<p><strong>ಪಾವಗಡ</strong>: ತಾಲ್ಲೂಕಿನ ನೇರಳೆಕುಂಟೆ ಗ್ರಾಮದಲ್ಲಿ ಪತ್ನಿಯನ್ನು ಹತ್ಯೆ ಮಾಡಿ ಮನೆಯ ಬಳಿ ಶವ ಹೂತಿಟ್ಟಿದ್ದ ಪ್ರಕರಣ ಭಾನುವಾರ ಬೆಳಕಿಗೆ ಬಂದಿದೆ.</p><p>ಶಿವಮೊಗ್ಗ ಜಿಲ್ಲೆಯ ಜ್ಯೋತಿ (28) ಮೃತರು. ಆರೋಪಿ ಮಾರುತಿ (22) ಪರಾರಿಯಾಗಿದ್ದಾನೆ. ವರ್ಷದ ಹಿಂದೆ ಜ್ಯೋತಿಯನ್ನು ಪ್ರೀತಿಸಿ ವಿವಾಹವಾಗಿದ್ದ. ಈ ಹಿಂದೆ ತುಮಕೂರಿನಲ್ಲಿ ನೀರು ಸರಬರಾಜು ಮಾಡುವ ಟ್ಯಾಂಕರ್ನ ಚಾಲಕನಾಗಿದ್ದ. ವಿವಾಹದ ನಂತರ ಪತ್ನಿಯನ್ನು ಗ್ರಾಮಕ್ಕೆ ಕರೆತಂದಿದ್ದ.</p><p>ಇಬ್ಬರ ಮಧ್ಯೆ ವಾರದಿಂದ ಜಗಳ ನಡೆಯುತ್ತಿತ್ತು. ಶನಿವಾರ ರಾತ್ರಿಯೂ ಜಗಳವಾಡುತ್ತಿದ್ದ ಶಬ್ದ ನೆರೆಹೊರೆಯ ಮನೆಯವರಿಗೆ ಕೇಳಿಸಿದೆ. ಬೆಳಗ್ಗೆ ಜ್ಯೋತಿ ಮನೆಯಲ್ಲಿ ಇಲ್ಲದಿರುವ ಬಗ್ಗೆ ಅನುಮಾನ ಬಂದು ಅಕ್ಕಪಕ್ಕದ ಮನೆಯವರು ವಿಚಾರಿಸಿದ್ದಾರೆ. ಮನೆಯ ಹತ್ತಿರದ ಮರಳಿಗೆ ಸುಗಂಧ ದ್ರವ್ಯ ಚೆಲ್ಲಿರುವುದು ಅನುಮಾನ ಮೂಡಿಸಿದೆ. ಈ ಬಗ್ಗೆ ಗ್ರಾಮಸ್ಥರು ಕೇಳಿದಾಗ ಮಾರುತಿ ಸ್ಥಳದಿಂದ ಪರಾರಿಯಾಗಿದ್ದಾನೆ.</p><p>ಶನಿವಾರ ರಾತ್ರಿ ಪತ್ನಿಯನ್ನು ಹತ್ಯೆ ಮಾಡಿ ಮನೆ ಪಕ್ಕದ ಮರಳಿನಲ್ಲಿ ಹೂತಿಟ್ಟಿರಬಹುದು ಎಂದು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಪಟ್ಟಣ ಠಾಣೆ ಪೊಲೀಸರು ಆರೋಪಿ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ</strong>: ತಾಲ್ಲೂಕಿನ ನೇರಳೆಕುಂಟೆ ಗ್ರಾಮದಲ್ಲಿ ಪತ್ನಿಯನ್ನು ಹತ್ಯೆ ಮಾಡಿ ಮನೆಯ ಬಳಿ ಶವ ಹೂತಿಟ್ಟಿದ್ದ ಪ್ರಕರಣ ಭಾನುವಾರ ಬೆಳಕಿಗೆ ಬಂದಿದೆ.</p><p>ಶಿವಮೊಗ್ಗ ಜಿಲ್ಲೆಯ ಜ್ಯೋತಿ (28) ಮೃತರು. ಆರೋಪಿ ಮಾರುತಿ (22) ಪರಾರಿಯಾಗಿದ್ದಾನೆ. ವರ್ಷದ ಹಿಂದೆ ಜ್ಯೋತಿಯನ್ನು ಪ್ರೀತಿಸಿ ವಿವಾಹವಾಗಿದ್ದ. ಈ ಹಿಂದೆ ತುಮಕೂರಿನಲ್ಲಿ ನೀರು ಸರಬರಾಜು ಮಾಡುವ ಟ್ಯಾಂಕರ್ನ ಚಾಲಕನಾಗಿದ್ದ. ವಿವಾಹದ ನಂತರ ಪತ್ನಿಯನ್ನು ಗ್ರಾಮಕ್ಕೆ ಕರೆತಂದಿದ್ದ.</p><p>ಇಬ್ಬರ ಮಧ್ಯೆ ವಾರದಿಂದ ಜಗಳ ನಡೆಯುತ್ತಿತ್ತು. ಶನಿವಾರ ರಾತ್ರಿಯೂ ಜಗಳವಾಡುತ್ತಿದ್ದ ಶಬ್ದ ನೆರೆಹೊರೆಯ ಮನೆಯವರಿಗೆ ಕೇಳಿಸಿದೆ. ಬೆಳಗ್ಗೆ ಜ್ಯೋತಿ ಮನೆಯಲ್ಲಿ ಇಲ್ಲದಿರುವ ಬಗ್ಗೆ ಅನುಮಾನ ಬಂದು ಅಕ್ಕಪಕ್ಕದ ಮನೆಯವರು ವಿಚಾರಿಸಿದ್ದಾರೆ. ಮನೆಯ ಹತ್ತಿರದ ಮರಳಿಗೆ ಸುಗಂಧ ದ್ರವ್ಯ ಚೆಲ್ಲಿರುವುದು ಅನುಮಾನ ಮೂಡಿಸಿದೆ. ಈ ಬಗ್ಗೆ ಗ್ರಾಮಸ್ಥರು ಕೇಳಿದಾಗ ಮಾರುತಿ ಸ್ಥಳದಿಂದ ಪರಾರಿಯಾಗಿದ್ದಾನೆ.</p><p>ಶನಿವಾರ ರಾತ್ರಿ ಪತ್ನಿಯನ್ನು ಹತ್ಯೆ ಮಾಡಿ ಮನೆ ಪಕ್ಕದ ಮರಳಿನಲ್ಲಿ ಹೂತಿಟ್ಟಿರಬಹುದು ಎಂದು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಪಟ್ಟಣ ಠಾಣೆ ಪೊಲೀಸರು ಆರೋಪಿ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>