<p><strong>ಪಾವಗಡ:</strong> ಬಾಂಗ್ಲಾದೇಶದಲ್ಲಿ ಧಾರ್ಮಿಕ ಮುಖಂಡ ಚಿನ್ಮಯಿ ಕೃಷ್ಣದಾಸ್ ಪ್ರಭು ಅವರ ಬಂಧನ ಖಂಡಿಸಿ ವಿಶ್ವಹಿಂದೂ ಪರಿಷತ್, ಬಜರಂಗದಳದ ಪದಾಧಿಕಾರಿಗಳು ಶುಕ್ರವಾರ ಪಟ್ಟಣದ ಶನೈಶ್ಚರ ದೇಗುಲ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.</p>.<p>ವಿಶ್ವ ಹಿಂದೂ ಪರಿಷತ್ ಕೇಂದ್ರೀಯ ಸತ್ಸಂಗ ಪ್ರಮುಖ ಮಹಾಬಲೇಶ್ವರ ಮಾತನಾಡಿ, ಹಿಂದೂ ಸಮಾಜದ ಮೇಲೆ ಆಗುತ್ತಿರುವ ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕು. ಇದು ಹೀಗೆ ಮುಂದುವರಿಯಲು ಕೇಂದ್ರ ಸರ್ಕಾರ ಬಿಡಬಾರದು. ಅನೇಕ ಸಮಾಜ ಸೇವಾ ಚಟುವಟಿಕೆ ತೊಡಗಿಸಿಕೊಂಡು ಲಕ್ಷಾಂತರ ಜನರಿಗೆ ದಾಸೋಹ ಹಾಗೂ ಶಿಕ್ಷಣ ನೀಡುತ್ತಿರುವ ಚಿನ್ಮಯಿ ಕೃಷ್ಣ ದಾಸ್ ಪ್ರಭು ಅವರನ್ನೂ ಶೀಘ್ರ ಬಿಡುಗಡೆ ಮಾಡಬೇಕು ಎಂದರು.</p>.<p>ತುಮಕೂರು ವಿಭಾಗ ಕಾರ್ಯದರ್ಶಿ ಸಂಜಯ್, ಜಿಲ್ಲಾ ಸಂಯೋಜಕ ಸುಮನ್, ಸಂಯೋಜಕ ರವಿ, ರಾಕೇಶ್, ಕಾರ್ತಿಕ್, ವಿದ್ಯಾರ್ಥಿ ಮಹೇಶ್, ಗಗನ್, ಸಾಯಿ, ರಾಜು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ:</strong> ಬಾಂಗ್ಲಾದೇಶದಲ್ಲಿ ಧಾರ್ಮಿಕ ಮುಖಂಡ ಚಿನ್ಮಯಿ ಕೃಷ್ಣದಾಸ್ ಪ್ರಭು ಅವರ ಬಂಧನ ಖಂಡಿಸಿ ವಿಶ್ವಹಿಂದೂ ಪರಿಷತ್, ಬಜರಂಗದಳದ ಪದಾಧಿಕಾರಿಗಳು ಶುಕ್ರವಾರ ಪಟ್ಟಣದ ಶನೈಶ್ಚರ ದೇಗುಲ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.</p>.<p>ವಿಶ್ವ ಹಿಂದೂ ಪರಿಷತ್ ಕೇಂದ್ರೀಯ ಸತ್ಸಂಗ ಪ್ರಮುಖ ಮಹಾಬಲೇಶ್ವರ ಮಾತನಾಡಿ, ಹಿಂದೂ ಸಮಾಜದ ಮೇಲೆ ಆಗುತ್ತಿರುವ ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕು. ಇದು ಹೀಗೆ ಮುಂದುವರಿಯಲು ಕೇಂದ್ರ ಸರ್ಕಾರ ಬಿಡಬಾರದು. ಅನೇಕ ಸಮಾಜ ಸೇವಾ ಚಟುವಟಿಕೆ ತೊಡಗಿಸಿಕೊಂಡು ಲಕ್ಷಾಂತರ ಜನರಿಗೆ ದಾಸೋಹ ಹಾಗೂ ಶಿಕ್ಷಣ ನೀಡುತ್ತಿರುವ ಚಿನ್ಮಯಿ ಕೃಷ್ಣ ದಾಸ್ ಪ್ರಭು ಅವರನ್ನೂ ಶೀಘ್ರ ಬಿಡುಗಡೆ ಮಾಡಬೇಕು ಎಂದರು.</p>.<p>ತುಮಕೂರು ವಿಭಾಗ ಕಾರ್ಯದರ್ಶಿ ಸಂಜಯ್, ಜಿಲ್ಲಾ ಸಂಯೋಜಕ ಸುಮನ್, ಸಂಯೋಜಕ ರವಿ, ರಾಕೇಶ್, ಕಾರ್ತಿಕ್, ವಿದ್ಯಾರ್ಥಿ ಮಹೇಶ್, ಗಗನ್, ಸಾಯಿ, ರಾಜು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>