<p><strong>ತುಮಕೂರು</strong>: ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಪತಿಯನ್ನು ಕೊಲೆ ಮಾಡಿದ್ದ ಯಶೋದಾ (32), ಆಕೆಯ ಪ್ರಿಯಕರ ಮಂಜುನಾಥ್ (28) ಎಂಬಾತನಿಗೆ 3ನೇ ಹೆಚ್ಚುವರಿ ಮತ್ತು ವಿಶೇಷ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ, ತಲಾ ₹50 ಸಾವಿರ ದಂಡ ವಿಧಿಸಿದೆ.</p>.<p>ಆಂಜಿನಪ್ಪ ಮತ್ತು ಯಶೋದಾ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ನಿವಾಸಿಗಳು. ಮಂಜುನಾಥ್ ಜತೆಗೆ ಯಶೋದಾ ಅಕ್ರಮ ಸಂಬಂಧ ಹೊಂದಿದ್ದರು. ಈ ಬಗ್ಗೆ ಪತಿ, ಪತ್ನಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಮಂಜುನಾಥ್ನಿಂದ ದೂರ ಇರುವಂತೆ ಅಂಜಿನಪ್ಪ ಸೂಚಿಸಿದ್ದರು. ಇದರಿಂದ ಕುಪಿತರಾದ ಯಶೋದಾ, ಮಂಜುನಾಥ್ 2018ರ ಮೇ 12ರ ಮಧ್ಯರಾತ್ರಿ ಆಂಜಿನಪ್ಪ ಅವರನ್ನು ಕೊಲೆ ಮಾಡಿದ್ದರು.</p>.<p>ಕೊಡಿಗೇನಹಳ್ಳಿ ಠಾಣೆಯಲ್ಲಿ ಕೊಲೆ ಹಾಗೂ ಎಸ್.ಸಿ, ಎಸ್.ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.</p>.<p>ಮಧುಗಿರಿ ಡಿವೈಎಸ್ಪಿ ಓ.ಬಿ.ಕಲ್ಲೇಶಪ್ಪ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರ ವಿಚಾರಣೆ ಸಮಯದಲ್ಲಿ ಆರೋಪ ಸಾಬೀತಾಗಿದ್ದು, ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಜ್ಯೋತಿ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಪತಿಯನ್ನು ಕೊಲೆ ಮಾಡಿದ್ದ ಯಶೋದಾ (32), ಆಕೆಯ ಪ್ರಿಯಕರ ಮಂಜುನಾಥ್ (28) ಎಂಬಾತನಿಗೆ 3ನೇ ಹೆಚ್ಚುವರಿ ಮತ್ತು ವಿಶೇಷ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ, ತಲಾ ₹50 ಸಾವಿರ ದಂಡ ವಿಧಿಸಿದೆ.</p>.<p>ಆಂಜಿನಪ್ಪ ಮತ್ತು ಯಶೋದಾ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ನಿವಾಸಿಗಳು. ಮಂಜುನಾಥ್ ಜತೆಗೆ ಯಶೋದಾ ಅಕ್ರಮ ಸಂಬಂಧ ಹೊಂದಿದ್ದರು. ಈ ಬಗ್ಗೆ ಪತಿ, ಪತ್ನಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಮಂಜುನಾಥ್ನಿಂದ ದೂರ ಇರುವಂತೆ ಅಂಜಿನಪ್ಪ ಸೂಚಿಸಿದ್ದರು. ಇದರಿಂದ ಕುಪಿತರಾದ ಯಶೋದಾ, ಮಂಜುನಾಥ್ 2018ರ ಮೇ 12ರ ಮಧ್ಯರಾತ್ರಿ ಆಂಜಿನಪ್ಪ ಅವರನ್ನು ಕೊಲೆ ಮಾಡಿದ್ದರು.</p>.<p>ಕೊಡಿಗೇನಹಳ್ಳಿ ಠಾಣೆಯಲ್ಲಿ ಕೊಲೆ ಹಾಗೂ ಎಸ್.ಸಿ, ಎಸ್.ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.</p>.<p>ಮಧುಗಿರಿ ಡಿವೈಎಸ್ಪಿ ಓ.ಬಿ.ಕಲ್ಲೇಶಪ್ಪ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರ ವಿಚಾರಣೆ ಸಮಯದಲ್ಲಿ ಆರೋಪ ಸಾಬೀತಾಗಿದ್ದು, ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಜ್ಯೋತಿ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>