<p><strong>ತುಮಕೂರು:</strong> ರಾಜ್ಯದ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ಕೇಂದ್ರ ಸರ್ಕಾರ ತನ್ನ ಸುಪರ್ದಿಗೆ ಪಡೆಯುವ ಯೋಜನೆ ರೂಪಿಸುತ್ತಿದ್ದು, ಖಾಸಗಿಯವರಿಗೆ ವಹಿಸಲು ಮುಂದಾಗಿದೆ. ಕಾರ್ಮಿಕರ ಭವಿಷ್ಯವನ್ನು ಅಂಬಾನಿ, ಅದಾನಿ ಕೈಗೆ ಕೊಡುತ್ತೀರಾ? ಎಂದು ಎಐಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಗಿರೀಶ್ ಇಲ್ಲಿ ಶನಿವಾರ ಪ್ರಶ್ನಿಸಿದರು.</p>.<p>ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸೆಸ್ ಹಣವನ್ನು ದುಂದುವೆಚ್ಚ ಮಾಡಲಾಗುತ್ತಿದೆ. ಬೇಡದ ಕಾರ್ಯಕ್ರಮಗಳಿಗೆ ಹೆಚ್ಚಿನ ಹಣ ವ್ಯಯಿಸಲಾಗುತ್ತಿದೆ. ಲ್ಯಾಪ್ಟಾಪ್, ಬಸ್ಪಾಸ್ ವಿತರಣೆ, ಕಾರ್ಮಿಕರ ಆರೋಗ್ಯ ತಪಾಸಣೆಯ ಹೆಸರಲ್ಲಿ ಸಾವಿರಾರು ಕೋಟಿ ಖರ್ಚು ಮಾಡಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>ಜಿಲ್ಲೆಯ ವಿವಿಧೆಡೆ ರೈತರ ಭೂಮಿ ಸ್ವಾಧೀನ ಪಡಿಸಿಕೊಂಡು 30 ವರ್ಷ ಕಳೆದರೂ ಯಾವುದೇ ಅಭಿವೃದ್ಧಿಯಾಗಿಲ್ಲ. ಕೈಗಾರಿಕೆಗಳಲ್ಲಿ ರೈತರ ಮಕ್ಕಳಿಗೆ ಉದ್ಯೋಗ ಕೊಡುತ್ತಿಲ್ಲ. ಇದೀಗ ವಿಮಾನ ನಿಲ್ದಾಣ ನಿರ್ಮಿಸುವ ಮೂಲಕ ರಿಯಲ್ ಎಸ್ಟೇಟ್ ದಂಧೆ ಮಾಡಲು ಹೊರಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಜಮೀನು ಕಳೆದುಕೊಂಡ ರೈತರು ಗುಳೆ ಹೋಗುತ್ತಿದ್ದಾರೆ. ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಕೊಡಬೇಕು. ಪ್ರಧಾನಿ ನರೇಂದ್ರ ಮೋದಿ ಎಚ್ಎಎಎಲ್ ಉದ್ಘಾಟನೆಯ ಸಮಯದಲ್ಲಿ 4 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಿದ್ದರು. ಒಬ್ಬರಿಗೂ ಕೆಲಸ ಸಿಕ್ಕಿಲ್ಲ. ಬೇರೆ ಬೇರೆ ವಿಷಯಗಳಿಂದ ಜನರ ಭಾವನೆ ಕೆರಳಿಸುವುದರ ಬದಲು ಯುವಕರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಎಐಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷ ಕಂಬೇಗೌಡ, ಪದಾಧಿಕಾರಿಗಳಾದ ಅಶ್ವತ್ಥನಾರಾಯಣ, ಗೋವಿಂದರಾಜು, ರವಿಕುಮಾರ್, ರಾಮಕೃಷ್ಣ, ಶಿವಾನಂದ, ದೊಡ್ಡತಿಮ್ಮಯ್ಯ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ರಾಜ್ಯದ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ಕೇಂದ್ರ ಸರ್ಕಾರ ತನ್ನ ಸುಪರ್ದಿಗೆ ಪಡೆಯುವ ಯೋಜನೆ ರೂಪಿಸುತ್ತಿದ್ದು, ಖಾಸಗಿಯವರಿಗೆ ವಹಿಸಲು ಮುಂದಾಗಿದೆ. ಕಾರ್ಮಿಕರ ಭವಿಷ್ಯವನ್ನು ಅಂಬಾನಿ, ಅದಾನಿ ಕೈಗೆ ಕೊಡುತ್ತೀರಾ? ಎಂದು ಎಐಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಗಿರೀಶ್ ಇಲ್ಲಿ ಶನಿವಾರ ಪ್ರಶ್ನಿಸಿದರು.</p>.<p>ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸೆಸ್ ಹಣವನ್ನು ದುಂದುವೆಚ್ಚ ಮಾಡಲಾಗುತ್ತಿದೆ. ಬೇಡದ ಕಾರ್ಯಕ್ರಮಗಳಿಗೆ ಹೆಚ್ಚಿನ ಹಣ ವ್ಯಯಿಸಲಾಗುತ್ತಿದೆ. ಲ್ಯಾಪ್ಟಾಪ್, ಬಸ್ಪಾಸ್ ವಿತರಣೆ, ಕಾರ್ಮಿಕರ ಆರೋಗ್ಯ ತಪಾಸಣೆಯ ಹೆಸರಲ್ಲಿ ಸಾವಿರಾರು ಕೋಟಿ ಖರ್ಚು ಮಾಡಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>ಜಿಲ್ಲೆಯ ವಿವಿಧೆಡೆ ರೈತರ ಭೂಮಿ ಸ್ವಾಧೀನ ಪಡಿಸಿಕೊಂಡು 30 ವರ್ಷ ಕಳೆದರೂ ಯಾವುದೇ ಅಭಿವೃದ್ಧಿಯಾಗಿಲ್ಲ. ಕೈಗಾರಿಕೆಗಳಲ್ಲಿ ರೈತರ ಮಕ್ಕಳಿಗೆ ಉದ್ಯೋಗ ಕೊಡುತ್ತಿಲ್ಲ. ಇದೀಗ ವಿಮಾನ ನಿಲ್ದಾಣ ನಿರ್ಮಿಸುವ ಮೂಲಕ ರಿಯಲ್ ಎಸ್ಟೇಟ್ ದಂಧೆ ಮಾಡಲು ಹೊರಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಜಮೀನು ಕಳೆದುಕೊಂಡ ರೈತರು ಗುಳೆ ಹೋಗುತ್ತಿದ್ದಾರೆ. ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಕೊಡಬೇಕು. ಪ್ರಧಾನಿ ನರೇಂದ್ರ ಮೋದಿ ಎಚ್ಎಎಎಲ್ ಉದ್ಘಾಟನೆಯ ಸಮಯದಲ್ಲಿ 4 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಿದ್ದರು. ಒಬ್ಬರಿಗೂ ಕೆಲಸ ಸಿಕ್ಕಿಲ್ಲ. ಬೇರೆ ಬೇರೆ ವಿಷಯಗಳಿಂದ ಜನರ ಭಾವನೆ ಕೆರಳಿಸುವುದರ ಬದಲು ಯುವಕರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಎಐಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷ ಕಂಬೇಗೌಡ, ಪದಾಧಿಕಾರಿಗಳಾದ ಅಶ್ವತ್ಥನಾರಾಯಣ, ಗೋವಿಂದರಾಜು, ರವಿಕುಮಾರ್, ರಾಮಕೃಷ್ಣ, ಶಿವಾನಂದ, ದೊಡ್ಡತಿಮ್ಮಯ್ಯ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>