<p><strong>ಪಾವಗಡ</strong>: ಮಹಿಳೆಯರು ಚುನಾವಣೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಸಬೇಕು ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.</p>.<p>ಪಟ್ಟಣದಲ್ಲಿ ಮಂಗಳವಾರ ತಾಲ್ಲೂಕು ಜೆಡಿಎಸ್ ಘಟಕ ಆಯೋಜಿಸಿದ್ದ ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಮಾಜದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಬೇಕು. ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಸಬೇಕು. ಪಕ್ಷ ಸಂಘಟನೆಯಲ್ಲಿ ಮಹಿಳೆಯರ ಪಾತ್ರ ಗಣನೀಯ. ಈ ನಿಟ್ಟಿನಲ್ಲಿ ಯುವತಿಯರು, ಸ್ತ್ರೀಯರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.</p>.<p>ತಾಲೂಕಿನ ಅಭಿವೃದ್ಧಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗಿದ್ದ ಕಾಳಜಿಯಿಂದಾಗಿ ತಾಲೂಕಿನಲ್ಲಿರುವ ಸರ್ಕಾರಿ ಬಸ್ ಡಿಪೊ ಆರಂಭವಾಗಿದೆ. ಸಾಕಷ್ಟು ಮೊರಾರ್ಜಿ ವಸತಿ ಶಾಲೆಗಳು ಮಂಜೂರಾಗಿವೆ ಎಂದರು.</p>.<p>ಜನರು ಕಾಂಗ್ರೆಸ್ ಸರ್ಕಾರದ ಬಗ್ಗೆ ಬೇಸರ ಹೊಂದಿದ್ದು, ಮುಂಬರುವ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದರು.</p>.<p>ಜೆಡಿಎಸ್, ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ. ಅಂಜಿನಪ್ಪ , ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಜೆಡಿಎಸ್ ಬಲಪಡಿಸಬೇಕು ಎಂದು ತಿಳಿಸಿದರು.</p>.<p>ಜೆಡಿಎಸ್ ರಾಜ್ಯ ಮಹಿಳಾ ಮಂಡಳಿಯ ಅಧ್ಯಕ್ಷೆ ರಶ್ಮಿಕ, ಮಾಜಿ ಎಂಎಲ್ ಸಿ ತಿಪ್ಪೇಸ್ವಾಮಿ, ತಾಹಿರಾಬಾನು, ಪ್ರಧಾನ ಕಾರ್ಯದರ್ಶಿ ಸೊಗಡು ವಿ ವೆಂಕಟೇಶ್, ಮನು ಮಹೇಶ್, ಅಕ್ಕಲಪ್ಪ ನಾಯ್ಡು, ತಾಲೂಕು ಅಧ್ಯಕ್ಷ ಎನ್ ಎ ಈರಣ್ಣ, ಗೌರವಾಧ್ಯಕ್ಷ ರಾಜಶೇಖರಪ್ಪ, ಕೊತ್ತೂರ್ ನಾಗೇಶ್, ಬಲರಾಮರೆಡ್ಡಿ, ಶಿವಕುಮಾರ್, ಗಂಗಾಧರನಾಯ್ಡು, ಭರತ್ ಕುಮಾರ್, ಗೋವಿಂದಪ್ಪ, ತಿಮ್ಮಾರೆಡ್ಡಿ, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.</p>.<p>Quote - ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಾಲದಲ್ಲಿ ಪಾವಗಡ ತಾಲ್ಲೂಕಿಗೆ ಆದ್ಯತೆ ನೀಡಲಾಗಿತ್ತು. ತಾಲ್ಲೂಕಿನಲ್ಲಿ 10ಕ್ಕೂ ಹೆಚ್ಚು ಪ್ರೌಢ ಶಾಲೆ ಕೆಎಸ್ಆರ್ಟಿಸಿ ಘಟಕ ಆರಂಭಿಸಲಾಗಿತ್ತು ಕೆ.ಎಂ. ತಿಮ್ಮರಾಯಪ್ಪ ಮಾಜಿ ಶಾಸಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ</strong>: ಮಹಿಳೆಯರು ಚುನಾವಣೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಸಬೇಕು ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.</p>.<p>ಪಟ್ಟಣದಲ್ಲಿ ಮಂಗಳವಾರ ತಾಲ್ಲೂಕು ಜೆಡಿಎಸ್ ಘಟಕ ಆಯೋಜಿಸಿದ್ದ ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಮಾಜದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಬೇಕು. ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಸಬೇಕು. ಪಕ್ಷ ಸಂಘಟನೆಯಲ್ಲಿ ಮಹಿಳೆಯರ ಪಾತ್ರ ಗಣನೀಯ. ಈ ನಿಟ್ಟಿನಲ್ಲಿ ಯುವತಿಯರು, ಸ್ತ್ರೀಯರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.</p>.<p>ತಾಲೂಕಿನ ಅಭಿವೃದ್ಧಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗಿದ್ದ ಕಾಳಜಿಯಿಂದಾಗಿ ತಾಲೂಕಿನಲ್ಲಿರುವ ಸರ್ಕಾರಿ ಬಸ್ ಡಿಪೊ ಆರಂಭವಾಗಿದೆ. ಸಾಕಷ್ಟು ಮೊರಾರ್ಜಿ ವಸತಿ ಶಾಲೆಗಳು ಮಂಜೂರಾಗಿವೆ ಎಂದರು.</p>.<p>ಜನರು ಕಾಂಗ್ರೆಸ್ ಸರ್ಕಾರದ ಬಗ್ಗೆ ಬೇಸರ ಹೊಂದಿದ್ದು, ಮುಂಬರುವ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದರು.</p>.<p>ಜೆಡಿಎಸ್, ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ. ಅಂಜಿನಪ್ಪ , ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಜೆಡಿಎಸ್ ಬಲಪಡಿಸಬೇಕು ಎಂದು ತಿಳಿಸಿದರು.</p>.<p>ಜೆಡಿಎಸ್ ರಾಜ್ಯ ಮಹಿಳಾ ಮಂಡಳಿಯ ಅಧ್ಯಕ್ಷೆ ರಶ್ಮಿಕ, ಮಾಜಿ ಎಂಎಲ್ ಸಿ ತಿಪ್ಪೇಸ್ವಾಮಿ, ತಾಹಿರಾಬಾನು, ಪ್ರಧಾನ ಕಾರ್ಯದರ್ಶಿ ಸೊಗಡು ವಿ ವೆಂಕಟೇಶ್, ಮನು ಮಹೇಶ್, ಅಕ್ಕಲಪ್ಪ ನಾಯ್ಡು, ತಾಲೂಕು ಅಧ್ಯಕ್ಷ ಎನ್ ಎ ಈರಣ್ಣ, ಗೌರವಾಧ್ಯಕ್ಷ ರಾಜಶೇಖರಪ್ಪ, ಕೊತ್ತೂರ್ ನಾಗೇಶ್, ಬಲರಾಮರೆಡ್ಡಿ, ಶಿವಕುಮಾರ್, ಗಂಗಾಧರನಾಯ್ಡು, ಭರತ್ ಕುಮಾರ್, ಗೋವಿಂದಪ್ಪ, ತಿಮ್ಮಾರೆಡ್ಡಿ, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.</p>.<p>Quote - ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಾಲದಲ್ಲಿ ಪಾವಗಡ ತಾಲ್ಲೂಕಿಗೆ ಆದ್ಯತೆ ನೀಡಲಾಗಿತ್ತು. ತಾಲ್ಲೂಕಿನಲ್ಲಿ 10ಕ್ಕೂ ಹೆಚ್ಚು ಪ್ರೌಢ ಶಾಲೆ ಕೆಎಸ್ಆರ್ಟಿಸಿ ಘಟಕ ಆರಂಭಿಸಲಾಗಿತ್ತು ಕೆ.ಎಂ. ತಿಮ್ಮರಾಯಪ್ಪ ಮಾಜಿ ಶಾಸಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>