<p><strong>ತುಮಕೂರು</strong>: ಅಂಗವಿಕಲರಲ್ಲಿ ಸಾಮಾನ್ಯರಿಗಿಂತ ಹೆಚ್ಚು ಪ್ರತಿಭೆ, ಆತ್ಮಸ್ಥೈರ್ಯ, ಸಂಕಲ್ಪ ಇದೆ. ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ನೀಡಲು ಸವಲತ್ತು ವಿತರಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದರು.</p>.<p>ನಗರದಲ್ಲಿ ಶನಿವಾರ ಜಿಲ್ಲಾ ಆಡಳಿತ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ ಅಡಿಪ್ ಯೋಜನೆಯಡಿ ಅಂಗವಿಕಲರಿಗೆ ಸಾಧನಾ ಸಲಕರಣೆ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ದೇಶದ ಜನಸಂಖ್ಯೆಯಲ್ಲಿ ಶೇ 5ರಷ್ಟು ಜನ ಅಂಗವಿಕಲರು ಇದ್ದಾರೆ. ಸುಮಾರು 6.50 ಕೋಟಿ ಜನ ಅಂಗವೈಕಲ್ಯತೆಯಿಂದ ಬಳಲುತ್ತಿದ್ದಾರೆ. ಕೆಲವರಿಗೆ ಹುಟ್ಟಿನಿಂದಲೇ ಅಂಗವೈಕಲ್ಯತೆ ಕಾಣಿಸಿಕೊಳ್ಳುತ್ತದೆ. ಸಮಾಜ ಅವರಿಗೆ ಶಕ್ತಿ, ಆತ್ಮಸ್ಥೈರ್ಯ ನೀಡಿದರೆ ಉತ್ತಮ ಜೀವನ ಕಟ್ಟಿಕೊಳ್ಳುತ್ತಾರೆ ಎಂದರು.</p>.<p>ಅಂಗವಿಕಲರು ಸಾಮಾನ್ಯರಂತೆ ಜೀವನ ನಡೆಸಬೇಕು ಎಂಬ ಉದ್ದೇಶದಿಂದ 1,500 ಸಲಕರಣೆ ವಿತರಿಸಲಾಗುತ್ತಿದೆ. ಇದಕ್ಕೆ ಸುಮಾರು ₹1 ಕೋಟಿಯಷ್ಟು ಹಣ ವ್ಯಯಿಸಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಈ ಕೆಲಸ ಮಾಡುತ್ತಿವೆ. ಅಂಗವಿಕಲರ ಬದುಕು ಹಸನಾಗಿಸಲು ಸರ್ಕಾರ ಅನೇಕ ಯೋಜನೆ ಜಾರಿಗೊಳಿಸಿದೆ. ಗ್ಯಾರಂಟಿಯಲ್ಲೂ ಫಲ ಸಿಗುವಂತೆ ನೋಡಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಶಾಸಕ ಜಿ.ಬಿ.ಜ್ಯೋತಿಗಣೇಶ್, ‘ಅಂಗವಿಕಲರನ್ನು ಅಸಡ್ಡೆ ಭಾವನೆಯಿಂದ ನೋಡುವುದು ಕಡಿಮೆಯಾಗಿದೆ. ಅಧಿಕಾರಿಗಳು ಯಾವುದೇ ತಾರತಮ್ಯ ತೋರದೆ ಎಲ್ಲರಿಗೂ ಸರ್ಕಾರದ ಸೌಲಭ್ಯ ಕಲ್ಪಿಸಬೇಕು’ ಎಂದು ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಎಚ್ಎಎಲ್ ಜನರಲ್ ಮ್ಯಾನೇಜರ್ ಕೃಷ್ಣಪ್ಪ, ಅಲಿಂಕೊ ಸಂಸ್ಥೆಯ ಶಿವಕುಮಾರ್ ಇತರರು ಹಾಜರಿದ್ದರು.</p>.<p><strong>ಪುನಶ್ಚೇತನ ಕೇಂದ್ರಕ್ಕೆ ₹10 ಕೋಟಿ</strong></p><p>ಅಂಗವಿಕಲರ ಪುನಶ್ಚೇತನ ಕೇಂದ್ರ ನಿರ್ಮಿಸಲು ₹10 ಕೋಟಿ ಅನುದಾನ ಲಭ್ಯವಿದೆ. ಕೇಂದ್ರ ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಜಿ.ಪಂ ಸಿಇಒ ಜಿ.ಪ್ರಭು ಹೇಳಿದರು. ಎಲ್ಲ ಇಲಾಖೆಗಳಲ್ಲಿ ಶೇ 3ರಷ್ಟು ಅನುದಾನ ಅಂಗವಿಕಲರಿಗೆ ಮೀಸಲಿಡಲಾಗಿದೆ. ಜಿಲ್ಲೆಯಲ್ಲಿ ಯುಡಿಐಡಿ ಕಾರ್ಡ್ ವಿತರಣೆ ಕಾರ್ಯ ಶೇ 99 ರಷ್ಟು ಪೂರ್ಣಗೊಂಡಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಅಂಗವಿಕಲರಲ್ಲಿ ಸಾಮಾನ್ಯರಿಗಿಂತ ಹೆಚ್ಚು ಪ್ರತಿಭೆ, ಆತ್ಮಸ್ಥೈರ್ಯ, ಸಂಕಲ್ಪ ಇದೆ. ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ನೀಡಲು ಸವಲತ್ತು ವಿತರಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದರು.</p>.<p>ನಗರದಲ್ಲಿ ಶನಿವಾರ ಜಿಲ್ಲಾ ಆಡಳಿತ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ ಅಡಿಪ್ ಯೋಜನೆಯಡಿ ಅಂಗವಿಕಲರಿಗೆ ಸಾಧನಾ ಸಲಕರಣೆ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ದೇಶದ ಜನಸಂಖ್ಯೆಯಲ್ಲಿ ಶೇ 5ರಷ್ಟು ಜನ ಅಂಗವಿಕಲರು ಇದ್ದಾರೆ. ಸುಮಾರು 6.50 ಕೋಟಿ ಜನ ಅಂಗವೈಕಲ್ಯತೆಯಿಂದ ಬಳಲುತ್ತಿದ್ದಾರೆ. ಕೆಲವರಿಗೆ ಹುಟ್ಟಿನಿಂದಲೇ ಅಂಗವೈಕಲ್ಯತೆ ಕಾಣಿಸಿಕೊಳ್ಳುತ್ತದೆ. ಸಮಾಜ ಅವರಿಗೆ ಶಕ್ತಿ, ಆತ್ಮಸ್ಥೈರ್ಯ ನೀಡಿದರೆ ಉತ್ತಮ ಜೀವನ ಕಟ್ಟಿಕೊಳ್ಳುತ್ತಾರೆ ಎಂದರು.</p>.<p>ಅಂಗವಿಕಲರು ಸಾಮಾನ್ಯರಂತೆ ಜೀವನ ನಡೆಸಬೇಕು ಎಂಬ ಉದ್ದೇಶದಿಂದ 1,500 ಸಲಕರಣೆ ವಿತರಿಸಲಾಗುತ್ತಿದೆ. ಇದಕ್ಕೆ ಸುಮಾರು ₹1 ಕೋಟಿಯಷ್ಟು ಹಣ ವ್ಯಯಿಸಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಈ ಕೆಲಸ ಮಾಡುತ್ತಿವೆ. ಅಂಗವಿಕಲರ ಬದುಕು ಹಸನಾಗಿಸಲು ಸರ್ಕಾರ ಅನೇಕ ಯೋಜನೆ ಜಾರಿಗೊಳಿಸಿದೆ. ಗ್ಯಾರಂಟಿಯಲ್ಲೂ ಫಲ ಸಿಗುವಂತೆ ನೋಡಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಶಾಸಕ ಜಿ.ಬಿ.ಜ್ಯೋತಿಗಣೇಶ್, ‘ಅಂಗವಿಕಲರನ್ನು ಅಸಡ್ಡೆ ಭಾವನೆಯಿಂದ ನೋಡುವುದು ಕಡಿಮೆಯಾಗಿದೆ. ಅಧಿಕಾರಿಗಳು ಯಾವುದೇ ತಾರತಮ್ಯ ತೋರದೆ ಎಲ್ಲರಿಗೂ ಸರ್ಕಾರದ ಸೌಲಭ್ಯ ಕಲ್ಪಿಸಬೇಕು’ ಎಂದು ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಎಚ್ಎಎಲ್ ಜನರಲ್ ಮ್ಯಾನೇಜರ್ ಕೃಷ್ಣಪ್ಪ, ಅಲಿಂಕೊ ಸಂಸ್ಥೆಯ ಶಿವಕುಮಾರ್ ಇತರರು ಹಾಜರಿದ್ದರು.</p>.<p><strong>ಪುನಶ್ಚೇತನ ಕೇಂದ್ರಕ್ಕೆ ₹10 ಕೋಟಿ</strong></p><p>ಅಂಗವಿಕಲರ ಪುನಶ್ಚೇತನ ಕೇಂದ್ರ ನಿರ್ಮಿಸಲು ₹10 ಕೋಟಿ ಅನುದಾನ ಲಭ್ಯವಿದೆ. ಕೇಂದ್ರ ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಜಿ.ಪಂ ಸಿಇಒ ಜಿ.ಪ್ರಭು ಹೇಳಿದರು. ಎಲ್ಲ ಇಲಾಖೆಗಳಲ್ಲಿ ಶೇ 3ರಷ್ಟು ಅನುದಾನ ಅಂಗವಿಕಲರಿಗೆ ಮೀಸಲಿಡಲಾಗಿದೆ. ಜಿಲ್ಲೆಯಲ್ಲಿ ಯುಡಿಐಡಿ ಕಾರ್ಡ್ ವಿತರಣೆ ಕಾರ್ಯ ಶೇ 99 ರಷ್ಟು ಪೂರ್ಣಗೊಂಡಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>