<p>ತುಮಕೂರು: ಪಂಚಮಸಾಲಿ ಲಿಂಗಾ ಯತರಿಗೆ`2ಎ' ಮೀಸಲಾತಿ ನೀಡುವು ದಾಗಿ ಮತ್ತು ಲಿಂಗಾಯತ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವುದಾಗಿ ಜ.14ರ ಮಕರ ಸಂಕ್ರಾತಿಯ ಒಳಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಘೋಷಿಸಬೇಕು ಎಂದುಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು.</p>.<p>ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘೋಷಣೆ ಗಳನ್ನು ಮಾಡಿದರೆ ರಾಜ್ಯ ಹಾಗೂ ಕೇಂದ್ರ<br />ಸರ್ಕಾರಕ್ಕೆ ಅಭಿನಂದ ನೆಯ ವಿಜಯೋತ್ಸವ ಸಲ್ಲಿಸಲಾಗುವುದು. ಇಲ್ಲದಿದ್ದರೆ ಜ.14ರಿಂದ ಕೂಡಲ ಸಂಗಮದಿಂದ ಪಂಚಲಕ್ಷ ಹೆಜ್ಜೆಗಳ ಪಾದಯಾತ್ರೆ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.</p>.<p>ಪಂಚಮಸಾಲಿ ಸಮಾಜವು ಬಹು ತೇಕ ಕೃಷಿಯನ್ನೇ ಕಾಯಕವನ್ನಾಗಿ ಮಾಡಿ ಕೊಂಡಿದೆ. ಶೇ 95 ರಷ್ಟು ಮಂದಿ ಆರ್ಥಿಕ<br />ವಾಗಿ ಹಿಂದುಳಿದಿದ್ದಾರೆ ಎಂದರು.</p>.<p>ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮಾತನಾಡಿ, ನಮ್ಮ ಹೋರಾಟಕ್ಕೆ ಸರ್ಕಾರ ಸ್ಪಂದಿಸದ ಕಾರಣ ಮಕರ ಸಂಕ್ರಾಂತಿವರೆಗೆ ಅಂತಿಮ ಗಡುವು ನೀಡಿದ್ದೇವೆ ಎಂದರು.</p>.<p>ಸಂಕ್ರಾಂತಿಯೊಳಗೆ ಮೀಸಲಾತಿ ವಿಚಾರದಲ್ಲಿ ಸ್ಪಂದಿಸದಿದ್ದರೆ ಕೂಡಲಸಂಗಮದಲ್ಲಿ ಜ.14 ರಂದು ಬಸವಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮ ನಡೆಸಿ 5ರಿಂದ 7 ಲಕ್ಷ ಪಂಚಮಸಾಲಿ ಲಿಂಗಾಯತರೊಡಗೂಡಿ ಬೆಂಗಳೂರಿಗೆ ಪಾದಯಾತ್ರೆ ನಡೆಸುತ್ತೇವೆ<br />ಎಂದರು.</p>.<p>ಪಂಚಮಸಾಲಿ ಸಮಾಜದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಹಿರೇಕೊಪ್ಪ, ಯುವಘಟಕದ ಅಧ್ಯಕ್ಷ ಸೋಮಶೇಖರ ಆಲ್ಯಾಳ, ಅಮರೇಶ ನಾಗೂರ, ತಿಪ್ಪೇಸ್ವಾಮಿ, ಶಿವನಗೌಡ ಪಾಟೀಲ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಪಂಚಮಸಾಲಿ ಲಿಂಗಾ ಯತರಿಗೆ`2ಎ' ಮೀಸಲಾತಿ ನೀಡುವು ದಾಗಿ ಮತ್ತು ಲಿಂಗಾಯತ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವುದಾಗಿ ಜ.14ರ ಮಕರ ಸಂಕ್ರಾತಿಯ ಒಳಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಘೋಷಿಸಬೇಕು ಎಂದುಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು.</p>.<p>ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘೋಷಣೆ ಗಳನ್ನು ಮಾಡಿದರೆ ರಾಜ್ಯ ಹಾಗೂ ಕೇಂದ್ರ<br />ಸರ್ಕಾರಕ್ಕೆ ಅಭಿನಂದ ನೆಯ ವಿಜಯೋತ್ಸವ ಸಲ್ಲಿಸಲಾಗುವುದು. ಇಲ್ಲದಿದ್ದರೆ ಜ.14ರಿಂದ ಕೂಡಲ ಸಂಗಮದಿಂದ ಪಂಚಲಕ್ಷ ಹೆಜ್ಜೆಗಳ ಪಾದಯಾತ್ರೆ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.</p>.<p>ಪಂಚಮಸಾಲಿ ಸಮಾಜವು ಬಹು ತೇಕ ಕೃಷಿಯನ್ನೇ ಕಾಯಕವನ್ನಾಗಿ ಮಾಡಿ ಕೊಂಡಿದೆ. ಶೇ 95 ರಷ್ಟು ಮಂದಿ ಆರ್ಥಿಕ<br />ವಾಗಿ ಹಿಂದುಳಿದಿದ್ದಾರೆ ಎಂದರು.</p>.<p>ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮಾತನಾಡಿ, ನಮ್ಮ ಹೋರಾಟಕ್ಕೆ ಸರ್ಕಾರ ಸ್ಪಂದಿಸದ ಕಾರಣ ಮಕರ ಸಂಕ್ರಾಂತಿವರೆಗೆ ಅಂತಿಮ ಗಡುವು ನೀಡಿದ್ದೇವೆ ಎಂದರು.</p>.<p>ಸಂಕ್ರಾಂತಿಯೊಳಗೆ ಮೀಸಲಾತಿ ವಿಚಾರದಲ್ಲಿ ಸ್ಪಂದಿಸದಿದ್ದರೆ ಕೂಡಲಸಂಗಮದಲ್ಲಿ ಜ.14 ರಂದು ಬಸವಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮ ನಡೆಸಿ 5ರಿಂದ 7 ಲಕ್ಷ ಪಂಚಮಸಾಲಿ ಲಿಂಗಾಯತರೊಡಗೂಡಿ ಬೆಂಗಳೂರಿಗೆ ಪಾದಯಾತ್ರೆ ನಡೆಸುತ್ತೇವೆ<br />ಎಂದರು.</p>.<p>ಪಂಚಮಸಾಲಿ ಸಮಾಜದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಹಿರೇಕೊಪ್ಪ, ಯುವಘಟಕದ ಅಧ್ಯಕ್ಷ ಸೋಮಶೇಖರ ಆಲ್ಯಾಳ, ಅಮರೇಶ ನಾಗೂರ, ತಿಪ್ಪೇಸ್ವಾಮಿ, ಶಿವನಗೌಡ ಪಾಟೀಲ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>