<p><strong>ತಿಪಟೂರು:</strong> ಸ್ಪಂದನ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದಿಂದ ಫೆ.13 ರಿಂದ 16ರ ವರೆಗೆ ನಗರದ ಕಲ್ಪತರು ಕ್ರೀಡಾಂಗಣದಲ್ಲಿ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ.</p>.<p>‘13ರಂದು ಸಂಜೆ 6 ಗಂಟೆಗೆ ಶಾಸಕ ಕೆ.ಷಡಕ್ಷರಿ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಭಾಗವಹಿಸಲಿದ್ದಾರೆ. 16 ರಂದು ಸಮಾರೋಪ ಸಮಾರಂಭ ನಡೆಯಲಿದೆ’ ಎಂದು ಎಂದು ಸಂಘದ ಸದಸ್ಯ ನವೀನ್ಕುಮಾರ್ ಇಲ್ಲಿ ಸೋಮವಾರ ತಿಳಿಸಿದರು.</p>.<p>ಪ್ರತಿ ದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಪಂದ್ಯಗಳ ವೀಕ್ಷಣೆಗೆ 3 ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಉದ್ಘಾಟನೆ ದಿನ ಬೆಳಿಗ್ಗೆ 9 ಗಂಟೆಗೆ ನಗರದ ಕೆಂಪಮ್ಮ ದೇವಿ ದೇವಸ್ಥಾನದಿಂದ ಕ್ರೀಡಾಂಗಣದ ವರೆಗೆ ಮೆರವಣಿಗೆ ನಡೆಯಲಿದೆ. ವಿವಿಧ ಜಾನಪದ ಕಲಾತಂಡಗಳು ಮೆರುಗು ನೀಡಲಿವೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಮುಖಂಡರಾದ ನಿಜಗುಣ, ಮಾದಿಹಳ್ಳಿ ರೇಣು, ವಿಜಯ್ಕುಮಾರ್, ಸಿದ್ದರಾಮಣ್ಣ, ಸಂಗಮೇಶ್ ಕಳ್ಳಿಹಾಳ್, ತೋಂಟಾರಾಧ್ಯ, ಓಹಿಲಾ ಗಂಗಾಧರ್, ಹೇಮಂತ್, ನಂಜೆಗೌಡ, ಉದಯ್ಶಂಕರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು:</strong> ಸ್ಪಂದನ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದಿಂದ ಫೆ.13 ರಿಂದ 16ರ ವರೆಗೆ ನಗರದ ಕಲ್ಪತರು ಕ್ರೀಡಾಂಗಣದಲ್ಲಿ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ.</p>.<p>‘13ರಂದು ಸಂಜೆ 6 ಗಂಟೆಗೆ ಶಾಸಕ ಕೆ.ಷಡಕ್ಷರಿ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಭಾಗವಹಿಸಲಿದ್ದಾರೆ. 16 ರಂದು ಸಮಾರೋಪ ಸಮಾರಂಭ ನಡೆಯಲಿದೆ’ ಎಂದು ಎಂದು ಸಂಘದ ಸದಸ್ಯ ನವೀನ್ಕುಮಾರ್ ಇಲ್ಲಿ ಸೋಮವಾರ ತಿಳಿಸಿದರು.</p>.<p>ಪ್ರತಿ ದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಪಂದ್ಯಗಳ ವೀಕ್ಷಣೆಗೆ 3 ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಉದ್ಘಾಟನೆ ದಿನ ಬೆಳಿಗ್ಗೆ 9 ಗಂಟೆಗೆ ನಗರದ ಕೆಂಪಮ್ಮ ದೇವಿ ದೇವಸ್ಥಾನದಿಂದ ಕ್ರೀಡಾಂಗಣದ ವರೆಗೆ ಮೆರವಣಿಗೆ ನಡೆಯಲಿದೆ. ವಿವಿಧ ಜಾನಪದ ಕಲಾತಂಡಗಳು ಮೆರುಗು ನೀಡಲಿವೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಮುಖಂಡರಾದ ನಿಜಗುಣ, ಮಾದಿಹಳ್ಳಿ ರೇಣು, ವಿಜಯ್ಕುಮಾರ್, ಸಿದ್ದರಾಮಣ್ಣ, ಸಂಗಮೇಶ್ ಕಳ್ಳಿಹಾಳ್, ತೋಂಟಾರಾಧ್ಯ, ಓಹಿಲಾ ಗಂಗಾಧರ್, ಹೇಮಂತ್, ನಂಜೆಗೌಡ, ಉದಯ್ಶಂಕರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>