<p><strong>ಚಿಕ್ಕನಾಯಕನಹಳ್ಳಿ: </strong>ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರು ಜವಾಬ್ದಾರಿ ಅರಿತು ಮತ ಚಲಾಯಿಸಿ, ಯೋಗ್ಯ ಅಭ್ಯರ್ಥಿ ಆಯ್ಕೆಯಿಂದ ಸಂವಿಧಾನದ ಆಶಯ ಈಡೇರಿಸಬಹುದು ಎಂದು ಪ್ರಾಂಶುಪಾಲ ಎಚ್.ಎಸ್.ಶಿವಯೋಗಿ ಹೇಳಿದರು.</p>.<p>ಪಟ್ಟಣದ ನವೋದಯ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗ ಮತ್ತು ತಾಲ್ಲೂಕು ಸಾಕ್ಷರತಾ ಸಮಿತಿಯ ಸಹಯೋಗದಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಯಿತು.</p>.<p>ವಿಭಾಗದ ಮುಖ್ಯಸ್ಥ ಪ್ರೊ.ಸದಾನಂದ ಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳಿಗೆ ಮತದಾನ ಮತ್ತು ಅದರ ಮಹತ್ವ ಕುರಿತು ಉಪನ್ಯಾಸ ನೀಡಿದರು.</p>.<p>ಎನ್ಎಸ್ಎಸ್ ಅಧಿಕಾರಿ ಪ್ರೊ.ರವಿಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮತದಾನ ಕುರಿತು ಉಪನ್ಯಾಸ, ಪ್ರಬಂಧ ಸ್ಪರ್ಧೆ ಏರ್ಪಡಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.</p>.<p>ವೇದಿಕೆಯಲ್ಲಿ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಎಚ್.ಎಸ್. ಪ್ರಕಾಶ, ಕನ್ನಡ ವಿಭಾಗದ ಡಾ.ಸಿ.ಕೆ.ಶೇಖರ್ ಉಪಸ್ಥಿತರಿದ್ದರು.</p>.<p>ಸಾರ್ವಜನಿಕರಿಗೆ ಮತದಾನ ಅರಿವು ಮೂಡಿಸಲು ಜಾಥಾ ಹಮ್ಮಿಕೊಳ್ಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕನಾಯಕನಹಳ್ಳಿ: </strong>ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರು ಜವಾಬ್ದಾರಿ ಅರಿತು ಮತ ಚಲಾಯಿಸಿ, ಯೋಗ್ಯ ಅಭ್ಯರ್ಥಿ ಆಯ್ಕೆಯಿಂದ ಸಂವಿಧಾನದ ಆಶಯ ಈಡೇರಿಸಬಹುದು ಎಂದು ಪ್ರಾಂಶುಪಾಲ ಎಚ್.ಎಸ್.ಶಿವಯೋಗಿ ಹೇಳಿದರು.</p>.<p>ಪಟ್ಟಣದ ನವೋದಯ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗ ಮತ್ತು ತಾಲ್ಲೂಕು ಸಾಕ್ಷರತಾ ಸಮಿತಿಯ ಸಹಯೋಗದಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಯಿತು.</p>.<p>ವಿಭಾಗದ ಮುಖ್ಯಸ್ಥ ಪ್ರೊ.ಸದಾನಂದ ಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳಿಗೆ ಮತದಾನ ಮತ್ತು ಅದರ ಮಹತ್ವ ಕುರಿತು ಉಪನ್ಯಾಸ ನೀಡಿದರು.</p>.<p>ಎನ್ಎಸ್ಎಸ್ ಅಧಿಕಾರಿ ಪ್ರೊ.ರವಿಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮತದಾನ ಕುರಿತು ಉಪನ್ಯಾಸ, ಪ್ರಬಂಧ ಸ್ಪರ್ಧೆ ಏರ್ಪಡಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.</p>.<p>ವೇದಿಕೆಯಲ್ಲಿ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಎಚ್.ಎಸ್. ಪ್ರಕಾಶ, ಕನ್ನಡ ವಿಭಾಗದ ಡಾ.ಸಿ.ಕೆ.ಶೇಖರ್ ಉಪಸ್ಥಿತರಿದ್ದರು.</p>.<p>ಸಾರ್ವಜನಿಕರಿಗೆ ಮತದಾನ ಅರಿವು ಮೂಡಿಸಲು ಜಾಥಾ ಹಮ್ಮಿಕೊಳ್ಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>