<p><strong>ತುಮಕೂರು: </strong>ತುಮಕೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಯೋಗದಲ್ಲಿ ಸಮಾಜಕಾರ್ಯ ಅಧ್ಯಾಪಕರಿಗೆ ಕಾರ್ಯಾಗಾರ ನಡೆಯಿತು.</p>.<p>ಕಾರ್ಯಾಗಾರ ಉದ್ಘಾಟಿಸಿದ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ, ‘ಭಾರತವು 21ನೇ ಶತಮಾನದಲ್ಲಿ ಅತ್ಯಂತ ಉತ್ಕೃಷ್ಟ ಮಾನವ ಸಂಪನ್ಮೂಲವಾದ ವಿದ್ಯಾರ್ಥಿ, ಯುವಶಕ್ತಿಯನ್ನು ಹೊಂದಿದೆ’ ಎಂದರು.</p>.<p>‘ವಿಜ್ಞಾನ, ತಂತ್ರಜ್ಞಾನಕ್ಕೆ ತಕ್ಕಂತೆ ಯುವ ಸಮುದಾಯ ಜ್ಞಾನ ಮತ್ತು ಕೌಶಲ ಹೊಂದುತ್ತಿದೆ. ಅವರ ಬೋಧನೆಗೆ ಪೂರಕವಾಗಿ ಅಧ್ಯಾಪಕರು ಕೂಡ ಉತ್ಕೃಷ್ಟ ಸೃಜನಶೀಲತೆಯ ಜ್ಞಾನ ಕೌಶಲಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ಆ ಮೂಲಕ ಬೋಧನೆಯಲ್ಲಿ ತೊಡಗಿಕೊಂಡು ರಾಷ್ಟ್ರವನ್ನು ಸದೃಢವಾಗಿ ನಿರ್ಮಾಣ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಅಧ್ಯಾಪಕರು ವಿದ್ಯಾರ್ಥಿಗಳೊಡನೆ ಮಾನವ ಸಂಬಂಧಗಳನ್ನು ಶ್ರೀಮಂತಗೊಳಿಸುವ ರೀತಿ ಬೋಧಿಸಬೇಕು. ಸಾಮಾಜಿಕ ಪರಿಸರ ಸೃಷ್ಟಿಸುವ ಸಾಂಸ್ಥಿಕ ವ್ಯವಸ್ಥೆಗಳನ್ನು ಮತ್ತು ನೈತಿಕ ಮೌಲ್ಯಗಳನ್ನು ಗಟ್ಟಿಗೊಳಿಸುವಂತೆ ಪೂರಕ ಶಿಕ್ಷಣವನ್ನು ವಿಶ್ವವಿದ್ಯಾನಿಲಯಗಳು ಕಲ್ಪಿಸಿಕೊಡಬೇಕು ಎಂದು ತಿಳಿಸಿದರು.</p>.<p>ಸಂಪನ್ಮೂಲ ವ್ಯಕ್ತಿಗಳಾದ ಪ್ರೊ.ಎಲ್.ಎಸ್. ಗಾಂಧಿ ದಾಸ್, ಕಾರ್ಯಾಗಾರದಲ್ಲಿ ಸಮಾಜಕಾರ್ಯ ಶಿಕ್ಷಣ ಮತ್ತು ಭವಿಷತ್ತಿನ ಶಿಕ್ಷಣ ಮಾದರಿಗಳನ್ನು ಅಧ್ಯಾಪಕರು ಒಳಗೊಳ್ಳುವಿಕೆ ಬಗ್ಗೆ ಮಾಹಿತಿ ನೀಡಿದರು.</p>.<p>ಕುಲಸಚಿವ ಪ್ರೊ. ಕೆ.ಎನ್.ಗಂಗಾ ನಾಯಕ್, ಸಮಾಜಕಾರ್ಯ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಕೆ.ಜಿ.ಪರಶುರಾಮ, ವಿವಿಧ ಕಾಲೇಜುಗಳ ಸಮಾಜಕಾರ್ಯ ಅಧ್ಯಯನ ವಿಭಾಗದ ಪ್ರಾಂಶುಪಾಲರು, ಅಧ್ಯಾಪಕರು ಹಾಗೂ ಸಂಶೋಧನಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ತುಮಕೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಯೋಗದಲ್ಲಿ ಸಮಾಜಕಾರ್ಯ ಅಧ್ಯಾಪಕರಿಗೆ ಕಾರ್ಯಾಗಾರ ನಡೆಯಿತು.