ತಾಲ್ಲೂಕಿನ ಲಕ್ಕನಹಳ್ಳಿ ಮತ್ತು ಮಾರುತಿ ಕಾಲೊನಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಹಲವಾರು ತಿಂಗಳಿನಿಂದ ಅಧಿಕಾರಿಗಳ ಗಮನಕ್ಕೆ ತಂದಿದ್ದರು ಸಹ ಸಮಸ್ಯೆ ಬಗೆಹರಿಸುತ್ತಿಲ್ಲ. ನೀರಿಗಾಗಿ ಜನ ಸಂಕಷ್ಟ ಪಡುತ್ತಿದ್ದಾರೆ. ಆದರೆ, ನೀವು ಚುನಾವಣೆಯಲ್ಲಿ ಗೆದ್ದು ಹೋದ ಮೇಲೆ ಇತ್ತ ಬಂದು ಜನರ ಸಮಸ್ಯೆ ಕೇಳಿಲ್ಲ ಎಂದು ಶಾಸಕರನ್ನು ಮಹಿಳೆಯರು ತರಾಟೆಗೆ ತೆಗೆದುಕೊಂಡರು.