<p><strong>ತುಮಕೂರು: </strong>‘ಕೈಗಾರಿಕೆಗಳು, ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮಾಲೀಕರು ಅಗತ್ಯ ಸುರಕ್ಷತೆಯನ್ನು ಒದಗಿಸಬೇಕು. ಸುರಕ್ಷತೆ ಒದಗಿಸುವುದು ಮಾಲೀಕರದ್ದೇ ಹೊಣೆ’ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರಾಜೇಂದ್ರ ಬಾದಾಮಿಕರ್ ತಿಳಿಸಿದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಆಶ್ರಯದಲ್ಲಿ ಭೀಮಸಂದ್ರದ ಮೆ.ಶಾಹಿ ಎಕ್ಸ್ಪೋರ್ಟ್ಸ್ ಪ್ರೈವೆಟ್ ಲಿಮಿಟೆಡ್ ಏರ್ಪಡಿಸಿದ್ದ ‘ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಹಾಗೂ ಕಾನೂನು ಅರಿವು- ನೆರವು ಕಾರ್ಯಕ್ರಮ’ ಉದ್ಘಾಟಿಸಿ ಮಾತನಾಡಿದರು.</p>.<p>‘ಕಾರ್ಮಿಕರು ಈ ದೇಶ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಈ ನಿಟ್ಟಿನಲ್ಲಿ ಕಾರ್ಖಾನೆಗಳ ಮಾಲೀಕರು ಪ್ರತಿಯೊಬ್ಬ ಕಾರ್ಮಿಕರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು’ ಎಂದು ಸೂಚಿಸಿದರು.</p>.<p>ಕಾನೂನು ಸೇವಾ ಪ್ರಾಧಿಕಾರದ ಪ್ರಭಾರಿ ಸದಸ್ಯ ಕಾರ್ಯದರ್ಶಿ ಕೆ.ಎಸ್.ರೊಟ್ಟೇರ್ ಮಾತನಾಡಿ, ‘ಕಾರ್ಮಿಕರು ತಮ್ಮ ಹಕ್ಕುಗಳು ಹಾಗೂ ಕಾನೂನು ರೀತಿ ಬರಬೇಕಾದ ಸೌಲಭ್ಯಗಳ ಬಗ್ಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತವಾಗಿ ಕಾನೂನು ಸಲಹೆಗಳನ್ನು ಪಡೆದುಕೊಳ್ಳಬಹುದು’ ಎಂದು ತಿಳಿಸಿದರು.</p>.<p>ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿ ಎಂ.ಮಹದೇವಪ್ಪ ಮಾತನಾಡಿ, ‘ಸರಕು ಸಾಗಣೆ ವಾಹನಗಳಲ್ಲಿ ಕಾರ್ಮಿಕರು ಪ್ರಯಾಣಿಸಬಾರದು’ ಎಂದು ಹೇಳಿದರು.</p>.<p>ಕಾರ್ಮಿಕ ಅಧಿಕಾರಿ ಜಿ.ಟಿ ನಿರಂಜನ್ ಅವರು ಕಾರ್ಮಿಕರಿಗೆ ಒದಗಿಸಬೇಕಾದ ಕನಿಷ್ಠವೇತನ, ಉಪಧನ, ಬಾಲ ಕಾರ್ಮಿಕ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.</p>.<p>ಕಾರ್ಮಿಕ ನಿರೀಕ್ಷಕರಾದ ಜಯಪ್ರಕಾಶ್ ಹಾಗೂ ಭಾರತಿ, ಶಾಹಿ ಎಕ್ಸ್ಪೋರ್ಟ್ನ ಕಲ್ಯಾಣ ಅಧಿಕಾರಿ ಶ್ವೇತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>‘ಕೈಗಾರಿಕೆಗಳು, ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮಾಲೀಕರು ಅಗತ್ಯ ಸುರಕ್ಷತೆಯನ್ನು ಒದಗಿಸಬೇಕು. ಸುರಕ್ಷತೆ ಒದಗಿಸುವುದು ಮಾಲೀಕರದ್ದೇ ಹೊಣೆ’ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರಾಜೇಂದ್ರ ಬಾದಾಮಿಕರ್ ತಿಳಿಸಿದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಆಶ್ರಯದಲ್ಲಿ ಭೀಮಸಂದ್ರದ ಮೆ.ಶಾಹಿ ಎಕ್ಸ್ಪೋರ್ಟ್ಸ್ ಪ್ರೈವೆಟ್ ಲಿಮಿಟೆಡ್ ಏರ್ಪಡಿಸಿದ್ದ ‘ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಹಾಗೂ ಕಾನೂನು ಅರಿವು- ನೆರವು ಕಾರ್ಯಕ್ರಮ’ ಉದ್ಘಾಟಿಸಿ ಮಾತನಾಡಿದರು.</p>.<p>‘ಕಾರ್ಮಿಕರು ಈ ದೇಶ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಈ ನಿಟ್ಟಿನಲ್ಲಿ ಕಾರ್ಖಾನೆಗಳ ಮಾಲೀಕರು ಪ್ರತಿಯೊಬ್ಬ ಕಾರ್ಮಿಕರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು’ ಎಂದು ಸೂಚಿಸಿದರು.</p>.<p>ಕಾನೂನು ಸೇವಾ ಪ್ರಾಧಿಕಾರದ ಪ್ರಭಾರಿ ಸದಸ್ಯ ಕಾರ್ಯದರ್ಶಿ ಕೆ.ಎಸ್.ರೊಟ್ಟೇರ್ ಮಾತನಾಡಿ, ‘ಕಾರ್ಮಿಕರು ತಮ್ಮ ಹಕ್ಕುಗಳು ಹಾಗೂ ಕಾನೂನು ರೀತಿ ಬರಬೇಕಾದ ಸೌಲಭ್ಯಗಳ ಬಗ್ಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತವಾಗಿ ಕಾನೂನು ಸಲಹೆಗಳನ್ನು ಪಡೆದುಕೊಳ್ಳಬಹುದು’ ಎಂದು ತಿಳಿಸಿದರು.</p>.<p>ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿ ಎಂ.ಮಹದೇವಪ್ಪ ಮಾತನಾಡಿ, ‘ಸರಕು ಸಾಗಣೆ ವಾಹನಗಳಲ್ಲಿ ಕಾರ್ಮಿಕರು ಪ್ರಯಾಣಿಸಬಾರದು’ ಎಂದು ಹೇಳಿದರು.</p>.<p>ಕಾರ್ಮಿಕ ಅಧಿಕಾರಿ ಜಿ.ಟಿ ನಿರಂಜನ್ ಅವರು ಕಾರ್ಮಿಕರಿಗೆ ಒದಗಿಸಬೇಕಾದ ಕನಿಷ್ಠವೇತನ, ಉಪಧನ, ಬಾಲ ಕಾರ್ಮಿಕ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.</p>.<p>ಕಾರ್ಮಿಕ ನಿರೀಕ್ಷಕರಾದ ಜಯಪ್ರಕಾಶ್ ಹಾಗೂ ಭಾರತಿ, ಶಾಹಿ ಎಕ್ಸ್ಪೋರ್ಟ್ನ ಕಲ್ಯಾಣ ಅಧಿಕಾರಿ ಶ್ವೇತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>