ಗ್ರಾಮಾಂತರ ಕ್ಷೇತ್ರದ ಕೆರೆಗಳಿಗೆ ನೀರು ಹರಿದಿಲ್ಲ ಎಂದು ಸುರೇಶ್ಗೌಡ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿ, ‘ಅವರು ನಮ್ಮ ಪಕ್ಷದ ನಾಯಕರು. ಒಂದು ವೇಳೆ ನೀರು ಬಿಟ್ಟಿಲ್ಲವೆಂದರೆ ಗಮನಕ್ಕೆ ತರಬೇಕಿತ್ತು. ನನ್ನ ಗಮನಕ್ಕೆ ತಂದಿಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಪ್ರಶ್ನಿಸಿದರೆ, ನೀರು ಹರಿಸಿರುವುದಾಗಿ ತಿಳಿಸಿದ್ದಾರೆ. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ ತೊರೆದಿರುವುದಕ್ಕೂ ನೀರಾವರಿ ವಿಚಾರಕ್ಕೂ ಸಂಬಂಧವಿಲ್ಲ’ ಎಂದರು.