<p>ಗುಬ್ಬಿ: ರಾಜ್ಯದ ಜಲಾಶಯಗಳಿಂದ ಕುಡಿಯುವ ನೀರು ಮತ್ತು ಕೃಷಿಗೆ ನೀರು ಬಳಸಿಕೊಳ್ಳುವ ಬಗ್ಗೆ ನ್ಯಾಯಾಲಯಗಳು ನೀಡಿರುವ ತೀರ್ಪುಗಳನ್ನು ಪ್ರಶ್ನಿಸದಿರುವುದರಿಂದಲೇ ರಾಜ್ಯಕ್ಕೆ ಸಾಕಷ್ಟು ಅನ್ಯಾಯವಾಗುತ್ತಿದೆ ಎಂದು ತುರುವೇಕೆರೆ ಕ್ಷೇತ್ರದ ಶಾಸಕ ಎಂ.ಟಿ. ಕೃಷ್ಣಪ್ಪ ಅಭಿಪ್ರಾಯಪಟ್ಟರು.</p>.<p>ಪಟ್ಟಣದಲ್ಲಿ ಮಂಗಳವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು.</p>.<p>ಕಾವೇರಿ ಜಲಾನಯನ ಪ್ರದೇಶದ ರೈತರಿಗೆ ಹಾಗೂ ಕುಡಿಯುವ ನೀರಿನ ಹಂಚಿಕೆಯಲ್ಲಿ ಸಾಕಷ್ಟು ಅನ್ಯಾಯವಾಗಿದ್ದು ಅದನ್ನು ಪ್ರಶ್ನಿಸಲೇಬೇಕಿದೆ. ಈ ಹಿಂದೆ ಯಾವುದೊ ಸಂದರ್ಭದಲ್ಲಿ ನೀಡಿದ ತೀರ್ಪನ್ನೇ ಮುಂದುವರೆಸಿಕೊಂಡು ಹೋಗುವುದು ತರವಲ್ಲ. ಅದನ್ನು ಪರಾಮರ್ಶಿಸಿ ಹೊಸ ನಿಯಮಗಳನ್ನು ರೂಪಿಸಿಕೊಳ್ಳಬೇಕಿದೆ ಎಂದು ಹೇಳಿದರು.</p>.<p>ನೀರು ಹಂಚಿಕೆ ವಿಚಾರದಲ್ಲಿ ಅನ್ಯಾಯ ಪ್ರಶ್ನಿಸಿ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಕಾನೂನು ತಜ್ಞರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.</p>.<p>ನೀರಿನ ವಿಚಾರದಲ್ಲಿ ರಾಜ್ಯದ ಜನರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಿ ಹಕ್ಕು ಮಂಡಿಸುತ್ತೇವೆ. ಅನೇಕ ವರ್ಷಗಳ ಹಿಂದೆ ಬೆಂಗಳೂರು ಮಹಾನಗರಕ್ಕೆ ನಿಗದಿಪಡಿಸಿದ್ದ ನೀರಿನ ಪ್ರಮಾಣ ಈಗ ಜನಸಂಖ್ಯೆ ಹೆಚ್ಚಾಗಿರುವುದರಿಂದ ಸಮಸ್ಯೆಯನ್ನು ತಂದೊಡ್ಡಿದೆ. ಈ ಬಗ್ಗೆ ವ್ಯವಸ್ಥಿತ ಯೋಜನೆ ರೂಪಿಸಬೇಕಿದೆ ಎಂದರು.</p>.<p>ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಬ್ಬಿ: ರಾಜ್ಯದ ಜಲಾಶಯಗಳಿಂದ ಕುಡಿಯುವ ನೀರು ಮತ್ತು ಕೃಷಿಗೆ ನೀರು ಬಳಸಿಕೊಳ್ಳುವ ಬಗ್ಗೆ ನ್ಯಾಯಾಲಯಗಳು ನೀಡಿರುವ ತೀರ್ಪುಗಳನ್ನು ಪ್ರಶ್ನಿಸದಿರುವುದರಿಂದಲೇ ರಾಜ್ಯಕ್ಕೆ ಸಾಕಷ್ಟು ಅನ್ಯಾಯವಾಗುತ್ತಿದೆ ಎಂದು ತುರುವೇಕೆರೆ ಕ್ಷೇತ್ರದ ಶಾಸಕ ಎಂ.ಟಿ. ಕೃಷ್ಣಪ್ಪ ಅಭಿಪ್ರಾಯಪಟ್ಟರು.</p>.<p>ಪಟ್ಟಣದಲ್ಲಿ ಮಂಗಳವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು.</p>.<p>ಕಾವೇರಿ ಜಲಾನಯನ ಪ್ರದೇಶದ ರೈತರಿಗೆ ಹಾಗೂ ಕುಡಿಯುವ ನೀರಿನ ಹಂಚಿಕೆಯಲ್ಲಿ ಸಾಕಷ್ಟು ಅನ್ಯಾಯವಾಗಿದ್ದು ಅದನ್ನು ಪ್ರಶ್ನಿಸಲೇಬೇಕಿದೆ. ಈ ಹಿಂದೆ ಯಾವುದೊ ಸಂದರ್ಭದಲ್ಲಿ ನೀಡಿದ ತೀರ್ಪನ್ನೇ ಮುಂದುವರೆಸಿಕೊಂಡು ಹೋಗುವುದು ತರವಲ್ಲ. ಅದನ್ನು ಪರಾಮರ್ಶಿಸಿ ಹೊಸ ನಿಯಮಗಳನ್ನು ರೂಪಿಸಿಕೊಳ್ಳಬೇಕಿದೆ ಎಂದು ಹೇಳಿದರು.</p>.<p>ನೀರು ಹಂಚಿಕೆ ವಿಚಾರದಲ್ಲಿ ಅನ್ಯಾಯ ಪ್ರಶ್ನಿಸಿ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಕಾನೂನು ತಜ್ಞರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.</p>.<p>ನೀರಿನ ವಿಚಾರದಲ್ಲಿ ರಾಜ್ಯದ ಜನರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಿ ಹಕ್ಕು ಮಂಡಿಸುತ್ತೇವೆ. ಅನೇಕ ವರ್ಷಗಳ ಹಿಂದೆ ಬೆಂಗಳೂರು ಮಹಾನಗರಕ್ಕೆ ನಿಗದಿಪಡಿಸಿದ್ದ ನೀರಿನ ಪ್ರಮಾಣ ಈಗ ಜನಸಂಖ್ಯೆ ಹೆಚ್ಚಾಗಿರುವುದರಿಂದ ಸಮಸ್ಯೆಯನ್ನು ತಂದೊಡ್ಡಿದೆ. ಈ ಬಗ್ಗೆ ವ್ಯವಸ್ಥಿತ ಯೋಜನೆ ರೂಪಿಸಬೇಕಿದೆ ಎಂದರು.</p>.<p>ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>