ಕೊರೊನಾ ಸಂಕಷ್ಟ ಕಾಲದಲ್ಲಿ ವಿದ್ಯಾರ್ಥಿಗಳು ಕಲಿಕೆಯಿಂದ ದೂರ ಉಳಿಯಬಾರದೆಂದು ಸರ್ಕಾರ ಚಂದನ ವಾಹಿನಿಯಲ್ಲಿ ತರಗತಿಗಳನ್ನು ಪ್ರಸಾರ ಮಾಡುತ್ತಿದೆ. ಮಕ್ಕಳು ಮನೆಯಲ್ಲೇ ಇದ್ದು ವಿದ್ಯಾಭ್ಯಾಸ ಮಾಡಬೇಕಾದ ಅನಿವಾರ್ಯತೆ ಎದುರಾಗಿರುವ ಸಂದರ್ಭದಲ್ಲಿ ನಾಲ್ಕೈದು ದಿನಗಳಿಂದ ವಿದ್ಯಾಜ್ಯೋತಿ ಕಡಿತ ಗೊಳಿಸಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ವಿದ್ಯಾಜ್ಯೋತಿ ಯೋಜನೆಯಡಿಯಲ್ಲಿ ಆಯ್ಕೆಯಾಗಿದ್ದತಾಲ್ಲೂಕಿನ ಎಲ್ಲ ವಿದ್ಯಾರ್ಥಿಗಳ ಮನೆಗಳಿಗೆ ಉಚಿತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ಹಂದ್ರಾಳು ನಾಗಭೂಷಣ್ ಒತ್ತಾಯಿಸಿದ್ದಾರೆ.