ಮುಖಂಡ ನಟರಾಜು ಮಾತನಾಡಿ, ಗ್ರಾಮವು ಪಂಚಾಯಿತಿ ಕೇಂದ್ರ ಸ್ಥಾನವಾಗಿದ್ದು, ಸಾಕಷ್ಟು ವಾಹನ, ಜನರು ತಿರುಗಾಡುವುದರಿಂದ ರಸ್ತೆಸೌಕರ್ಯದ ಅಗತ್ಯವಿದೆ. ಅಧಿಕಾರಿಗಳನ್ನು ಕೇಳಿದರೆ ಯಾವುದೇ ಅನುದಾನವಿಲ್ಲ ಎಂದು ಹೇಳುತ್ತಾರೆ. ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ಈ ರಸ್ತೆಯ ಸ್ಥಿತಿ ಹೀಗಾದರೆ ಹೇಗೆ ಎಂದು ಪ್ರಶ್ನಿಸಿದರು.