<p><strong>ಮಧುಗಿರಿ:</strong> ‘ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಮಧುಗಿರಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ₹900 ಕೋಟಿ ಬಿಡುಗಡೆ ಮಾಡಿದ್ದರು’ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.</p>.<p>ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ತಾಲ್ಲೂಕು ಜೆಡಿಎಸ್ ಘಟಕದಿಂದ ನೂತನವಾಗಿ ಆಯ್ಕೆಯಾದ ಜೆಡಿಎಸ್ ಬೆಂಬಲಿತ ಸದಸ್ಯರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>ಕ್ಷೇತ್ರದಲ್ಲಿ ರಸ್ತೆ, ಚೆಕ್ ಡ್ಯಾಂ ಹಾಗೂ ಕಾಲುವೆ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳನ್ನು ಮಾಡಲಾಗಿದೆ. ಎತ್ತಿನಹೊಳೆ ಯೋಜನೆ ಕಾಮಗಾರಿ ಕೆಲಸ ಎರಡು ವರ್ಷಗಳಲ್ಲಿ ಮುಕ್ತಾಯಗೊಂಡು, ತಾಲ್ಲೂಕಿನ 54 ಕೆರೆಗಳಿಗೆ ನೀರು ಬರಲಿದೆ ಎಂದರು.</p>.<p>ಮರುವೇಕೆರೆ, ಬೇಡತ್ತೂರು, ದಬ್ಬೇಘಟ್ಟ, ಮಿಡಿಗೇಶಿ ಹಾಗೂ ದೊಡ್ಡ<br />ಯಲ್ಕೂರು ಗ್ರಾಮ ಪಂಚಾಯಿತಿಗಳು 30 ವರ್ಷಗಳಿಂದ ಕಾಂಗ್ರೆಸ್ ಬೆಂಬಲಿತ ಸದಸ್ಯರ ವಶದಲ್ಲಿದ್ದವು. ಆದರೆ ಈಗ ಜೆಡಿಎಸ್ ಬೆಂಬಲಿತ ಸದಸ್ಯರನ್ನು ಮತದಾರರು ಆಯ್ಕೆ ಮಾಡಿದ್ದಾರೆ. ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು ‘30 ಗ್ರಾ.ಪಂ. ಕೈವಶವಾಗಿದೆ’ ಎಂದು ಹೇಳಿಕೆ ನೀಡಿದ್ದರು. ಇನ್ನು 3 ಗ್ರಾ.ಪಂ.ಗಳನ್ನು ಬಿಟ್ಟಿರು<br />ವುದು ಯಾಕೆ ಎಂದು ಪ್ರಶ್ನಿಸಿದರು.</p>.<p>ಪುರಸಭೆ ಸದಸ್ಯ ಎಂ.ಎಲ್.ಗಂಗರಾಜು ಮಾತನಾಡಿ, ‘ಜೆಡಿಎಸ್ ಕಾರ್ಯಕರ್ತರ ಪಕ್ಷವಾಗಿದ್ದು, ಈ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಮತಗಳಿಕೆಯಲ್ಲಿ ಕಾಂಗ್ರೆಸ್ ಗಳಿಸಿದ ಮತಗಳಿಕೆಗಿಂತ ಮುಂದಿದ್ದು, ನಮ್ಮ ಕಾರ್ಯಕರ್ತರು ಎದೆಗುಂದುವ ಅಗತ್ಯವಿಲ್ಲ. ಶಾಸಕರು ಉತ್ತಮವಾದ ಕೆಲಸ - ಕಾರ್ಯಗಳನ್ನು ಮಾಡುತ್ತಿದ್ದು, ಜನಪರ ಶಾಸಕರಾಗಿದ್ದಾರೆ’ ಎಂದರು.</p>.<p>ಪುರಸಭೆ ಸದಸ್ಯ ಎಂ.ಆರ್.ಜಗನ್ನಾಥ್ ಮಾತನಾಡಿ, ‘ಶಾಸಕ ಎಂ.