ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿರತೆ ದಾಳಿಗೆ ಮಹಿಳೆ ಬಲಿ

Last Updated 5 ನವೆಂಬರ್ 2020, 10:32 IST
ಅಕ್ಷರ ಗಾತ್ರ

ತುಮಕೂರು: ಗುಬ್ಬಿ ತಾಲ್ಲೂಕು ಮಣಿಕುಪ್ಪೆಯಲ್ಲಿ ಚಿರತೆ ದಾಳಿಗೆ ಭಾಗ್ಯಮ್ಮ (30) ಎಂಬುವವರು ಬಲಿಯಾಗಿದ್ದಾರೆ.

ಹಸು ಮೇಯಿಸಲು ತೆರಳಿದ್ದಾಗ ಮಹಿಳೆಯ ಮೇಲೆ ಚಿರತೆ ದಾಳಿ ಮಾಡಿದೆ. 2020ರ ಜನವರಿಯಲ್ಲಿ ಇದೇ ಗ್ರಾಮದಲ್ಲಿ ನಡೆದ ಚಿರತೆ ದಾಳಿಗೆ ಸಮರ್ಥ್ ಗೌಡ (4) ಬಲಿಯಾಗಿದ್ದ. ಗುಬ್ಬಿ, ತುಮಕೂರು ಮತ್ತು ಕುಣಿಗಲ್ ತಾಲ್ಲೂಕು ಗಡಿ ಪ್ರದೇಶವಾದ ಇಲ್ಲಿ ಚಿರತೆ ಹಾವಳಿ ಹೆಚ್ಚಿದೆ.

ಈ ಭಾಗದಲ್ಲಿ ಚಿರತೆ ದಾಳಿಯಿಂದಾಗುತ್ತಿರುವ ಪ್ರಾಣಹಾನಿ ತಪ್ಪಿಸಿ, ಮನುಷ್ಯ ಮತ್ತು ಸಾಕು ಪ್ರಾಣಿಗಳನ್ನು ರಕ್ಷಿಸಲು ‘ಆಪರೇಷನ್‌ ಸಮರ್ಥ್‌’ ಕಾರ್ಯಾಚರಣೆಯನ್ನು ಸಹ ನಡೆಸಲಾಗಿತ್ತು. ಈ ವ್ಯಾಪ್ತಿಯಲ್ಲಿಯೇ 10ಕ್ಕೂ ಹೆಚ್ಚು ಚಿರತೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT