ತುಮಕೂರು: ಸಾಹಿತಿ ದಿವಂಗತ ಕೆ.ಬಿ.ಸಿದ್ದಯ್ಯ ಅವರ ಪುತ್ರ ಟಿ.ಎಸ್.ಅನಿಕೇತನ್ (30) ಅನಾರೋಗ್ಯದಿಂದ ಮಂಗಳವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು.
ಅವರಿಗೆ ತಾಯಿ ಹಾಗೂ ಇಬ್ಬರು ಸಹೋದರಿಯರು ಇದ್ದಾರೆ. ತುಮಕೂರು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರಾಗಿ ಅವರು ಕೆಲಸ ಮಾಡುತ್ತಿದ್ದರು. ಮಾಗಡಿ ತಾಲ್ಲೂಕು ಕೆಂಕೆರೆ ಗ್ರಾಮದ ಅವರ ತೋಟದಲ್ಲಿ ಬುಧವಾರ ಅಂತ್ಯಕ್ರಿಯೆ ನೆರವೇರಿತು.