ಬಳಿಕ ಮಾತನಾಡಿದ ಡಾ.ಮಂಜುನಾಥ್, ‘ಹಸುಗಳಲ್ಲಿ ಉದರ ಸಂಬಂಧಿತ ಕಾಯಿಲೆಗಳಾಗುವುದು ಸಹಜ. ಕೆಲವೊಮ್ಮೆ ಶಸ್ತ್ರಚಿಕಿತ್ಸೆ ನಡೆಸಬೇಕಾದ ಪರಿಸ್ಥಿತಿ ಬರುತ್ತದೆ. ಆಗ ಪಶುವೈದ್ಯರ ಮಾರ್ಗದರ್ಶನದಂತೆ ರೈತರು ಹೆದರದೆ ಶಸ್ತ್ರಚಿಕಿತ್ಸೆ ನಡೆಸಲು ಸಹಕರಿಸಿದರೆ ಅನೇಕ ಜಾನುವಾರುಗಳ ಪ್ರಾಣ ಉಳಿಸಬಹುದಾಗಿದೆ’ ಎಂದು ತಿಳಿಸಿದರು.