ಜಮೀನು, ತೋಟಗಳಿಗೆ ಕೃಷಿ ಚಟುವಟಿಕೆಗಳಿಗಾಗಿ ಎತ್ತಿನಬಂಡಿ, ಟ್ರಾಕ್ಟರ್, ಇತ್ಯಾದಿ ವಾಹನಗಳು ಓಡಾಡಲೂ ಸಾಧ್ಯವಾಗದ ಸ್ಥಿತಿ ಇದೆ. ಮುರಾರಾಯನಹಳ್ಳಿ ಮೂಲಕ ಮಡಕಶಿರಾಕ್ಕೆ ಹೋಗುವ ರಸ್ತೆ ಸ್ಥಗಿತಗೊಂಡಲ್ಲಿ ಆಂಧ್ರ, ರಾಜ್ಯದ ವಿವಿಧೆಡೆಯಿಂದ ಹಿಂದೂಪುರ, ಪೆನುಗೊಂಡಕ್ಕೆ ಹೋಗುವ ನೂರಾರು ವಾಹನಗಳು ಇದೇ ಮಾರ್ಗದಲ್ಲಿ ಸಂಚರಿಸುತ್ತವೆ.