<p>ಪ್ರಜಾವಾಣಿ ವಾರ್ತೆ</p>.<p><strong>ತಿಪಟೂರು</strong>: ಶಿಕ್ಷಣ ಎಂಬುದು ಜೀವಮಾನದ ಅನ್ವೇಷಣೆಯಾಗಿದ್ದು, ಪ್ರತಿಯೊಂದು ಅನುಭವವೂ ಒಂದೊಂದು ಪಾಠ. ಕುತೂಹಲ, ಸಹಾನುಭೂತಿ, ಸಮಾನತೆ ಮತ್ತು ಒಳಗೊಳ್ಳುವಿಕೆಯ ಆದರ್ಶಗಳಿಗೆ ಬದ್ಧರಾಗಿದ್ದು, ಬುದ್ಧಿಶಕ್ತಿ ಬೆಳಗುತ್ತಾ, ಕೌಶಲ ವೃದ್ಧಿಸಿಕೊಳ್ಳಬೇಕಿದೆ ಎಂದು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ವಿದ್ಯಾಶಂಕರ್ ಎಸ್. ತಿಳಿಸಿದರು.</p>.<p>ನಗರದ ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಶನಿವಾರ ಪದವೀಧರರಿಗೆ ಪದವಿ ಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಶಿಕ್ಷಣ, ಕೌಶಲ, ಜಾಗತಿಕ ಮಾರುಕಟ್ಟೆಯನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳ ಸಾಮರ್ಥ್ಯ ಬೆಳೆಸಿಕೊಳ್ಳಲು ಸಹಾಯ ಮಾಡುತ್ತದೆ. ಹೀಗಾಗಿ ವಿಟಿಯು ಆಡಳಿತ ಮತ್ತು ಪರೀಕ್ಷಾ ಕೇಂದ್ರಿತಕ್ಕಿಂತ ಹೆಚ್ಚಾಗಿ ವಿದ್ಯಾರ್ಥಿ ಕೇಂದ್ರಿತವಾಗಿದೆ ಎಂದರು.</p>.<p>ರಾಜ್ಯದಲ್ಲಿ ಐದು ಸಾವಿರಕ್ಕೂ ಅಧಿಕ ಎಂಜಿನಿಯರಿಂಗ್ ಕಾಲೇಜುಗಳಿದ್ದು, 12 ಸಾವಿರಕ್ಕೂ ಹೆಚ್ಚು ಎಂಜಿನಿಯರಿಂಗ್ ವಿದ್ಯಾರ್ಥಿಗಳಿದ್ದಾರೆ. ಯಾವ ಹುದ್ದೆಯಲ್ಲಿದ್ದರೂ ಮೊದಲು ಮಾನವನಾಗಿ ದೇಶಪ್ರೇಮಿಯಾಗಿ ಕರ್ತವ್ಯ ನಿರ್ವಹಿಸಿದಾಗ ಗೌರವ ಸಿಗುತ್ತದೆ ಎಂದು ಹೇಳಿದರು.</p>.<p>ವಿಟಿಯು ಶೈಕ್ಷಣಿಕ ಸೆನೆಟ್ ಸದಸ್ಯ ಎಚ್.ಬಿ. ಬಾಲಕೃಷ್ಣ ಮಾತನಾಡಿ, ಕಲ್ಪತರು ತಾಂತ್ರಿಕ ವಿದ್ಯಾಲಯ ಉನ್ನತ ಕ್ಯಾಂಪಸ್ ಹೊಂದಿದೆ. ನುರಿತ ತಜ್ಞರೊಂದಿಗೆ ಶಿಕ್ಷಣ ನೀಡುತ್ತಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಮಟ್ಟದಲ್ಲಿ 10ನೇ ರ್ಯಾಂಕ್ ಗಳಿಸಿದ ಶೃತಿ ಎಚ್.ಎಂ ಹಾಗೂ ಐವರು ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. 315 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.</p>.<p>ಸಂಸ್ಥೆಯ ಅಧ್ಯಕ್ಷ ಪಿ.ಕೆ.ತಿಪ್ಪೇರುದ್ರಪ್ಪ, ಖಜಾಂಚಿ ಟಿ.ಎಸ್.ಶಿವಪ್ರಸಾದ್, ಉಪಾಧ್ಯಕ್ಷ ಬಾಗೇಪಲ್ಲಿ ನಟರಾಜು, ಜಿ.ಪಿ.ದೀಪಕ್, ಕಾರ್ಯದರ್ಶಿ ಜಿ.ಎಸ್.ಉಮಾಶಂಕರ್, ಎಂ.ಆರ್.ಸಂಗಮೇಶ್, ಟಿ.ಯು.ಜಗದೀಶ್ಮೂರ್ತಿ, ಎಚ್.ಜಿ.ಸುಧಾಕರ್, ಪ್ರಾಂಶುಪಾಲ ಎಚ್.ಸಿ.