ರಾಜ್ಯದಲ್ಲಿರುವ ಒಕ್ಕಲಿಗರ ಸಂಘಟನಾ ಶಕ್ತಿ ಒಗ್ಗಟ್ಟನ್ನು ಜಾತಿ ಜನಗಣತಿಯಲ್ಲಿ ಸಾಬೀತು ಮಾಡಬೇಕು. ಉಪ ಪಂಗಡಗಳ ಮೂಲಕ ಒಕ್ಕಲಿಗ ಸಮಾಜ ವಿಘಟನೆ ಆಗಬಾರದು. ಸಂಘಟಿತರಾದರೆ ಸಾಮಾಜಿಕಶೈಕ್ಷಣಿಕ ರಾಜಕೀಯ ಶಕ್ತಿ ಮೂಡುತ್ತದೆ. ಎಲ್ಲ ಉಪ ಪಂಗಡಗಳೂ ಒಕ್ಕಲಿಗರಾಗಿ ಒಟ್ಟಾಗಿ ಸಾಗೋಣ ಎಂದು ನಂಜಾವಧೂತ ಸ್ವಾಮೀಜಿ ಸಲಹೆ ಮಾಡಿದರು. ಒಕ್ಕಲಿಗರ ಸಂಘದ ವಿದ್ಯಾರ್ಥಿ ನಿಲಯಗಳಲ್ಲಿ ಉಪ ಪಂಗಡಗಳ ವ್ಯತ್ಯಾಸವಿಲ್ಲದೆ ಒಕ್ಕಲಿಗ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಸಂಘಟಿತರಾಗಿ ನಮ್ಮ ಸಮಾಜದಲ್ಲಿ ಹಿಂದುಳಿದ ಕಟ್ಟಕಡೆಯ ವ್ಯಕ್ತಿಗೂ ಸವಲತ್ತು ದೊರೆಯುವಂತೆ ನೋಡಿಕೊಳ್ಳೋಣ ಎಂದರು.