ಣಯ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸು ಕಳುಹಿಸಬೇಕು. ಇಲ್ಲದಿದ್ದರೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಸಂವಿಧಾನದಲ್ಲಿಯೇ ಶೇ 7.5ರಷ್ಟು ಮೀಸಲಾತಿಗೆ ಅವಕಾಶ ಇದೆ. ಕರ್ನಾಟಕದಲ್ಲಿ ರಾಜಕೀಯ ಕ್ಷೇತ್ರ ಹೊರತುಪಡಿಸಿ, ಉದ್ಯೋಗ ಮತ್ತು ಶಿಕ್ಷಣದಲ್ಲಿ ಪರಿಶಿಷ್ಟ ಪಂಗಡದವರಿಗೆ ಶೇ 7.5ರಷ್ಟು ಮೀಸಲಾತಿ ನೀಡಿಲ್ಲ. ಇದರ ಜೊತೆಗೆ ಬೇರೆ ಬೇರೆ ಸಮುದಾಯಗಳನ್ನು ತಂದು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗುತ್ತಿದೆ ಎಂದರು.</p>.<p>ಸಮುದಾಯದ ಮುಖಂಡ ದೊಡ್ಡಯ್ಯ ಮಾತನಾಡಿ, ‘ಶೇ 7.5ರಷ್ಟು ಮೀಸಲಾತಿಗಾಗಿ ಹಲವಾರು ಬಾರಿ ಹೋರಾಟ ನಡೆಸಿದರೂ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ನಿರ್ದೇಶನದಂತೆ ಈ ಮಾಧ್ಯಮಗೋಷ್ಠಿ ನಡೆಸಲಾಗುತ್ತಿದೆ. ಸರ್ಕಾರ ಮುಂಬರುವ ಅಧಿವೇಶನದಲ್ಲಿ ಕ್ರಮ ಕೈಗೊಳ್ಳದಿದ್ದರೆ, ಸ್ವಾಮೀಜಿ ನೀಡುವ ಆದೇಶದಂತೆ ವಾಲ್ಮೀಕಿ ಸಮುದಾಯ ಹೋರಾಟ ರೂಪಿಸಲಿದೆ’ ಎಂದು ಹೇಳಿದರು.</p>.<p>ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ರಾಜಕುಮಾರ್, ಲಕ್ಷ್ಮಿನಾರಾಯಣ್, ಸಮುದಾಯದ ಮುಖಂಡರಾದ ಪುರುಷೋತ್ತಮ್, ಪ್ರತಾಪ್, ತು.ಬಿ.ಮಲ್ಲೇಶ್, ಡಾ.ನಾಗರಾಜು, ಕೆಂಪಹನುಮಯ್ಯ, ಕೃಷ್ಣಮೂರ್ತಿ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>