<p><strong>ತುಮಕೂರು:</strong> ವಿಶ್ವವಿದ್ಯಾಲಯ ಸಹಭಾಗಿತ್ವದ ಆವಿಷ್ಕಾರ ಮತ್ತು ತರಬೇತಿ ಕೇಂದ್ರವು ಎರಡೂ ವಿ.ವಿಗಳನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದೆ ಎಂದು ಇಂಗ್ಲೆಂಡ್ನ ಸೌತ್ವೇಲ್ಸ್ ವಿ.ವಿಯ ತರಬೇತಿ ವ್ಯವಸ್ಥಾಪಕ ರಿಚಿ ಟರ್ನರ್ ಹೇಳಿದರು.</p>.<p>ವಿ.ವಿಯಲ್ಲಿ ಸೋಮವಾರ ಆಯೋಜಿಸಿದ್ದ ‘ಆವಿಷ್ಕಾರ, ತರಬೇತಿ ಹಾಗೂ ಉದ್ಯಮಶೀಲತೆಗಾಗಿ ಸಹಭಾಗಿತ್ವ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಸಂಶೋಧನೆ ಆಧಾರಿತ ಅಧ್ಯಯನಗಳಿಂದ ಆವಿಷ್ಕಾರಗಳು ಸಾಧ್ಯವಾಗುತ್ತವೆ. ಪ್ರಾಧ್ಯಾಪಕರು, ವಿದ್ಯಾರ್ಥಿಗಳಿಗೆ ಸಂಶೋಧನೆಯ ಮಹತ್ವ ತಿಳಿಸುವುದೇ ಈ ಸಹಭಾಗಿತ್ವದ ಮುಖ್ಯ ಉದ್ದೇಶ ಎಂದರು.</p>.<p>ಉದ್ಯಮಿ ಎಚ್.ಜಿ.ಚಂದ್ರಶೇಖರ್, ‘ಅವಶ್ಯಕತೆಯು ಆವಿಷ್ಕಾರಗಳ ತಾಯಿ. ವಿದ್ಯಾರ್ಥಿಗಳ ಉತ್ತಮ ಆಲೋಚನೆಗಳಿಂದ ಹೊಸ ಆವಿಷ್ಕಾರಗಳು ಸಾಧ್ಯ’ ಎಂದು ತಿಳಿಸಿದರು.</p>.<p>‘ಆವಿಷ್ಕಾರ, ತರಬೇತಿ ಹಾಗೂ ಉದ್ಯಮಶೀಲತೆಗಾಗಿ ಸಹಭಾಗಿತ್ವ’ ಕೇಂದ್ರದ ಆರಂಭಕ್ಕೆ ವಿ.ವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಮತ್ತು ಸೌತ್ವೇಲ್ಸ್ ವಿ.ವಿ ತರಬೇತಿ ವ್ಯವಸ್ಥಾಪಕ ರಿಚಿ ಟರ್ನರ್ ಸಹಿ ಹಾಕಿದರು.</p>.<p>ಉದ್ಯಮಿಗಳಾದ ಆರ್.ಸುರೇಂದ್ರ ಶಾ, ಅಕ್ಷತಾ ಅಯ್ಯಂಗಾರ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಟಿ.ಜೆ.ಗಿರೀಶ್ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ವಿಶ್ವವಿದ್ಯಾಲಯ ಸಹಭಾಗಿತ್ವದ ಆವಿಷ್ಕಾರ ಮತ್ತು ತರಬೇತಿ ಕೇಂದ್ರವು ಎರಡೂ ವಿ.ವಿಗಳನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದೆ ಎಂದು ಇಂಗ್ಲೆಂಡ್ನ ಸೌತ್ವೇಲ್ಸ್ ವಿ.ವಿಯ ತರಬೇತಿ ವ್ಯವಸ್ಥಾಪಕ ರಿಚಿ ಟರ್ನರ್ ಹೇಳಿದರು.</p>.<p>ವಿ.ವಿಯಲ್ಲಿ ಸೋಮವಾರ ಆಯೋಜಿಸಿದ್ದ ‘ಆವಿಷ್ಕಾರ, ತರಬೇತಿ ಹಾಗೂ ಉದ್ಯಮಶೀಲತೆಗಾಗಿ ಸಹಭಾಗಿತ್ವ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಸಂಶೋಧನೆ ಆಧಾರಿತ ಅಧ್ಯಯನಗಳಿಂದ ಆವಿಷ್ಕಾರಗಳು ಸಾಧ್ಯವಾಗುತ್ತವೆ. ಪ್ರಾಧ್ಯಾಪಕರು, ವಿದ್ಯಾರ್ಥಿಗಳಿಗೆ ಸಂಶೋಧನೆಯ ಮಹತ್ವ ತಿಳಿಸುವುದೇ ಈ ಸಹಭಾಗಿತ್ವದ ಮುಖ್ಯ ಉದ್ದೇಶ ಎಂದರು.</p>.<p>ಉದ್ಯಮಿ ಎಚ್.ಜಿ.ಚಂದ್ರಶೇಖರ್, ‘ಅವಶ್ಯಕತೆಯು ಆವಿಷ್ಕಾರಗಳ ತಾಯಿ. ವಿದ್ಯಾರ್ಥಿಗಳ ಉತ್ತಮ ಆಲೋಚನೆಗಳಿಂದ ಹೊಸ ಆವಿಷ್ಕಾರಗಳು ಸಾಧ್ಯ’ ಎಂದು ತಿಳಿಸಿದರು.</p>.<p>‘ಆವಿಷ್ಕಾರ, ತರಬೇತಿ ಹಾಗೂ ಉದ್ಯಮಶೀಲತೆಗಾಗಿ ಸಹಭಾಗಿತ್ವ’ ಕೇಂದ್ರದ ಆರಂಭಕ್ಕೆ ವಿ.ವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಮತ್ತು ಸೌತ್ವೇಲ್ಸ್ ವಿ.ವಿ ತರಬೇತಿ ವ್ಯವಸ್ಥಾಪಕ ರಿಚಿ ಟರ್ನರ್ ಸಹಿ ಹಾಕಿದರು.</p>.<p>ಉದ್ಯಮಿಗಳಾದ ಆರ್.ಸುರೇಂದ್ರ ಶಾ, ಅಕ್ಷತಾ ಅಯ್ಯಂಗಾರ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಟಿ.ಜೆ.ಗಿರೀಶ್ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>