<p><strong>ತುಮಕೂರು:</strong> ‘ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿರುವ ಸರ್ಕಾರಿ ನೌಕರರಿಗೆ ಜೇಷ್ಠತೆ ವಿಸ್ತರಿಸುವ ರಾಜ್ಯ ಸರ್ಕಾರದ ನೂತನ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವುದು ಸ್ವಾಗತಾರ್ಹ’ ಎಂದು ಉಪಮುಖ್ಯಮಂತ್ರಿ ಹಾಗೂ ಕಾನೂನು ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಬಿ.ಕೆ. ಪವಿತ್ರ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ ಕುರಿತ ತೀರ್ಪನ್ನು ನ್ಯಾಯಮೂರ್ತಿಗಳು ಪ್ರಕಟಿಸಿದ್ದಾರೆ’ ಎಂದರು.</p>.<p>‘ಇನ್ನು ಮುಂದೆ ಸರ್ಕಾರವು ಹಿಂದೆ ಯಾರ್ಯಾರಿಗೆ ಹಿಂಬಡ್ತಿಯಾಗಿತ್ತೊ ಅವರಿಗೆ ಮತ್ತೆ ಅವರವರ ಹುದ್ದೆಗಳನ್ನು ಕೊಡಬೇಕಾಗುತ್ತೆ. ಇದು ಮುಂಬಡ್ತಿ ಎಂಬುದಕ್ಕಿಂತ ಮೊದಲಿದ್ದ ಹುದ್ದೆಗಳನ್ನು ಅವರವರಿಗೆ ಕೊಡುವುದಾಗಿದೆ’ ಎಂದು ಹೇಳಿದರು.</p>.<p>‘ಈಗ ತಾನೇ ತೀರ್ಪು ಬಂದಿದೆ. ನಾನೇ ಕಾನೂನು ಸಚಿವ. ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ. ಅಂತಿಮವಾಗಿ ಸರ್ಕಾರ ಸಚಿವ ಸಂಪುಟದಲ್ಲಿ ಚರ್ಚಿಸಿ ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ‘ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿರುವ ಸರ್ಕಾರಿ ನೌಕರರಿಗೆ ಜೇಷ್ಠತೆ ವಿಸ್ತರಿಸುವ ರಾಜ್ಯ ಸರ್ಕಾರದ ನೂತನ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವುದು ಸ್ವಾಗತಾರ್ಹ’ ಎಂದು ಉಪಮುಖ್ಯಮಂತ್ರಿ ಹಾಗೂ ಕಾನೂನು ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಬಿ.ಕೆ. ಪವಿತ್ರ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ ಕುರಿತ ತೀರ್ಪನ್ನು ನ್ಯಾಯಮೂರ್ತಿಗಳು ಪ್ರಕಟಿಸಿದ್ದಾರೆ’ ಎಂದರು.</p>.<p>‘ಇನ್ನು ಮುಂದೆ ಸರ್ಕಾರವು ಹಿಂದೆ ಯಾರ್ಯಾರಿಗೆ ಹಿಂಬಡ್ತಿಯಾಗಿತ್ತೊ ಅವರಿಗೆ ಮತ್ತೆ ಅವರವರ ಹುದ್ದೆಗಳನ್ನು ಕೊಡಬೇಕಾಗುತ್ತೆ. ಇದು ಮುಂಬಡ್ತಿ ಎಂಬುದಕ್ಕಿಂತ ಮೊದಲಿದ್ದ ಹುದ್ದೆಗಳನ್ನು ಅವರವರಿಗೆ ಕೊಡುವುದಾಗಿದೆ’ ಎಂದು ಹೇಳಿದರು.</p>.<p>‘ಈಗ ತಾನೇ ತೀರ್ಪು ಬಂದಿದೆ. ನಾನೇ ಕಾನೂನು ಸಚಿವ. ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ. ಅಂತಿಮವಾಗಿ ಸರ್ಕಾರ ಸಚಿವ ಸಂಪುಟದಲ್ಲಿ ಚರ್ಚಿಸಿ ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>