ಆರ್.ರಾಜೇಂದ್ರ ಮಾತನಾಡಿ, ‘ಮಧುಗಿರಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. 20 ದಿನಗಳಿಗೆ ಒಮ್ಮೆ ನೀರು ಬಿಡಲಾಗುತ್ತಿದೆ. ಮಧುಗಿರಿ ಸಿದ್ಧಾಪುರ ಕೆರೆಗೆ ಹೇಮಾವತಿ ನೀರು ಸರಬರಾಜಾಗುವ ತುಮಕೂರು ಗ್ರಾಮಾಂತರದ ಬಳ್ಳಾಪುರ ಪಂಪ್ಹೌಸ್ನಲ್ಲಿ ಯಂತ್ರೋಪಕರಣಗಳು ಕಳುವಾಗಿವೆ. ದುರಸ್ತಿಕಾರ್ಯ ನಡೆಯುತ್ತಿದೆ. ಮಂಗಳವಾರ ಸಂಜೆ ಹೊತ್ತಿಗೆ ಸಿದ್ಧಾಪುರ ಕೆರೆಗೆ ನೀರು ಹರಿಯಲಿದೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ’ ಎಂದು ಹೇಳಿದರು.