<p><strong>ಮಧುಗಿರಿ</strong>: ಮೂರು ದಿನದ ದಿನದ ಹಿಂದೆ ಗ್ರಾಮದ ಊಟ ಮಾಡಿದ ನಂತರ ವಾಂತಿಭೇದಿಯಿಂದ ಅಸ್ವಸ್ಥಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಲ್ಲೂಕಿನ ಪುರವರ ಹೋಬಳಿಯ ಮುದ್ದೇನಹಳ್ಳಿ ಗ್ರಾಮದ 70 ವರ್ಷದ ವ್ಯಕ್ತಿಯೊಬ್ಬರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ.</p>.<p>ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಮುದ್ದೇನಹಳ್ಳಿ ಗ್ರಾಮದ ತಿಪ್ಪೇರಾಯಣ್ಣ(70) ಎಂಬುವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮತ್ತಿಬ್ಬರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. </p>.<p>ಆಗಸ್ಟ್ 26ರಂದು ಗ್ರಾಮದ ಎರಡು ಮನೆಗಳಲ್ಲಿ ಊಟ ಮಾಡಿ ವಾಂತಿಭೇದಿಯಿಂದ ಅಸ್ವಸ್ಥಗೊಂಡ ಏಳು ಮಂದಿಯನ್ನು ವಿವಿಧ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಗ್ರಾಮಕ್ಕೆ ತಾಲ್ಲೂಕು ವೈದ್ಯಾಧಿಕಾರಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<p>ತಾಲ್ಲೂಕಿನ ಬುಳ್ಳಸಂದ್ರ ಗ್ರಾಮದಲ್ಲಿ ವಾಂತಿಭೇದಿಯಿಂದ ಅಸ್ವಸ್ಥಗೊಂಡಿದ್ದ 31 ಜನರ ಪೈಕಿ ಮೂವರು ಮೃತಪಟ್ಟ ಘಟನೆ ನಡೆದ ಎರಡು, ಮೂರು ದಿನಗಳಲ್ಲಿಯೇ ತಾಲ್ಲೂಕಿನಲ್ಲಿ ಮತ್ತೊಂದು ಘಟನೆ ಸಂಭವಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ</strong>: ಮೂರು ದಿನದ ದಿನದ ಹಿಂದೆ ಗ್ರಾಮದ ಊಟ ಮಾಡಿದ ನಂತರ ವಾಂತಿಭೇದಿಯಿಂದ ಅಸ್ವಸ್ಥಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಲ್ಲೂಕಿನ ಪುರವರ ಹೋಬಳಿಯ ಮುದ್ದೇನಹಳ್ಳಿ ಗ್ರಾಮದ 70 ವರ್ಷದ ವ್ಯಕ್ತಿಯೊಬ್ಬರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ.</p>.<p>ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಮುದ್ದೇನಹಳ್ಳಿ ಗ್ರಾಮದ ತಿಪ್ಪೇರಾಯಣ್ಣ(70) ಎಂಬುವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮತ್ತಿಬ್ಬರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. </p>.<p>ಆಗಸ್ಟ್ 26ರಂದು ಗ್ರಾಮದ ಎರಡು ಮನೆಗಳಲ್ಲಿ ಊಟ ಮಾಡಿ ವಾಂತಿಭೇದಿಯಿಂದ ಅಸ್ವಸ್ಥಗೊಂಡ ಏಳು ಮಂದಿಯನ್ನು ವಿವಿಧ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಗ್ರಾಮಕ್ಕೆ ತಾಲ್ಲೂಕು ವೈದ್ಯಾಧಿಕಾರಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<p>ತಾಲ್ಲೂಕಿನ ಬುಳ್ಳಸಂದ್ರ ಗ್ರಾಮದಲ್ಲಿ ವಾಂತಿಭೇದಿಯಿಂದ ಅಸ್ವಸ್ಥಗೊಂಡಿದ್ದ 31 ಜನರ ಪೈಕಿ ಮೂವರು ಮೃತಪಟ್ಟ ಘಟನೆ ನಡೆದ ಎರಡು, ಮೂರು ದಿನಗಳಲ್ಲಿಯೇ ತಾಲ್ಲೂಕಿನಲ್ಲಿ ಮತ್ತೊಂದು ಘಟನೆ ಸಂಭವಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>