ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾನೇ ಏಕೆ ತ್ಯಾಗ ಮಾಡಬೇಕು: ಸಚಿವೆ ಜೊಲ್ಲೆ ಪ್ರಶ್ನೆ

Last Updated 27 ನವೆಂಬರ್ 2020, 5:11 IST
ಅಕ್ಷರ ಗಾತ್ರ

ತುಮಕೂರು: ‘ಬಿಜೆಪಿ ಸರ್ಕಾರದಲ್ಲಿರುವ ಏಕೈಕ ಮಹಿಳಾ ಸಚಿವೆ ನಾನು. ಹೀಗಿರುವಾಗ ನಾನೇ ಏಕೆ ಸಚಿವ ಸ್ಥಾನ ತ್ಯಾಗ ಮಾಡಬೇಕು’ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಪ್ರಶ್ನಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಎರಡು ಬಾರಿ ಸಚಿವ ಸಂಪುಟ ವಿಸ್ತರಣೆಯ ವಿಚಾರ ಬಂದಾಗಲೂ ನನ್ನನ್ನು ಮಾತ್ರ ಗುರಿ ಮಾಡಲಾಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ಸಚಿವ ಸ್ಥಾನ ತ್ಯಾಗದ ವಿಚಾರವಾಗಿ ನನಗೆ ರಾಜ್ಯ ಮತ್ತು ರಾಷ್ಟ್ರೀಯ ನಾಯಕರಿಂದ ಯಾವುದೇ ಸೂಚನೆ ಬಂದಿಲ್ಲ’ ಎಂದು ತಿಳಿಸಿದರು.

‘ನಾನು ಸಂಘಟನೆಯಿಂದ ಬಂದವಳು.ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ’ ಎಂದೂ ಸಚಿವರು ಸ್ಪಷ್ಟಪಡಿಸಿದರು.

‘ಸಂಪುಟದಿಂದ ಕೈಬಿಡುವ ವಿಚಾರ ಪ್ರಸ್ತಾಪವಾದಾಗಲೆಲ್ಲ ಮಾಧ್ಯಮಗಳಲ್ಲಿನನ್ನ ಹೆಸರು ಕೇಳಿ ಬರುತ್ತದೆ. ಈ ಹಿಂದೆ ಎರಡು ಬಾರಿಮಾಧ್ಯಮಗಳಲ್ಲಿ ನನ್ನ ಹೆಸರು ಕೇಳಿ ಬಂದಿತ್ತು. ಆದರೆ, ಅದು ಸುಳ್ಳಾಗಿತ್ತು. ಮೂರನೇ ಬಾರಿಯೂ ಸುಳ್ಳಾಗಲಿದೆ. ಪ್ರತಿ ಬಾರಿಯೂ ಏಕೆ ಮಹಿಳೆಯರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ’ ಎಂದು ಜೊಲ್ಲೆ ಮಾಧ್ಯಮ ಪ್ರತಿನಿಧಿಗಳನ್ನು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT