ತಾಲ್ಲೂಕಿನ ದೊಡ್ಡ ಅಗ್ರಹಾರ ಗ್ರಾಮದ ಚಂದ್ರಮ್ಮ ಹಾಗೂ ಪತಿ ರಂಗಶ್ವಾಮಯ್ಯ ತುಮಕೂರು ಕಡೆಯಿಂದ ಬಂದ ಕೆಎಸ್ಆರ್ಟಿಸಿ ಬಸ್ನಿಂದ ಕಳ್ಳಂಬೆಳ್ಳದಲ್ಲಿ ಇಳಿಯುತ್ತಿದ್ದ ಸಮಯದಲ್ಲಿ ಹಿಂದಿನಿಂದ ಅತಿವೇಗವಾಗಿ ಬಂದ ಲಾರಿ ಬಸ್ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ರಸ್ತೆಯ ಪಕ್ಕದಲ್ಲಿದ್ದ ಚಂದ್ರಮ್ಮ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ರಂಗಶ್ವಾಮಯ್ಯ ಅವರಿಗೆ ಕಳ್ಳಂಬೆಳ್ಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.