<p><strong>ತುಮಕೂರು</strong>: ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಚ್.ಎನ್.ಚಂದ್ರಶೇಖರ್ ಹಾಗೂ ಓಹಿಲೇಶ್ವರ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.</p>.<p>ಇಬ್ಬರೂ ಅಭ್ಯರ್ಥಿಗಳು ಚುನಾವಣಾ ಅಧಿಕಾರಿಗಳಿಗೆ ಅಧಿಕೃತ ಪತ್ರ ನೀಡಿ ನಿವೃತಿ ಹೊಂದಿದ್ದಾರೆ. ಅಂತಿಮವಾಗಿ ಡಾ.ಎಸ್.ಪರಮೇಶ್ ಒಬ್ಬರೇ ಅಭ್ಯರ್ಥಿಯಾಗಿ ಉಳಿದುಕೊಂಡಿದ್ದಾರೆ ಎಂದು ಸಮಾಜದ ಮುಖಂಡರಾದ ಎಸ್.ಕೆ.ರಾಜಶೇಖರ್, ನಟರಾಜ್ ಸಾಗರಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಜುಲೈ 21ರಂದು ಮತದಾನ ನಡೆಯಲಿದೆ. ಈಗಾಗಲೇ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಅಂದು ಮತದಾನ ನಡೆಯಲಿದೆ. ಅಧ್ಯಕ್ಷ ಸ್ಥಾನಕ್ಕೆ ಮೂವರು ಸ್ಪರ್ಧಿಸಿದ್ದು, ಇಬ್ಬರು ನಿವೃತ್ತರಾಗಿದ್ದಾರೆ. ಕೊನೆಗೆ ಡಾ.ಎಸ್.ಪರಮೇಶ್ ಮಾತ್ರ ಉಳಿದುಕೊಂಡಿದ್ದಾರೆ. ಆದರೆ ನಿಯಮದಂತೆ ಚುನಾವಣೆ ನಡೆಯಬೇಕಿದೆ.</p>.<p>ಮತದಾನ ನಡೆಯುವ ಸ್ಥಳ: ತುಮಕೂರು ಮತದಾನ ಕೇಂದ್ರದಲ್ಲಿ ತುಮಕೂರು ನಗರ, ಗ್ರಾಮಾಂತರ, ಶಿರಾ, ಕುಣಿಗಲ್ ತಾಲ್ಲೂಕಿನ ಮತದಾರರು ಮತ ಚಲಾಯಿಸಬಹುದು. ಗುಬ್ಬಿ (ತಾಲ್ಲೂಕಿನ ಮತದಾರರು), ತಿಪಟೂರು ಕೇಂದ್ರದಲ್ಲಿ ತಿಪಟೂರು, ಚಿಕ್ಕನಾಯಕನಹಳ್ಳಿ, ತುರುವೇಕೆರೆ ತಾಲ್ಲೂಕು, ಮಧುಗಿರಿಯಲ್ಲಿ ಕೊರಟಗೆರೆ, ಪಾವಗಡ ತಾಲ್ಲೂಕಿನ ಮತದಾರರು ಮತ ಚಲಾಯಿಸಲು ಅವಕಾಶ ಮಾಡಿಕೊಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಚ್.ಎನ್.ಚಂದ್ರಶೇಖರ್ ಹಾಗೂ ಓಹಿಲೇಶ್ವರ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.</p>.<p>ಇಬ್ಬರೂ ಅಭ್ಯರ್ಥಿಗಳು ಚುನಾವಣಾ ಅಧಿಕಾರಿಗಳಿಗೆ ಅಧಿಕೃತ ಪತ್ರ ನೀಡಿ ನಿವೃತಿ ಹೊಂದಿದ್ದಾರೆ. ಅಂತಿಮವಾಗಿ ಡಾ.ಎಸ್.ಪರಮೇಶ್ ಒಬ್ಬರೇ ಅಭ್ಯರ್ಥಿಯಾಗಿ ಉಳಿದುಕೊಂಡಿದ್ದಾರೆ ಎಂದು ಸಮಾಜದ ಮುಖಂಡರಾದ ಎಸ್.ಕೆ.ರಾಜಶೇಖರ್, ನಟರಾಜ್ ಸಾಗರಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಜುಲೈ 21ರಂದು ಮತದಾನ ನಡೆಯಲಿದೆ. ಈಗಾಗಲೇ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಅಂದು ಮತದಾನ ನಡೆಯಲಿದೆ. ಅಧ್ಯಕ್ಷ ಸ್ಥಾನಕ್ಕೆ ಮೂವರು ಸ್ಪರ್ಧಿಸಿದ್ದು, ಇಬ್ಬರು ನಿವೃತ್ತರಾಗಿದ್ದಾರೆ. ಕೊನೆಗೆ ಡಾ.ಎಸ್.ಪರಮೇಶ್ ಮಾತ್ರ ಉಳಿದುಕೊಂಡಿದ್ದಾರೆ. ಆದರೆ ನಿಯಮದಂತೆ ಚುನಾವಣೆ ನಡೆಯಬೇಕಿದೆ.</p>.<p>ಮತದಾನ ನಡೆಯುವ ಸ್ಥಳ: ತುಮಕೂರು ಮತದಾನ ಕೇಂದ್ರದಲ್ಲಿ ತುಮಕೂರು ನಗರ, ಗ್ರಾಮಾಂತರ, ಶಿರಾ, ಕುಣಿಗಲ್ ತಾಲ್ಲೂಕಿನ ಮತದಾರರು ಮತ ಚಲಾಯಿಸಬಹುದು. ಗುಬ್ಬಿ (ತಾಲ್ಲೂಕಿನ ಮತದಾರರು), ತಿಪಟೂರು ಕೇಂದ್ರದಲ್ಲಿ ತಿಪಟೂರು, ಚಿಕ್ಕನಾಯಕನಹಳ್ಳಿ, ತುರುವೇಕೆರೆ ತಾಲ್ಲೂಕು, ಮಧುಗಿರಿಯಲ್ಲಿ ಕೊರಟಗೆರೆ, ಪಾವಗಡ ತಾಲ್ಲೂಕಿನ ಮತದಾರರು ಮತ ಚಲಾಯಿಸಲು ಅವಕಾಶ ಮಾಡಿಕೊಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>