ತುಮಕೂರು: ಕೊರಟಗೆರೆ ತಾಲ್ಲೂಕು ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಅವರ ವಿರುದ್ಧ ಸುಳ್ಳು ಆರೋಪ ಮಾಡಿ ಪತ್ರಿಕೆಯೊಂದು ವರದಿ ಪ್ರಕಟಿಸಿದೆ. ಇದರಿಂದ ಸ್ವಾಮೀಜಿ ಹಾಗೂ ಸಮಾಜದ ಘನತೆಗೆ ಚ್ಯುತಿ ಉಂಟಾಗಿದ್ದು ಪತ್ರಿಕೆ ಮತ್ತು ವರದಿಗಾರರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ವೀರಶೈವ/ಲಿಂಗಾಯತ ಸಂಘಟನೆಗಳ ಒಕ್ಕೂಟವು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಅವರಿಗೆ ಮನವಿ ಮಾಡಿತು.