<p><strong>ತುಮಕೂರು:</strong> ಕೊರೊನಾ ಕೆಲಸದಲ್ಲಿ ತೊಡಗಿರುವವರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಗುರುವಾರ ಸಿಐಟಿಯು ಕರೆ ನೀಡಿದ್ದ ‘ಬೇಡಿಕೆಗಳ ದಿನ’ ಪ್ರತಿಭಟನೆಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಯಿತು.</p>.<p>ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು ಹಾಗೂ ವಿವಿಧ ವಲಯಗಳ ಕಾರ್ಮಿಕರು ಬೇಡಿಕೆಗಳ ಭಿತ್ತಿಪತ್ರಗಳನ್ನು ಹಿಡಿದು ತಾವು ಇದ್ದ ಸ್ಥಳದಲ್ಲಿಯೇ ಪ್ರತಿಭಟಿಸಿದರು. ಹೂವು ಸಾಕು, ಸುರಕ್ಷತೆ, ವಿಮೆ ಬೇಕು ಎನ್ನುವ ಘೋಷಾವಾಕ್ಯಗಳನ್ನು ಭಿತ್ತಿಪತ್ರಗಳು ಒಳಗೊಂಡಿದ್ದವು.</p>.<p>ತಾಲ್ಲೂಕು ಘಟಕಗಳ ಮುಖಂಡರು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು. ತುಮಕೂರಿನಲ್ಲಿ ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್, ಅಂಗನವಾಡಿ ನೌಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಗೌರಮ್ಮ, ಖಜಾಂಚಿ ಜಬೀನಾಬಾನು , ತುಮಕೂರು ಪೌರ ಕಾರ್ಮಿಕರ ಸಂಘದ ಪ್ರಧಾನ ಕಾರ್ಯಧರ್ಶಿ ಎನ್.ಕೆ ಸುಬ್ರಹ್ಮಣ್ಯ, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಕಂಟೈನ್ಮೆಂಟ್ ಮತ್ತು ಕೆಂಪು ವಲಯದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ಸುರಕ್ಷತೆಗಾಗಿ ಪಿಪಿಇ ಕಿಟ್ ವಿತರಿಸಬೇಕು. ಎಲ್ಲ ನೌಕರರು, ಕಾರ್ಮಿಕರಿಗೆ ಆಗಾಗ್ಗೆ ಆರೋಗ್ಯ ಪರೀಕ್ಷೆ ನಡೆಸಬೇಕು. ಕರ್ತವ್ಯದಲ್ಲಿದ್ದಾಗ ಯಾವುದೇ ರೀತಿಯಲ್ಲಿ ಮರಣ ಹೊಂದಿದವರಿಗೆ ₹ 50 ಲಕ್ಷ ವಿಮೆ ನೀಡಬೇಕು, ಅವರ ಕುಟುಂಬ ಸದಸ್ಯರಿಗೆ ಕೆಲಸ ನೀಡಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಕೊರೊನಾ ಕೆಲಸದಲ್ಲಿ ತೊಡಗಿರುವವರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಗುರುವಾರ ಸಿಐಟಿಯು ಕರೆ ನೀಡಿದ್ದ ‘ಬೇಡಿಕೆಗಳ ದಿನ’ ಪ್ರತಿಭಟನೆಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಯಿತು.</p>.<p>ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು ಹಾಗೂ ವಿವಿಧ ವಲಯಗಳ ಕಾರ್ಮಿಕರು ಬೇಡಿಕೆಗಳ ಭಿತ್ತಿಪತ್ರಗಳನ್ನು ಹಿಡಿದು ತಾವು ಇದ್ದ ಸ್ಥಳದಲ್ಲಿಯೇ ಪ್ರತಿಭಟಿಸಿದರು. ಹೂವು ಸಾಕು, ಸುರಕ್ಷತೆ, ವಿಮೆ ಬೇಕು ಎನ್ನುವ ಘೋಷಾವಾಕ್ಯಗಳನ್ನು ಭಿತ್ತಿಪತ್ರಗಳು ಒಳಗೊಂಡಿದ್ದವು.</p>.<p>ತಾಲ್ಲೂಕು ಘಟಕಗಳ ಮುಖಂಡರು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು. ತುಮಕೂರಿನಲ್ಲಿ ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್, ಅಂಗನವಾಡಿ ನೌಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಗೌರಮ್ಮ, ಖಜಾಂಚಿ ಜಬೀನಾಬಾನು , ತುಮಕೂರು ಪೌರ ಕಾರ್ಮಿಕರ ಸಂಘದ ಪ್ರಧಾನ ಕಾರ್ಯಧರ್ಶಿ ಎನ್.ಕೆ ಸುಬ್ರಹ್ಮಣ್ಯ, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಕಂಟೈನ್ಮೆಂಟ್ ಮತ್ತು ಕೆಂಪು ವಲಯದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ಸುರಕ್ಷತೆಗಾಗಿ ಪಿಪಿಇ ಕಿಟ್ ವಿತರಿಸಬೇಕು. ಎಲ್ಲ ನೌಕರರು, ಕಾರ್ಮಿಕರಿಗೆ ಆಗಾಗ್ಗೆ ಆರೋಗ್ಯ ಪರೀಕ್ಷೆ ನಡೆಸಬೇಕು. ಕರ್ತವ್ಯದಲ್ಲಿದ್ದಾಗ ಯಾವುದೇ ರೀತಿಯಲ್ಲಿ ಮರಣ ಹೊಂದಿದವರಿಗೆ ₹ 50 ಲಕ್ಷ ವಿಮೆ ನೀಡಬೇಕು, ಅವರ ಕುಟುಂಬ ಸದಸ್ಯರಿಗೆ ಕೆಲಸ ನೀಡಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>