ವಿ.ವೀರಭದ್ರಯ್ಯ ಅವರು ಕಳೆದ ಬಾರಿ ಚುನಾವಣೆಯಲ್ಲಿ 19 ಸಾವಿರ ಮತಗಳ ಅಂತರದಿಂದ ಜಯಗಳಿಸಿದ್ದರು. ಮುಂಬರುವ ಚುನಾವಣೆಯಲ್ಲಿ ಮತ್ತೆ ಶಾಸಕರಾಗಿ ಆಯ್ಕೆಯಾಗುವುದು ಖಚಿತ’ ಎಂದು ತಿಳಿಸಿದರು.</p>.<p>ಜೆಡಿಎಸ್ ಎಸ್.ಟಿ. ಘಟಕದ ಅಧ್ಯಕ್ಷ ಚಂದ್ರಗಿರಿ ರವಿಕುಮಾರ್, ಗ್ರಾ.ಪಂ.ಸದಸ್ಯರಾದ ಸುರೇಶ್, ವಿಜಯ್ ಪ್ರಕಾಶ್, ಮುಖಂಡ ಟಿ.ರಾಮಣ್ಣ ಮಾತನಾಡಿದರು. ನೂತನವಾಗಿ ಆಯ್ಕೆಯಾದ ಜೆಡಿಎಸ್ ಬೆಂಬಲಿತ ಗ್ರಾ.ಪಂ.ಸದಸ್ಯರನ್ನು ಸನ್ಮಾನಿಸಲಾಯಿತು.</p>.<p>ಪುರಸಭೆ ಸದಸ್ಯರಾದ ಎಂ.ಎಸ್.ಚಂದ್ರಶೇಖರ್ ಬಾಬು, ಕೆ.ನಾರಾಯಣ್, ನರಸಿಂಹಮೂರ್ತಿ, ಗ್ರಾ.ಪಂ.ಮಾಜಿ ಅಧ್ಯಕ್ಷ ರಂಗನಾಥ್, ಪಿಎಲ್ಡಿ ಬ್ಯಾಂಕ್ ಮಾಜಿ ನಿರ್ದೇಶಕರಾದ ಚೌಡಪ್ಪ, ಚಂದ್ರಶೇಖರ್, ಮುಖಂಡರಾದ ಟಿ.ಗೋವಿಂದರಾಜು, ಬಿ.ಎಸ್.ಶ್ರೀನಿವಾಸ್, ಶಿವಕುಮಾರ್, ಡಿ.ವಿ.ಹಳ್ಳಿ ತಿಮ್ಮಣ್ಣ, ವೆಂಕಟಾಪುರ ಗೋವಿಂದರಾಜು, ರಾಜ ಮೋಹನ್, ರಾಘವೇಂದ್ರ, ಮೋಹನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ:</strong> ‘ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಮಧುಗಿರಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ₹900 ಕೋಟಿ ಬಿಡುಗಡೆ ಮಾಡಿದ್ದರು’ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.</p>.<p>ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ತಾಲ್ಲೂಕು ಜೆಡಿಎಸ್ ಘಟಕದಿಂದ ನೂತನವಾಗಿ ಆಯ್ಕೆಯಾದ ಜೆಡಿಎಸ್ ಬೆಂಬಲಿತ ಸದಸ್ಯರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>ಕ್ಷೇತ್ರದಲ್ಲಿ ರಸ್ತೆ, ಚೆಕ್ ಡ್ಯಾಂ ಹಾಗೂ ಕಾಲುವೆ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳನ್ನು ಮಾಡಲಾಗಿದೆ. ಎತ್ತಿನಹೊಳೆ ಯೋಜನೆ ಕಾಮಗಾರಿ ಕೆಲಸ ಎರಡು ವರ್ಷಗಳಲ್ಲಿ ಮುಕ್ತಾಯಗೊಂಡು, ತಾಲ್ಲೂಕಿನ 54 ಕೆರೆಗಳಿಗೆ ನೀರು ಬರಲಿದೆ ಎಂದರು.</p>.