<p><strong>ತುಮಕೂರು: </strong>‘ಕೈಲಾಸ ದೊಡ್ಡದಲ್ಲ ಕಾಯಕ ದೊಡ್ಡದು, ಆಚಾರ ದೊಡ್ಡದಲ್ಲ ಅರಿವು ದೊಡ್ಡದು ಎನ್ನುವುದು ಶಿವಕುಮಾರ ಸ್ವಾಮೀಜಿ ಅವರ ಧ್ಯೇಯವಾಗಿತ್ತು’ ಎಂದು ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳಿದರು.</p>.<p>ಮನುಷ್ಯ ಧರ್ಮವನ್ನು ಸ್ವಾಮೀಜಿ ಪ್ರತಿಪಾದಿಸಿದರು. ಆ ಕಾರಣದಿಂದ ಎಲ್ಲರೂ ಅವರನ್ನು ದೇವರಾಗಿ ಕಾಣುತ್ತಿದ್ದಾರೆ.ಅವರ ಸೇವಾ ಕಾರ್ಯ ಎಲ್ಲರಿಗೂ ಮಾದರಿ. ಲಕ್ಷಾಂತರ ಮಕ್ಕಳಿಗೆ ಪೋಷಕರ ಸ್ಥಾನದಲ್ಲಿ, ಗುರುವಿನ ಸ್ಥಾನದಲ್ಲಿ ಸ್ವಾಮೀಜಿ ಇದ್ದರು ಎಂದು ನುಡಿದರು.</p>.<p>ಮಠದಲ್ಲಿವಿದ್ಯಾಭ್ಯಾಸ ಮಾಡಿದ ಹಲವರು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅದಕ್ಕೆ ಕಾರಣ ಸ್ವಾಮೀಜಿ. ನಮ್ಮ ತಂದೆ ಯಡಿಯೂರಪ್ಪ ಅವರಿಗೆ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳುವ ಆಸೆ ಇತ್ತು. ಆದರೆ ದಾವೋಸ್ ಕಾರ್ಯಕ್ರಮಕ್ಕೆ ಹೋಗಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ನಾನು ಪಾಲ್ಗೊಂಡೆ ಎಂದು ನುಡಿದರು.</p>.<p>ಸ್ವಾಮೀಜಿ ಹುಟ್ಟೂರು ವೀರಾಪುರ ಅಭಿವೃದ್ಧಿಗೆಂದು ಮುಖ್ಯಮಂತ್ರಿ ₹80 ಕೋಟಿ ಅನುದಾನ ನೀಡಿದ್ದಾರೆ ಎಂದು ಘೋಷಿಸಿದರು.</p>.<p>ಯಡಿಯೂರಪ್ಪ ಅವರ ಪರವಾಗಿ ಮತ್ತು ವೇದಿಕೆಯಲ್ಲಿ ಇರುವ ಗಣ್ಯರ ಪರವಾಗಿ ಪಕ್ಷಾತೀತವಾಗಿ ಮತ್ತು ಜಾತ್ಯತೀತವಾಗಿ ಮಠದ ಅಭಿವೃದ್ಧಿಗೆ ಸಹಕಾರ ನೀಡುತ್ತೇವೆ ಎಂದು ಆಶ್ವಾಸನೆ ನೀಡುತ್ತಿದ್ದೇನೆ ಎಂದು ವಿಜಯೇಂದ್ರ ಹೇಳಿದರು.</p>.<p><strong>ಸಿದ್ಧಗಂಗಾ ಮಠದಲ್ಲಿ ಸಂಸ್ಕಾರವಿದೆ: ಹೊರಟ್ಟಿ</strong></p>.<p>‘ಶಿವಕುಮಾರ ಸ್ವಾಮೀಜಿ ಅವರೇ ಭಾರತ ರತ್ನ ಅವರಿಗೆ ಏಕೆ ಕೊಡಬೇಕು ಭಾರತ ರತ್ನ. ಅವರೇ ದೊಡ್ಡ ರತ್ನ. ಬಸವಣ್ಣನನ್ನ ನಾವು ನೋಡಲಿಲ್ಲ. ಆದರೆ ಶಿವಕುಮಾರ ಸ್ವಾಮೀಜಿ ಅವರೆ ನಮಗೆ ಬಸವಣ್ಣ’ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.</p>.<p>ಜಗತ್ತಿನಲ್ಲಿ ಯಾರೂ ಕೊಡದ ಕೊಡುಗೆಯನ್ನು ಅವರು ನೀಡಿದ್ದಾರೆ. ಸದಾ ಅವರು ನಮ್ಮನಡುವೆ ಇರುತ್ತಾರೆ ಎಂದು ಅಭಿಪ್ರಾಯಪಟ್ಟರು.</p>.