<p><strong>ತುರುವೇಕೆರೆ: </strong>ರಾಜ್ಯದಲ್ಲಿ ಉತ್ತಮ ಮಳೆಯಾಗುತಿದ್ದು, ಹೇಮಾವತಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರಿನ ಒಳ ಹರಿವು ಬರುತ್ತಿದೆ. ಈ ಬಾರಿ ತಾಲ್ಲೂಕಿನ ಎಲ್ಲ ಕೆರೆಕಟ್ಟೆಗಳಿಗೆ ಹಂತಹಂತವಾಗಿ ನಾಲಾ ನೀರನ್ನು ಹರಿಸುವ ಮೂಲಕ ಅಂರ್ತರ್ಜಲ ಹೆಚ್ಚಿಸಲಾಗುವುದು ಎಂದು ಶಾಸಕ ಮಸಾಲ ಜಯರಾಂ ವಿಶ್ವಾಸ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಕಡೇಹಳ್ಳಿ- ಮುದ್ದನಹಳ್ಳಿ ರಸ್ತೆಯ ಕೆ.ಮೇಲನಹಳ್ಳಿಯಿಂದ ಹೊಂಗೆಲಕ್ಷ್ಮಿ ಕ್ಷೇತ್ರದ ಗಡಿಯವರೆಗಿನ ₹1 ಕೋಟಿ ವೆಚ್ಚದ ಡಾಂಬರ್ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>ತಾಲ್ಲೂಕಿನಾದ್ಯಂತ 50 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಗ್ರಾಮದ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ ಎಂದರು.</p>.<p>ಕೋವಿಡ್ನಿಂದ ಕೆಎಸ್ಆರ್ಟಿಸಿ, ವೈದ್ಯರು ಹೀಗೆ ಅನೇಕ ನೌಕರರಿಗೆ ಸಕಾಲಕ್ಕೆ ಸಂಬಳ ಕೊಡುವುದಕ್ಕೆ ಆಗುತ್ತಿಲ್ಲ. ಹೀಗಿರುವಾಗ ಸರ್ಕಾರದಿಂದ ಅನುದಾನ ತರುವುದೇ ಸವಾಲಾಗಿದೆ. ಆದಾಗ್ಯೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತುರುವೇಕೆರೆ ಕ್ಷೇತ್ರದ ಅಭಿವೃದ್ಧಿಗೆ ಸಾವಿರ ಕೋಟಿ ಅನುದಾನ ನೀಡಿದ್ದಾರೆ ಎಂದರು.</p>.<p>ನೆರಿಗೇಹಳ್ಳಿ, ಮುದ್ದನಹಳ್ಳಿ ಹೀಗೆ ಕ್ಷೇತ್ರದ ಗಡಿಭಾಗದ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ ಎಂದರು.</p>.<p>ಇದೇ ವೇಳೆ ಗ್ರಾಮಸ್ಥರು ಮುದ್ದನಹಳ್ಳಿಕೆರೆಗೆ ಹೇಮಾವತಿ ನಾಲಾ ನೀರನ್ನು ಹರಿಸುವಂತೆ ಮನವಿ ಮಾಡಿದರು.</p>.<p>ಮುಖಂಡರಾದ ಜವರೇಗೌಡ, ಬೋರೇಗೌಡ, ರಮೇಶ್, ರಂಗಸ್ವಾಮಿ, ರಾಜ್ಕುಮಾರ್, ನಾಗರಾಜು, ಗುತ್ತಿಗೆದಾರ ಎನ್.ರಾಮಲಿಂಗೇಗೌಡ, ಪ್ರಕಾಶ್, ಪ್ರಶಾಂತ್, ದಿನೇಶ್, ಕಾಳಂಜಿಹಳ್ಳಿ ಸೋಮಣ್ಣ, ವಿ.ಟಿ.ವೆಂಕಟರಾಂ, ವಿ.ಬಿ.ಸುರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ: </strong>ರಾಜ್ಯದಲ್ಲಿ ಉತ್ತಮ ಮಳೆಯಾಗುತಿದ್ದು, ಹೇಮಾವತಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರಿನ ಒಳ ಹರಿವು ಬರುತ್ತಿದೆ. ಈ ಬಾರಿ ತಾಲ್ಲೂಕಿನ ಎಲ್ಲ ಕೆರೆಕಟ್ಟೆಗಳಿಗೆ ಹಂತಹಂತವಾಗಿ ನಾಲಾ ನೀರನ್ನು ಹರಿಸುವ ಮೂಲಕ ಅಂರ್ತರ್ಜಲ ಹೆಚ್ಚಿಸಲಾಗುವುದು ಎಂದು ಶಾಸಕ ಮಸಾಲ ಜಯರಾಂ ವಿಶ್ವಾಸ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಕಡೇಹಳ್ಳಿ- ಮುದ್ದನಹಳ್ಳಿ ರಸ್ತೆಯ ಕೆ.ಮೇಲನಹಳ್ಳಿಯಿಂದ ಹೊಂಗೆಲಕ್ಷ್ಮಿ ಕ್ಷೇತ್ರದ ಗಡಿಯವರೆಗಿನ ₹1 ಕೋಟಿ ವೆಚ್ಚದ ಡಾಂಬರ್ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>ತಾಲ್ಲೂಕಿನಾದ್ಯಂತ 50 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಗ್ರಾಮದ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ ಎಂದರು.</p>.<p>ಕೋವಿಡ್ನಿಂದ ಕೆಎಸ್ಆರ್ಟಿಸಿ, ವೈದ್ಯರು ಹೀಗೆ ಅನೇಕ ನೌಕರರಿಗೆ ಸಕಾಲಕ್ಕೆ ಸಂಬಳ ಕೊಡುವುದಕ್ಕೆ ಆಗುತ್ತಿಲ್ಲ. ಹೀಗಿರುವಾಗ ಸರ್ಕಾರದಿಂದ ಅನುದಾನ ತರುವುದೇ ಸವಾಲಾಗಿದೆ. ಆದಾಗ್ಯೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತುರುವೇಕೆರೆ ಕ್ಷೇತ್ರದ ಅಭಿವೃದ್ಧಿಗೆ ಸಾವಿರ ಕೋಟಿ ಅನುದಾನ ನೀಡಿದ್ದಾರೆ ಎಂದರು.</p>.<p>ನೆರಿಗೇಹಳ್ಳಿ, ಮುದ್ದನಹಳ್ಳಿ ಹೀಗೆ ಕ್ಷೇತ್ರದ ಗಡಿಭಾಗದ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ ಎಂದರು.</p>.<p>ಇದೇ ವೇಳೆ ಗ್ರಾಮಸ್ಥರು ಮುದ್ದನಹಳ್ಳಿಕೆರೆಗೆ ಹೇಮಾವತಿ ನಾಲಾ ನೀರನ್ನು ಹರಿಸುವಂತೆ ಮನವಿ ಮಾಡಿದರು.</p>.<p>ಮುಖಂಡರಾದ ಜವರೇಗೌಡ, ಬೋರೇಗೌಡ, ರಮೇಶ್, ರಂಗಸ್ವಾಮಿ, ರಾಜ್ಕುಮಾರ್, ನಾಗರಾಜು, ಗುತ್ತಿಗೆದಾರ ಎನ್.ರಾಮಲಿಂಗೇಗೌಡ, ಪ್ರಕಾಶ್, ಪ್ರಶಾಂತ್, ದಿನೇಶ್, ಕಾಳಂಜಿಹಳ್ಳಿ ಸೋಮಣ್ಣ, ವಿ.ಟಿ.ವೆಂಕಟರಾಂ, ವಿ.ಬಿ.ಸುರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>