<p><strong>ತುಮಕೂರು</strong>: ‘ನನಗೆ ಕ್ರಾಂತಿ ಬೇಡ. ಜಗತ್ತಿನ ಇತಿಹಾಸದಲ್ಲಿ ಕ್ರಾಂತಿಗಳು ವಾಂತಿ ತಂದಿವೆ. ಯಾವುದೇ ಕ್ರಾಂತಿ ಮನುಷ್ಯನ ಅಭ್ಯುದಯವನ್ನು ಸಕಾರಾತ್ಮಕವಾಗಿ ತೆಗೆದುಕೊಂಡು ಹೋಗಿಲ್ಲ’ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ವಿರೇಶಾನಂದ ಸರಸ್ವತಿ ಭಾನುವಾರ ಇಲ್ಲಿ ಹೇಳಿದರು.</p>.<p>ನಗರದ ರೈಲ್ವೆ ನಿಲ್ದಾಣ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ ನಡೆದ ‘ಸ್ನೇಹ ಸಂಗಮ’ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ನಾನು ಜಾತಿ ಇಲ್ಲದ, ಜಾಥಾ ಒಲ್ಲದ ಸ್ವಾಮೀಜಿ. ನನಗೆ ಪ್ರಾಯೋಗಿಕ ಬೆಳವಣಿಗೆಗಳು ಬೇಕು’ ಎಂದರು.</p>.<p>‘ಸುಳ್ಳು, ಮೋಸ, ವಂಚನೆಯ ಮಾತುಗಳು ಜೀವನದಲ್ಲಿ ಎಂದಿಗೂ ಸಹಾಯಕ್ಕೆ ಬರುವುದಿಲ್ಲ. ಕಾಲೇಜಿನಲ್ಲಿ ಮೆರಿಟ್ ಗೌರವಿಸದಿದ್ದರೆ ಸಹಜವಾಗಿ ಬೇರೆಡೆಗೆ ಹರಿದು ಹೋಗುತ್ತದೆ. ಮೆರಿಟ್ ಹೊಂದಿದವರು ವಿಶ್ವಪ್ರಜೆಯಾಗುತ್ತಾನೆ. ಮೆರಿಟ್ ಇದ್ದರೆ ಪ್ರಪಂಚ ನಿಮ್ಮನ್ನು ಬಯಸುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ, ‘ರಾಜ್ಯದಲ್ಲಿ 400ಕ್ಕೂ ಹೆಚ್ಚು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿದ್ದು, ಅದರಲ್ಲಿ 398 ಕಾಲೇಜುಗಳಲ್ಲಿ ಪ್ರಾಂಶುಪಾಲರ ಹುದ್ದೆಗಳು ಖಾಲಿ ಇವೆ. ಮನೆಯಲ್ಲಿ ಮನೆಯ ಯಜಮಾನನೇ ಇಲ್ಲವಾದರೆ ಆ ಮನೆ ಹೇಗೆ ನಡೆಯುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬಹುದು’ ಎಂದರು.</p>.<p>ಕಾಲೇಜು ಪ್ರಾಂಶುಪಾಲ ಪ್ರೊ.ಜಗದೀಶ್, ‘ಸರ್ಕಾರಿ ಪ್ರಥಮ ದರ್ಜೆ ಕಾಲೇಜು 2011-12ರಲ್ಲಿ ಆರಂಭವಾಗಿದ್ದು, ಕೆಲವೇ ತಿಂಗಳಲ್ಲಿ ದಶಮಾನೋತ್ಸವ ಆಚರಿಸಿಕೊಳ್ಳಲಿದೆ’ ಎಂದು ತಿಳಿಸಿದರು.</p>.<p>ಕಾಲೇಜಿನ ಹಳೇ ವಿದ್ಯಾರ್ಥಿ ಸಬ್ಇನ್ಸ್ಪೆಕ್ಟರ್ ಎನ್.ರಂಗನಾಥ್, ನಿವೃತ್ತ ಪ್ರಾಂಶುಪಾಲ ಪ್ರೊ.ಚಿಕ್ಕಹನುಮಯ್ಯ, ಬಿಸಿಎ ವಿಭಾಗದಲ್ಲಿ 7ನೇ ರ್ಯಾಂಕ್ ಪಡೆದ ಸೌಂದರ್ಯ ಅವರನ್ನು ಗೌರವಿಸಲಾಯಿತು.</p>.<p>ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ಗಂಗಾಧರ್, ಡಿ.ಚಂದ್ರಪ್ಪ, ಸಿಂಡಿಕೇಟ್ ಸದಸ್ಯ ಆರ್.ಕೆ.ಶ್ರೀನಿವಾಸ್, ಪ್ರೊ.ಎ.ಆರ್.