<p><strong>ಕುಣಿಗಲ್: </strong>‘ತಾಲ್ಲೂಕಿನ ಮಾರ್ಕೋನ ಹಳ್ಳಿ ಜಲಾಶಯದ ಅಚ್ಚುಕಟ್ಟು ಪ್ರದೇಶದ ರಾಗಿ ಬೆಳೆಗೆ ಇದೇ 21ರಿಂದ ನಾಲ್ಕು ಹಂತದಲ್ಲಿ ನೀರು ಹರಿಸಲಾಗುವುದು’ ಎಂದು ಶಾಸಕ ಡಾ.ರಂಗನಾಥ್ ತಿಳಿಸಿದರು.</p>.<p>ರಾಗಿ ಬೆಳೆಗೆ ನೀರು ಹರಿಸುವ ಸಲುವಾಗಿ ಮಾರ್ಕೋನಹಳ್ಳಿ ಜಲಾಶಯದ ಬಳಿ ಗುರುವಾರ ನಡೆದ ರೈತರ ಸಭೆಯಲ್ಲಿ ಮಾತನಾಡಿದರು.</p>.<p>ತಾಲ್ಲೂಕಿನ ರೈತರಿಗೆ ಸಕಾಲದಲ್ಲಿ ನೀರು ಕೊಡಬೇಕಾದರೆ, ಹೇಮಾವತಿ ನೀರು ಜಿಲ್ಲೆಯ ಭಾಗಕ್ಕೆ ಹರಿಯುವ ಪ್ರಾರಂಭದ ದಿನಗಳಲ್ಲೇ ಹೋರಾಟ ಮಾಡಬೇಕಿದೆ. ರೈತರ ಸಹಕಾರ ಸಹ ಅಗತ್ಯವಾಗಿದೆ. ರೈತರು ನೀರನ್ನು ಸಕಾಲದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕಿದೆ ಎಂದರು.</p>.<p>ಕಾರ್ಯಪಾಲಕ ಎಂಜಿನಿಯರ್ ಮಂಜೇಶ್ಗೌಡ ಮಾತನಾಡಿ, ಜಲಾಶಯದಲ್ಲಿ 1.8 ಟಿಎಂಸಿ ಅಡಿ ನೀರಿದೆ. ನೀರಿನ ಸಂಗ್ರಹಣೆ ಪರಿಶೀಲಿಸಿ ಮಳೆ ಆಗದಿದ್ದರೆ 21ರಿಂದ, ಮಳೆ ಬಂದರೆ 28ರಿಂದ ನೀರು ಹರಿಸಲಾಗುವುದು ಎಂದರು.</p>.<p>ಅಚ್ಚಕಟ್ಟು ಪ್ರದೇಶದ ರೈತರು, ತಾಲ್ಲೂಕಿನ ಪಾಲಿನ ನೀರನ್ನು ಪಡೆಯಲು ಶಾಸಕರ ಹೋರಾಟಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದರು.</p>.<p>ಉಪವಿಭಾಗಾಧಿಕಾರಿ ಅಜೇಯ್, ಹೇಮಾವತಿ ನಾಲಾ ವಲಯದ ಎಂಜಿನಿಯರ್ ಉಮಾಮಹೇಶ್, ಸಹಾಯಕ ಕೃಷಿ ನಿರ್ದೇಶಕಿ ಸೌಮ್ಯಶ್ರೀ, ಪಿಎಸ್ಐ ಮಂಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್: </strong>‘ತಾಲ್ಲೂಕಿನ ಮಾರ್ಕೋನ ಹಳ್ಳಿ ಜಲಾಶಯದ ಅಚ್ಚುಕಟ್ಟು ಪ್ರದೇಶದ ರಾಗಿ ಬೆಳೆಗೆ ಇದೇ 21ರಿಂದ ನಾಲ್ಕು ಹಂತದಲ್ಲಿ ನೀರು ಹರಿಸಲಾಗುವುದು’ ಎಂದು ಶಾಸಕ ಡಾ.ರಂಗನಾಥ್ ತಿಳಿಸಿದರು.</p>.<p>ರಾಗಿ ಬೆಳೆಗೆ ನೀರು ಹರಿಸುವ ಸಲುವಾಗಿ ಮಾರ್ಕೋನಹಳ್ಳಿ ಜಲಾಶಯದ ಬಳಿ ಗುರುವಾರ ನಡೆದ ರೈತರ ಸಭೆಯಲ್ಲಿ ಮಾತನಾಡಿದರು.</p>.<p>ತಾಲ್ಲೂಕಿನ ರೈತರಿಗೆ ಸಕಾಲದಲ್ಲಿ ನೀರು ಕೊಡಬೇಕಾದರೆ, ಹೇಮಾವತಿ ನೀರು ಜಿಲ್ಲೆಯ ಭಾಗಕ್ಕೆ ಹರಿಯುವ ಪ್ರಾರಂಭದ ದಿನಗಳಲ್ಲೇ ಹೋರಾಟ ಮಾಡಬೇಕಿದೆ. ರೈತರ ಸಹಕಾರ ಸಹ ಅಗತ್ಯವಾಗಿದೆ. ರೈತರು ನೀರನ್ನು ಸಕಾಲದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕಿದೆ ಎಂದರು.</p>.<p>ಕಾರ್ಯಪಾಲಕ ಎಂಜಿನಿಯರ್ ಮಂಜೇಶ್ಗೌಡ ಮಾತನಾಡಿ, ಜಲಾಶಯದಲ್ಲಿ 1.8 ಟಿಎಂಸಿ ಅಡಿ ನೀರಿದೆ. ನೀರಿನ ಸಂಗ್ರಹಣೆ ಪರಿಶೀಲಿಸಿ ಮಳೆ ಆಗದಿದ್ದರೆ 21ರಿಂದ, ಮಳೆ ಬಂದರೆ 28ರಿಂದ ನೀರು ಹರಿಸಲಾಗುವುದು ಎಂದರು.</p>.<p>ಅಚ್ಚಕಟ್ಟು ಪ್ರದೇಶದ ರೈತರು, ತಾಲ್ಲೂಕಿನ ಪಾಲಿನ ನೀರನ್ನು ಪಡೆಯಲು ಶಾಸಕರ ಹೋರಾಟಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದರು.</p>.<p>ಉಪವಿಭಾಗಾಧಿಕಾರಿ ಅಜೇಯ್, ಹೇಮಾವತಿ ನಾಲಾ ವಲಯದ ಎಂಜಿನಿಯರ್ ಉಮಾಮಹೇಶ್, ಸಹಾಯಕ ಕೃಷಿ ನಿರ್ದೇಶಕಿ ಸೌಮ್ಯಶ್ರೀ, ಪಿಎಸ್ಐ ಮಂಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>