ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುರುವೇಕೆರೆ ತಾಲ್ಲೂಕಿನ ಎಲ್ಲ ಕೆರೆಗಳಿಗೆ ನೀರು: ಶಾಸಕ ಮಸಾಲ ಜಯರಾಂ

Last Updated 25 ಜುಲೈ 2021, 3:07 IST
ಅಕ್ಷರ ಗಾತ್ರ

ತುರುವೇಕೆರೆ: ರಾಜ್ಯದಲ್ಲಿ ಉತ್ತಮ ಮಳೆಯಾಗುತಿದ್ದು, ಹೇಮಾವತಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರಿನ ಒಳ ಹರಿವು ಬರುತ್ತಿದೆ. ಈ ಬಾರಿ ತಾಲ್ಲೂಕಿನ ಎಲ್ಲ ಕೆರೆಕಟ್ಟೆಗಳಿಗೆ ಹಂತಹಂತವಾಗಿ ನಾಲಾ ನೀರನ್ನು ಹರಿಸುವ ಮೂಲಕ ಅಂರ್ತರ್ಜಲ ಹೆಚ್ಚಿಸಲಾಗುವುದು ಎಂದು ಶಾಸಕ ಮಸಾಲ ಜಯರಾಂ ವಿಶ್ವಾಸ ವ್ಯಕ್ತಪಡಿಸಿದರು.

ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಕಡೇಹಳ್ಳಿ- ಮುದ್ದನಹಳ್ಳಿ ರಸ್ತೆಯ ಕೆ.ಮೇಲನಹಳ್ಳಿಯಿಂದ ಹೊಂಗೆಲಕ್ಷ್ಮಿ ಕ್ಷೇತ್ರದ ಗಡಿಯವರೆಗಿನ ₹1 ಕೋಟಿ ವೆಚ್ಚದ ಡಾಂಬರ್ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ತಾಲ್ಲೂಕಿನಾದ್ಯಂತ 50 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಗ್ರಾಮದ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ ಎಂದರು.

ಕೋವಿಡ್‌ನಿಂದ ಕೆಎಸ್ಆರ್‌ಟಿಸಿ, ವೈದ್ಯರು ಹೀಗೆ ಅನೇಕ ನೌಕರರಿಗೆ ಸಕಾಲಕ್ಕೆ ಸಂಬಳ ಕೊಡುವುದಕ್ಕೆ ಆಗುತ್ತಿಲ್ಲ. ಹೀಗಿರುವಾಗ ಸರ್ಕಾರದಿಂದ ಅನುದಾನ ತರುವುದೇ ಸವಾಲಾಗಿದೆ. ಆದಾಗ್ಯೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತುರುವೇಕೆರೆ ಕ್ಷೇತ್ರದ ಅಭಿವೃದ್ಧಿಗೆ ಸಾವಿರ ಕೋಟಿ ಅನುದಾನ ನೀಡಿದ್ದಾರೆ ಎಂದರು.

ನೆರಿಗೇಹಳ್ಳಿ, ಮುದ್ದನಹಳ್ಳಿ ಹೀಗೆ ಕ್ಷೇತ್ರದ ಗಡಿಭಾಗದ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ ಎಂದರು.

ಇದೇ ವೇಳೆ ಗ್ರಾಮಸ್ಥರು ಮುದ್ದನಹಳ್ಳಿಕೆರೆಗೆ ಹೇಮಾವತಿ ನಾಲಾ ನೀರನ್ನು ಹರಿಸುವಂತೆ ಮನವಿ ಮಾಡಿದರು.

ಮುಖಂಡರಾದ ಜವರೇಗೌಡ, ಬೋರೇಗೌಡ, ರಮೇಶ್, ರಂಗಸ್ವಾಮಿ, ರಾಜ್‌ಕುಮಾರ್, ನಾಗರಾಜು, ಗುತ್ತಿಗೆದಾರ ಎನ್.ರಾಮಲಿಂಗೇಗೌಡ, ಪ್ರಕಾಶ್, ಪ್ರಶಾಂತ್, ದಿನೇಶ್, ಕಾಳಂಜಿಹಳ್ಳಿ ಸೋಮಣ್ಣ, ವಿ.ಟಿ.ವೆಂಕಟರಾಂ, ವಿ.ಬಿ.ಸುರೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT