ಒಳ್ಳೆಯ ಮನೆತನದಲ್ಲಿ ಹುಟ್ಟಿದವರು ಇಂತಹ ಮಾತು ಆಡುವುದಿಲ್ಲ. ಕುಮಾರಸ್ವಾಮಿ, ‘₹100, ₹200ಕ್ಕೆ ಮಹಿಳೆಯರನ್ನು ಕರೆದುಕೊಂಡು ಬಂದು ಪ್ರತಿಭಟನೆ ಮಾಡಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ. ಇಲ್ಲಿ ಯಾರೂ ಹಣ ತೆಗೆದುಕೊಂಡು ಬಂದು ಪ್ರತಿಭಟನೆ ಮಾಡಲು ಬಂದಿಲ್ಲ. ಇದೇ ರೀತಿಯಾಗಿ ನಾಲಿಗೆ ಹರಿ ಬಿಟ್ಟರೆ ಸುಮ್ಮನೆ ಕೂರುವುದಿಲ್ಲ. ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.