ಸತೀಶ್ಕುಮಾರ್, ಗುರುಮೂರ್ತಿ, ವಿದ್ಯಾರ್ಥಿಗಳು, ಪೋಷಕರು, ಸಿಬ್ಬಂದಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ತಿಪಟೂರು</strong>: ಶಿಕ್ಷಣ ಎಂಬುದು ಜೀವಮಾನದ ಅನ್ವೇಷಣೆಯಾಗಿದ್ದು, ಪ್ರತಿಯೊಂದು ಅನುಭವವೂ ಒಂದೊಂದು ಪಾಠ. ಕುತೂಹಲ, ಸಹಾನುಭೂತಿ, ಸಮಾನತೆ ಮತ್ತು ಒಳಗೊಳ್ಳುವಿಕೆಯ ಆದರ್ಶಗಳಿಗೆ ಬದ್ಧರಾಗಿದ್ದು, ಬುದ್ಧಿಶಕ್ತಿ ಬೆಳಗುತ್ತಾ, ಕೌಶಲ ವೃದ್ಧಿಸಿಕೊಳ್ಳಬೇಕಿದೆ ಎಂದು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ವಿದ್ಯಾಶಂಕರ್ ಎಸ್. ತಿಳಿಸಿದರು.</p>.<p>ನಗರದ ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಶನಿವಾರ ಪದವೀಧರರಿಗೆ ಪದವಿ ಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಶಿಕ್ಷಣ, ಕೌಶಲ, ಜಾಗತಿಕ ಮಾರುಕಟ್ಟೆಯನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳ ಸಾಮರ್ಥ್ಯ ಬೆಳೆಸಿಕೊಳ್ಳಲು ಸಹಾಯ ಮಾಡುತ್ತದೆ. ಹೀಗಾಗಿ ವಿಟಿಯು ಆಡಳಿತ ಮತ್ತು ಪರೀಕ್ಷಾ ಕೇಂದ್ರಿತಕ್ಕಿಂತ ಹೆಚ್ಚಾಗಿ ವಿದ್ಯಾರ್ಥಿ ಕೇಂದ್ರಿತವಾಗಿದೆ ಎಂದರು.</p>.<p>ರಾಜ್ಯದಲ್ಲಿ ಐದು ಸಾವಿರಕ್ಕೂ ಅಧಿಕ ಎಂಜಿನಿಯರಿಂಗ್ ಕಾಲೇಜುಗಳಿದ್ದು, 12 ಸಾವಿರಕ್ಕೂ ಹೆಚ್ಚು ಎಂಜಿನಿಯರಿಂಗ್ ವಿದ್ಯಾರ್ಥಿಗಳಿದ್ದಾರೆ. ಯಾವ ಹುದ್ದೆಯಲ್ಲಿದ್ದರೂ ಮೊದಲು ಮಾನವನಾಗಿ ದೇಶಪ್ರೇಮಿಯಾಗಿ ಕರ್ತವ್ಯ ನಿರ್ವಹಿಸಿದಾಗ ಗೌರವ ಸಿಗುತ್ತದೆ ಎಂದು ಹೇಳಿದರು.</p>.<p>ವಿಟಿಯು ಶೈಕ್ಷಣಿಕ ಸೆನೆಟ್ ಸದಸ್ಯ ಎಚ್.ಬಿ. ಬಾಲಕೃಷ್ಣ ಮಾತನಾಡಿ, ಕಲ್ಪತರು ತಾಂತ್ರಿಕ ವಿದ್ಯಾಲಯ ಉನ್ನತ ಕ್ಯಾಂಪಸ್ ಹೊಂದಿದೆ. ನುರಿತ ತಜ್ಞರೊಂದಿಗೆ ಶಿಕ್ಷಣ ನೀಡುತ್ತಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಮಟ್ಟದಲ್ಲಿ 10ನೇ ರ್ಯಾಂಕ್ ಗಳಿಸಿದ ಶೃತಿ ಎಚ್.ಎಂ ಹಾಗೂ ಐವರು ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. 315 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.</p>.<p>ಸಂಸ್ಥೆಯ ಅಧ್ಯಕ್ಷ ಪಿ.ಕೆ.ತಿಪ್ಪೇರುದ್ರಪ್ಪ, ಖಜಾಂಚಿ ಟಿ.ಎಸ್.ಶಿವಪ್ರಸಾದ್, ಉಪಾಧ್ಯಕ್ಷ ಬಾಗೇಪಲ್ಲಿ ನಟರಾಜು, ಜಿ.ಪಿ.ದೀಪಕ್, ಕಾರ್ಯದರ್ಶಿ ಜಿ.ಎಸ್.ಉಮಾಶಂಕರ್, ಎಂ.ಆರ್.ಸಂಗಮೇಶ್, ಟಿ.ಯು.ಜಗದೀಶ್ಮೂರ್ತಿ, ಎಚ್.ಜಿ.ಸುಧಾಕರ್, ಪ್ರಾಂಶುಪಾಲ ಎಚ್.ಸಿ.ಸತೀಶ್ಕುಮಾರ್, ಗುರುಮೂರ್ತಿ, ವಿದ್ಯಾರ್ಥಿಗಳು, ಪೋಷಕರು, ಸಿಬ್ಬಂದಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>