‘ಮರಣೋತ್ತರವಾಗಿ ನೊಬೆಲ್ ನೀಡಲು ಸಾಧ್ಯವಿಲ್ಲ. ಆದ್ದರಿಂದ ಸಿದ್ದಗಂಗಾ ಮಠದ ಸಾಮಾಜಿಕ ಮತ್ತು ಶೈಕ್ಷಣಿಕ ಸೇವೆ ಗುರುತಿಸಿ ನೊಬೆಲ್ ನೀಡಬಹುದು. ಈ ಸಂಬಂಧಅನುಸರಿಸಬಹುದಾದ ಪ್ರಕ್ರಿಯೆಗಳ ಕುರಿತು ತಜ್ಞರ ಜೊತೆ ಸಮಾಲೋಚಿಸುತ್ತಿದ್ದೇನೆ. ಇದಕ್ಕೆ ಮುಖ್ಯಮಂತ್ರಿ ಸಹಕಾರ ನೀಡಬೇಕು’ ಎಂದು ಅವರು ಕೋರಿದರು.
‘ಶರಣರ ತತ್ವ ಮತ್ತು ಆದರ್ಶಗಳನ್ನು ಎತ್ತಿ ಹಿಡಿದವರು ಶಿವಕುಮಾರ ಸ್ವಾಮೀಜಿ. ಪೂಜ್ಯರನ್ನು ಭೇಟಿ ಮಾಡಲು ಬಂದಾಗ ನನಗೆ ಹಿತವಚನ. ಯಾರೇ ಬಂದರು ಅವರಿಗೆ ಪ್ರಸಾದ ಸ್ವೀಕರಿಸಿ ಹೋಗಿ ಎನ್ನುತ್ತಿದ್ದರು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷಬಿ.ಎಸ್.ಯಡಿಯೂರಪ್ಪ ಸ್ವಾಮೀಜಿಯನ್ನು ಸ್ಮರಿಸಿದರು.