ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಜಾನಕಿರಾಂ ಮಾತನಾಡಿ, ಮತದಾನದ ಪ್ರಮಾಣ ಹೆಚ್ಚಿಸಲು ತಾಲ್ಲೂಕಿನಾದ್ಯಂತ ಬೈಕ್ ರಾಲಿ, ಕಾಲ್ನಡಿಗೆ ಜಾಥಾ, ಬೀದಿ ನಾಟಕ ಸೇರಿದಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಪೊಲೀಸ್ ಇನ್ಸ್ಪೆಕ್ಟರ್ ಸುರೇಶ್, ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ಮಲ್ಲಿಕಾರ್ಜುನ, ಸಹಾಯಕ ನಿರ್ದೇಶಕ ರಂಗನಾಥ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುನೀತ, ಬಿಸಿಎಂ ಇಲಾಖೆಯ ಗೋಪಾಲಪ್ಪ, ಸಮಾಜಕಲ್ಯಾಣ ಇಲಾಖೆಯ ಯಮುನಾ ಉಪಸ್ಥಿತರಿದ್ದರು.