ಮಹೇಶ್, ಸುಹಾಸ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ‘ನನಗೆ ಕ್ರಾಂತಿ ಬೇಡ. ಜಗತ್ತಿನ ಇತಿಹಾಸದಲ್ಲಿ ಕ್ರಾಂತಿಗಳು ವಾಂತಿ ತಂದಿವೆ. ಯಾವುದೇ ಕ್ರಾಂತಿ ಮನುಷ್ಯನ ಅಭ್ಯುದಯವನ್ನು ಸಕಾರಾತ್ಮಕವಾಗಿ ತೆಗೆದುಕೊಂಡು ಹೋಗಿಲ್ಲ’ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ವಿರೇಶಾನಂದ ಸರಸ್ವತಿ ಭಾನುವಾರ ಇಲ್ಲಿ ಹೇಳಿದರು.</p>.<p>ನಗರದ ರೈಲ್ವೆ ನಿಲ್ದಾಣ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ ನಡೆದ ‘ಸ್ನೇಹ ಸಂಗಮ’ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ನಾನು ಜಾತಿ ಇಲ್ಲದ, ಜಾಥಾ ಒಲ್ಲದ ಸ್ವಾಮೀಜಿ. ನನಗೆ ಪ್ರಾಯೋಗಿಕ ಬೆಳವಣಿಗೆಗಳು ಬೇಕು’ ಎಂದರು.</p>.<p>‘ಸುಳ್ಳು, ಮೋಸ, ವಂಚನೆಯ ಮಾತುಗಳು ಜೀವನದಲ್ಲಿ ಎಂದಿಗೂ ಸಹಾಯಕ್ಕೆ ಬರುವುದಿಲ್ಲ. ಕಾಲೇಜಿನಲ್ಲಿ ಮೆರಿಟ್ ಗೌರವಿಸದಿದ್ದರೆ ಸಹಜವಾಗಿ ಬೇರೆಡೆಗೆ ಹರಿದು ಹೋಗುತ್ತದೆ. ಮೆರಿಟ್ ಹೊಂದಿದವರು ವಿಶ್ವಪ್ರಜೆಯಾಗುತ್ತಾನೆ. ಮೆರಿಟ್ ಇದ್ದರೆ ಪ್ರಪಂಚ ನಿಮ್ಮನ್ನು ಬಯಸುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ, ‘ರಾಜ್ಯದಲ್ಲಿ 400ಕ್ಕೂ ಹೆಚ್ಚು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿದ್ದು, ಅದರಲ್ಲಿ 398 ಕಾಲೇಜುಗಳಲ್ಲಿ ಪ್ರಾಂಶುಪಾಲರ ಹುದ್ದೆಗಳು ಖಾಲಿ ಇವೆ. ಮನೆಯಲ್ಲಿ ಮನೆಯ ಯಜಮಾನನೇ ಇಲ್ಲವಾದರೆ ಆ ಮನೆ ಹೇಗೆ ನಡೆಯುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬಹುದು’ ಎಂದರು.</p>.<p>ಕಾಲೇಜು ಪ್ರಾಂಶುಪಾಲ ಪ್ರೊ.ಜಗದೀಶ್, ‘ಸರ್ಕಾರಿ ಪ್ರಥಮ ದರ್ಜೆ ಕಾಲೇಜು 2011-12ರಲ್ಲಿ ಆರಂಭವಾಗಿದ್ದು, ಕೆಲವೇ ತಿಂಗಳಲ್ಲಿ ದಶಮಾನೋತ್ಸವ ಆಚರಿಸಿಕೊಳ್ಳಲಿದೆ’ ಎಂದು ತಿಳಿಸಿದರು.</p>.<p>ಕಾಲೇಜಿನ ಹಳೇ ವಿದ್ಯಾರ್ಥಿ ಸಬ್ಇನ್ಸ್ಪೆಕ್ಟರ್ ಎನ್.ರಂಗನಾಥ್, ನಿವೃತ್ತ ಪ್ರಾಂಶುಪಾಲ ಪ್ರೊ.ಚಿಕ್ಕಹನುಮಯ್ಯ, ಬಿಸಿಎ ವಿಭಾಗದಲ್ಲಿ 7ನೇ ರ್ಯಾಂಕ್ ಪಡೆದ ಸೌಂದರ್ಯ ಅವರನ್ನು ಗೌರವಿಸಲಾಯಿತು.</p>.<p>ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ಗಂಗಾಧರ್, ಡಿ.ಚಂದ್ರಪ್ಪ, ಸಿಂಡಿಕೇಟ್ ಸದಸ್ಯ ಆರ್.ಕೆ.ಶ್ರೀನಿವಾಸ್, ಪ್ರೊ.ಎ.ಆರ್.ಮಹೇಶ್, ಸುಹಾಸ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>