</p>.<p>ಕಾರ್ಯಾಗಾರ ಉದ್ಘಾಟಿಸಿದ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ, ‘ಭಾರತವು 21ನೇ ಶತಮಾನದಲ್ಲಿ ಅತ್ಯಂತ ಉತ್ಕೃಷ್ಟ ಮಾನವ ಸಂಪನ್ಮೂಲವಾದ ವಿದ್ಯಾರ್ಥಿ, ಯುವಶಕ್ತಿಯನ್ನು ಹೊಂದಿದೆ’ ಎಂದರು.</p>.<p>‘ವಿಜ್ಞಾನ, ತಂತ್ರಜ್ಞಾನಕ್ಕೆ ತಕ್ಕಂತೆ ಯುವ ಸಮುದಾಯ ಜ್ಞಾನ ಮತ್ತು ಕೌಶಲ ಹೊಂದುತ್ತಿದೆ. ಅವರ ಬೋಧನೆಗೆ ಪೂರಕವಾಗಿ ಅಧ್ಯಾಪಕರು ಕೂಡ ಉತ್ಕೃಷ್ಟ ಸೃಜನಶೀಲತೆಯ ಜ್ಞಾನ ಕೌಶಲಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ಆ ಮೂಲಕ ಬೋಧನೆಯಲ್ಲಿ ತೊಡಗಿಕೊಂಡು ರಾಷ್ಟ್ರವನ್ನು ಸದೃಢವಾಗಿ ನಿರ್ಮಾಣ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಅಧ್ಯಾಪಕರು ವಿದ್ಯಾರ್ಥಿಗಳೊಡನೆ ಮಾನವ ಸಂಬಂಧಗಳನ್ನು ಶ್ರೀಮಂತಗೊಳಿಸುವ ರೀತಿ ಬೋಧಿಸಬೇಕು. ಸಾಮಾಜಿಕ ಪರಿಸರ ಸೃಷ್ಟಿಸುವ ಸಾಂಸ್ಥಿಕ ವ್ಯವಸ್ಥೆಗಳನ್ನು ಮತ್ತು ನೈತಿಕ ಮೌಲ್ಯಗಳನ್ನು ಗಟ್ಟಿಗೊಳಿಸುವಂತೆ ಪೂರಕ ಶಿಕ್ಷಣವನ್ನು ವಿಶ್ವವಿದ್ಯಾನಿಲಯಗಳು ಕಲ್ಪಿಸಿಕೊಡಬೇಕು ಎಂದು ತಿಳಿಸಿದರು.</p>.<p>ಸಂಪನ್ಮೂಲ ವ್ಯಕ್ತಿಗಳಾದ ಪ್ರೊ.ಎಲ್.ಎಸ್. ಗಾಂಧಿ ದಾಸ್, ಕಾರ್ಯಾಗಾರದಲ್ಲಿ ಸಮಾಜಕಾರ್ಯ ಶಿಕ್ಷಣ ಮತ್ತು ಭವಿಷತ್ತಿನ ಶಿಕ್ಷಣ ಮಾದರಿಗಳನ್ನು ಅಧ್ಯಾಪಕರು ಒಳಗೊಳ್ಳುವಿಕೆ ಬಗ್ಗೆ ಮಾಹಿತಿ ನೀಡಿದರು.</p>.<p>ಕುಲಸಚಿವ ಪ್ರೊ. ಕೆ.ಎನ್.ಗಂಗಾ ನಾಯಕ್, ಸಮಾಜಕಾರ್ಯ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಕೆ.ಜಿ.ಪರಶುರಾಮ, ವಿವಿಧ ಕಾಲೇಜುಗಳ ಸಮಾಜಕಾರ್ಯ ಅಧ್ಯಯನ ವಿಭಾಗದ ಪ್ರಾಂಶುಪಾಲರು, ಅಧ್ಯಾಪಕರು ಹಾಗೂ ಸಂಶೋಧನಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>