<p>ಮರುವೇಕೆರೆ, ಬೇಡತ್ತೂರು, ದಬ್ಬೇಘಟ್ಟ, ಮಿಡಿಗೇಶಿ ಹಾಗೂ ದೊಡ್ಡ<br />ಯಲ್ಕೂರು ಗ್ರಾಮ ಪಂಚಾಯಿತಿಗಳು 30 ವರ್ಷಗಳಿಂದ ಕಾಂಗ್ರೆಸ್ ಬೆಂಬಲಿತ ಸದಸ್ಯರ ವಶದಲ್ಲಿದ್ದವು. ಆದರೆ ಈಗ ಜೆಡಿಎಸ್ ಬೆಂಬಲಿತ ಸದಸ್ಯರನ್ನು ಮತದಾರರು ಆಯ್ಕೆ ಮಾಡಿದ್ದಾರೆ. ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು ‘30 ಗ್ರಾ.ಪಂ. ಕೈವಶವಾಗಿದೆ’ ಎಂದು ಹೇಳಿಕೆ ನೀಡಿದ್ದರು. ಇನ್ನು 3 ಗ್ರಾ.ಪಂ.ಗಳನ್ನು ಬಿಟ್ಟಿರು<br />ವುದು ಯಾಕೆ ಎಂದು ಪ್ರಶ್ನಿಸಿದರು.</p>.<p>ಪುರಸಭೆ ಸದಸ್ಯ ಎಂ.ಎಲ್.ಗಂಗರಾಜು ಮಾತನಾಡಿ, ‘ಜೆಡಿಎಸ್ ಕಾರ್ಯಕರ್ತರ ಪಕ್ಷವಾಗಿದ್ದು, ಈ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಮತಗಳಿಕೆಯಲ್ಲಿ ಕಾಂಗ್ರೆಸ್ ಗಳಿಸಿದ ಮತಗಳಿಕೆಗಿಂತ ಮುಂದಿದ್ದು, ನಮ್ಮ ಕಾರ್ಯಕರ್ತರು ಎದೆಗುಂದುವ ಅಗತ್ಯವಿಲ್ಲ. ಶಾಸಕರು ಉತ್ತಮವಾದ ಕೆಲಸ - ಕಾರ್ಯಗಳನ್ನು ಮಾಡುತ್ತಿದ್ದು, ಜನಪರ ಶಾಸಕರಾಗಿದ್ದಾರೆ’ ಎಂದರು.</p>.<p>ಪುರಸಭೆ ಸದಸ್ಯ ಎಂ.ಆರ್.ಜಗನ್ನಾಥ್ ಮಾತನಾಡಿ, ‘ಶಾಸಕ ಎಂ.ವಿ.ವೀರಭದ್ರಯ್ಯ ಅವರು ಕಳೆದ ಬಾರಿ ಚುನಾವಣೆಯಲ್ಲಿ 19 ಸಾವಿರ ಮತಗಳ ಅಂತರದಿಂದ ಜಯಗಳಿಸಿದ್ದರು. ಮುಂಬರುವ ಚುನಾವಣೆಯಲ್ಲಿ ಮತ್ತೆ ಶಾಸಕರಾಗಿ ಆಯ್ಕೆಯಾಗುವುದು ಖಚಿತ’ ಎಂದು ತಿಳಿಸಿದರು.</p>.<p>ಜೆಡಿಎಸ್ ಎಸ್.ಟಿ. ಘಟಕದ ಅಧ್ಯಕ್ಷ ಚಂದ್ರಗಿರಿ ರವಿಕುಮಾರ್, ಗ್ರಾ.ಪಂ.ಸದಸ್ಯರಾದ ಸುರೇಶ್, ವಿಜಯ್ ಪ್ರಕಾಶ್, ಮುಖಂಡ ಟಿ.ರಾಮಣ್ಣ ಮಾತನಾಡಿದರು. ನೂತನವಾಗಿ ಆಯ್ಕೆಯಾದ ಜೆಡಿಎಸ್ ಬೆಂಬಲಿತ ಗ್ರಾ.ಪಂ.ಸದಸ್ಯರನ್ನು ಸನ್ಮಾನಿಸಲಾಯಿತು.</p>.<p>ಪುರಸಭೆ ಸದಸ್ಯರಾದ ಎಂ.ಎಸ್.ಚಂದ್ರಶೇಖರ್ ಬಾಬು, ಕೆ.ನಾರಾಯಣ್, ನರಸಿಂಹಮೂರ್ತಿ, ಗ್ರಾ.ಪಂ.ಮಾಜಿ ಅಧ್ಯಕ್ಷ ರಂಗನಾಥ್, ಪಿಎಲ್ಡಿ ಬ್ಯಾಂಕ್ ಮಾಜಿ ನಿರ್ದೇಶಕರಾದ ಚೌಡಪ್ಪ, ಚಂದ್ರಶೇಖರ್, ಮುಖಂಡರಾದ ಟಿ.ಗೋವಿಂದರಾಜು, ಬಿ.ಎಸ್.ಶ್ರೀನಿವಾಸ್, ಶಿವಕುಮಾರ್, ಡಿ.ವಿ.ಹಳ್ಳಿ ತಿಮ್ಮಣ್ಣ, ವೆಂಕಟಾಪುರ ಗೋವಿಂದರಾಜು, ರಾಜ ಮೋಹನ್, ರಾಘವೇಂದ್ರ, ಮೋಹನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>