ತುಮಕೂರು: ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಅವರು ಭಾರತೀಯ ಸಮಾಜಕಾರ್ಯ ಪರಿಷತ್ ಸಂಸ್ಥಾಪಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಮಹಾರಾಷ್ಟ್ರದ ವಾರ್ಧಾದಲ್ಲಿ ಮಹಾತ್ಮಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ಭಾರತೀಯ ಶಿಕ್ಷಣ ಮಂಡಲ್ ಸಹಯೋಗದಲ್ಲಿ ಡಿ.15 ಮತ್ತು 16ರಂದು ನಡೆದ ರಾಷ್ಟ್ರೀಯ ಸಮ್ಮೇಳನದಲ್ಲಿ ಈ ಆಯ್ಕೆ ಮಾಡಲಾಯಿತು.
15ಕ್ಕೂ ಹೆಚ್ಚು ರಾಜ್ಯಗಳ ವಿವಿಧ ವಿಶ್ವವಿದ್ಯಾಲಯಗಳ ಸಮಾಜಕಾರ್ಯ ವಿಭಾಗದ ಅಧ್ಯಕ್ಷರು ಮತ್ತು ವೃತ್ತಿಪರ ಸಮಾಜ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಿದ್ದರು.