<p>ಸಿದ್ಧಲಿಂಗ ಸ್ವಾಮೀಜಿ ಸಹ ಮಕ್ಕಳಿಗೆ ಯಾವುದೇ ಕೊರತೆ ಆಗದಂತೆ ಮಠದ ಆಡಳಿತವನ್ನುನಡೆಸಿಕೊಂಡು ಹೋಗುತ್ತಿದ್ದಾರೆ ಎಂದು ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>‘ಕೈಲಾಸ ದೊಡ್ಡದಲ್ಲ ಕಾಯಕ ದೊಡ್ಡದು, ಆಚಾರ ದೊಡ್ಡದಲ್ಲ ಅರಿವು ದೊಡ್ಡದು ಎನ್ನುವುದು ಶಿವಕುಮಾರ ಸ್ವಾಮೀಜಿ ಅವರ ಧ್ಯೇಯವಾಗಿತ್ತು’ ಎಂದು ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳಿದರು.</p>.<p>ಮನುಷ್ಯ ಧರ್ಮವನ್ನು ಸ್ವಾಮೀಜಿ ಪ್ರತಿಪಾದಿಸಿದರು. ಆ ಕಾರಣದಿಂದ ಎಲ್ಲರೂ ಅವರನ್ನು ದೇವರಾಗಿ ಕಾಣುತ್ತಿದ್ದಾರೆ.ಅವರ ಸೇವಾ ಕಾರ್ಯ ಎಲ್ಲರಿಗೂ ಮಾದರಿ. ಲಕ್ಷಾಂತರ ಮಕ್ಕಳಿಗೆ ಪೋಷಕರ ಸ್ಥಾನದಲ್ಲಿ, ಗುರುವಿನ ಸ್ಥಾನದಲ್ಲಿ ಸ್ವಾಮೀಜಿ ಇದ್ದರು ಎಂದು ನುಡಿದರು.</p>.<p>ಮಠದಲ್ಲಿವಿದ್ಯಾಭ್ಯಾಸ ಮಾಡಿದ ಹಲವರು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅದಕ್ಕೆ ಕಾರಣ ಸ್ವಾಮೀಜಿ. ನಮ್ಮ ತಂದೆ ಯಡಿಯೂರಪ್ಪ ಅವರಿಗೆ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳುವ ಆಸೆ ಇತ್ತು. ಆದರೆ ದಾವೋಸ್ ಕಾರ್ಯಕ್ರಮಕ್ಕೆ ಹೋಗಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ನಾನು ಪಾಲ್ಗೊಂಡೆ ಎಂದು ನುಡಿದರು.</p>.<p>ಸ್ವಾಮೀಜಿ ಹುಟ್ಟೂರು ವೀರಾಪುರ ಅಭಿವೃದ್ಧಿಗೆಂದು ಮುಖ್ಯಮಂತ್ರಿ ₹80 ಕೋಟಿ ಅನುದಾನ ನೀಡಿದ್ದಾರೆ ಎಂದು ಘೋಷಿಸಿದರು.</p>.<p>ಯಡಿಯೂರಪ್ಪ ಅವರ ಪರವಾಗಿ ಮತ್ತು ವೇದಿಕೆಯಲ್ಲಿ ಇರುವ ಗಣ್ಯರ ಪರವಾಗಿ ಪಕ್ಷಾತೀತವಾಗಿ ಮತ್ತು ಜಾತ್ಯತೀತವಾಗಿ ಮಠದ ಅಭಿವೃದ್ಧಿಗೆ ಸಹಕಾರ ನೀಡುತ್ತೇವೆ ಎಂದು ಆಶ್ವಾಸನೆ ನೀಡುತ್ತಿದ್ದೇನೆ ಎಂದು ವಿಜಯೇಂದ್ರ ಹೇಳಿದರು.</p>.<p><strong>ಸಿದ್ಧಗಂಗಾ ಮಠದಲ್ಲಿ ಸಂಸ್ಕಾರವಿದೆ: ಹೊರಟ್ಟಿ</strong></p>.<p>‘ಶಿವಕುಮಾರ ಸ್ವಾಮೀಜಿ ಅವರೇ ಭಾರತ ರತ್ನ ಅವರಿಗೆ ಏಕೆ ಕೊಡಬೇಕು ಭಾರತ ರತ್ನ. ಅವರೇ ದೊಡ್ಡ ರತ್ನ. ಬಸವಣ್ಣನನ್ನ ನಾವು ನೋಡಲಿಲ್ಲ. ಆದರೆ ಶಿವಕುಮಾರ ಸ್ವಾಮೀಜಿ ಅವರೆ ನಮಗೆ ಬಸವಣ್ಣ’ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.</p>.<p>ಜಗತ್ತಿನಲ್ಲಿ ಯಾರೂ ಕೊಡದ ಕೊಡುಗೆಯನ್ನು ಅವರು ನೀಡಿದ್ದಾರೆ. ಸದಾ ಅವರು ನಮ್ಮನಡುವೆ ಇರುತ್ತಾರೆ ಎಂದು ಅಭಿಪ್ರಾಯಪಟ್ಟರು.</p>.<p>ಸಿದ್ಧಲಿಂಗ ಸ್ವಾಮೀಜಿ ಸಹ ಮಕ್ಕಳಿಗೆ ಯಾವುದೇ ಕೊರತೆ ಆಗದಂತೆ ಮಠದ ಆಡಳಿತವನ್ನುನಡೆಸಿಕೊಂಡು ಹೋಗುತ್ತಿದ್ದಾರೆ ಎಂದು ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>